ಹುತಾತ್ಮ ಜವಾನ ಹರಿ ಭಾಕರ್ಗೆ ನೂರಾರು ದುಃಖತಪ್ತರ ಶ್ರದ್ಧಾಂಜಲಿ
Team Udayavani, Mar 25, 2019, 11:39 AM IST
ಜೈಪುರ : ಹುತಾತ್ಮ ಜವಾನ ಹರಿ ಭಾಕರ್ ಪಾರ್ಥಿವ ಶರೀರವನ್ನು ಇಂದು ಆತನ ಹುಟ್ಟೂರಾದ ರಾಜಸ್ಥಾನದ ನಾಗೋರ್ನ ಮಾಕ್ರಾನನಾ ಗ್ರಾಮಕ್ಕೆ ತರಲಾಯಿತು. ನೂರಾರು ಮಂದಿ ದುಃಖತಪ್ತರು ಹುತಾತ್ಮ ಭಾಕರ್ ಗೆ ಶ್ರದ್ಧಾಂಜಲಿ ಅರ್ಪಿಸಿದರು.
ಜವಾನ್ ಭಾಕರ್ ಅವರು ಕಳೆದ ಮಾರ್ಚ್ 23ರಂದು ಕಾಶ್ಮೀರದ ಪೂಂಚ್ ನಲ್ಲಿ ಪಾಕ್ ಪಡೆಗಳಿಂದ ಭಾನುವಾರ ಬೆಳಗ್ಗೆ 4 ಗಂಟೆಯ ವೇಳಗೆ ನಡೆದಿದ್ದ ಕದನ ವಿರಾಮ ಉಲ್ಲಂಘನೆಯ ವೇಳೆ ತೀವ್ರ ಗುಂಡೇಟು ಪಡೆದಿದ್ದರು. ಒಡನೆಯೇ ಅವರನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು.
ಪಾಕ್ ಪಡೆಗಳು ಕಳೆದ ಶನಿವಾರ ಸಂಜೆ 5.30ರ ಸುಮಾರಿಗೆ ಪೂಂಚ್ ಜಿಲ್ಲೆಯ ಶಾಪುರ ಮತ್ತು ಕೇರ್ನಿ ಗಡಿ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆಗೈದು ಆರಂಭಿಸಿದ್ದ ಗುಂಡಿನ ದಾಳಿ ರಾತ್ರಿ ಪೂರ್ತಿ ನಡೆದು ಮರುದಿನ ಭಾನುವಾರ ನಸುಕಿನ ವೇಳೆ ತನಕವೂ ಮುಂದುವರಿದಿತ್ತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸೋಮವಾರ ಭಾಕರ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರ ಗ್ರಾಮದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ