ಮೋದಿ ಅಲೆ ಮೇಲೆ ಮತ್ತೆ ಸುರೇಶ ಜಯದ ಅಂಗಡಿ

ಕಮಲ ಕಮಾಲು; ಗೆಲುವಿನ ಗುಲಾಲು

Team Udayavani, May 24, 2019, 6:00 AM IST

BNG_SPECIAL-PAGE_10

ಬೆಳಗಾವಿ: ಕಾಂಗ್ರೆಸ್‌ ಪಕ್ಷದ ಒಳಜಗಳ, ಅಸಮಾಧಾನದ ಲಾಭ ಪಡೆದು ಮತ್ತೂಮ್ಮೆ ಮೋದಿ ಅಲೆಯ ಮೇಲೆ ಸವಾರಿ ಮಾಡುತ್ತ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ನಾಲ್ಕನೇ ಬಾರಿಗೆ ಜಯದ ದಡ ಸೇರಿದ್ದಾರೆ.

ಕೊನೆಯ ಕ್ಷಣದಲ್ಲಿ ಕಾಂಗ್ರೆಸ್‌ ಕಣಕ್ಕಿಳಿಸಿದ ದುರ್ಬಲ ಅಭ್ಯರ್ಥಿ ವಿರುದಟಛಿ ಜಯ ಸುರೇಶ ಅಂಗಡಿಗೆ ಇನ್ನೂ ಸುಲಭವಾಯಿತು. ಸದಾ ಅದೃಷ್ಟವನ್ನು ಕೈಯಲ್ಲೇಹಿಡಿದುಕೊಂಡು ಬಂದಿರುವ ಸುರೇಶ ಅಂಗಡಿ ಸತತ ನಾಲ್ಕನೇ
ಬಾರಿಗೆ ಜ ಯದ ನಗೆ ಬೀರಿ ಮಾಜಿ ಸಂಸದ ಸಿದ್ನಾಳ ಅವರ ದಾಖಲೆ ಸರಿಗಟ್ಟಿದ್ದಾರೆ. ಐದು ವರ್ಷಗಳ ಹಿಂದಿನ ಮತ್ತು ಈಗಿನ ಲೋಕಸಭೆ ಚುನಾವಣೆಯಲ್ಲಿ ಸರ್ಕಾರಗಳ ಸಾಧನೆಗಿಂತ ಆಡಳಿತ ಪಕ್ಷದ ಪರ ಅಲೆಯೇ ಹೆಚ್ಚು ಕೆಲಸ ಮಾಡಿದೆ. ಇದರ ಜೊತೆಗೆ ಜಾತಿ ಹಾಗೂ ಹೊಂದಾಣಿಕೆ ರಾಜಕಾರಣ ಮತ್ತೂಮ್ಮೆ ಈ ಚುನಾವಣೆಯಲ್ಲಿ ತನ್ನ ಪ್ರಭಾವ ತೋರಿಸಿದೆ.

2014 ಹಾಗೂ 2019ರ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯೇ ಮತದಾರರ ಮೇಲೆ ಗಾಢ ಪರಿಣಾಮ
ಬೀರಿದ್ದು ವಿಶೇಷ.

2004ರಲ್ಲಿ ವಾಜಪೇಯಿ, 2009ರಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪ್ರಭಾವ ಅಭ್ಯರ್ಥಿಗಳ ನೆರವಿಗೆ ಬಂದಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಈ ಬಾರಿಯ ಚುನಾವಣೆಯಲ್ಲಿ ಸುರೇಶ ಅಂಗಡಿ ನಿರೀಕ್ಷೆ ಮಾಡಿದಂತೆ ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಆದರೆ ಸುರೇಶ ಅಂಗಡಿ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಆತಂಕಗಳನ್ನು ಎದುರಿಸಬೇಕಾಯಿತು.

ಟಿಕೆಟ್‌ ತಪ್ಪಿಸುವಲ್ಲಿ ಅನೇಕರು ಪ್ರಯತ್ನ ಮಾಡಿದರು. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದಟಛಿ ಪ್ರಚಾರ ಸಹ ಮಾಡಿದ್ದರು. ಆದರೆ ಅಂಗಡಿ ಅಡೆತಡೆ ಮೀರಿ ಗೆದ್ದು ಬಂದರು. ಈ ಚುನಾವಣೆಯಲ್ಲಿ ಸುರೇಶ ಅಂಗಡಿ ಗೆಲುವಿಗೆ ಸಹಕಾರಿಯಾಗಿದ್ದ ಇನ್ನೊಂದು ಅಂಶ ಎಂದರೆ ಕಾಂಗ್ರೆಸ್‌ನಿಂದ ದುರ್ಬಲ ಅಭ್ಯರ್ಥಿ ಸಾಧುನವರ ಕಣದಲ್ಲಿದ್ದರು. ಕಡೆಯ
ಸಮಯದವರೆಗೆ ಯಾರಿಗೆ ಟಿಕೆಟ್‌ ಎಂಬ ಕುತೂಹಲದಲ್ಲೇ ಕಾಂಗ್ರೆಸ್‌ ಕಾಲ ಕಳೆಯಿತು. ಕೊನೆಗೆ ಕ್ಷೇತ್ರದಲ್ಲಿ ಅಷ್ಟಾಗಿ ಪರಿಚಯ ಇರದ ಡಾ.ವಿ.ಎಸ್‌.ಸಾಧುನವರ ಅವರಿಗೆ ಟಿಕೆಟ್‌ ನೀಡಿತು. ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಲಕ್ಷ್ಮೀ ಹೆಬ್ಟಾಳಕರ ಅವರ ವಿರುದಟಛಿ ಸಾಕಷ್ಟು ಪ್ರಯಾಸಪಟ್ಟು 75 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಸುರೇಶ ಅಂಗಡಿ ಈ ಬಾರಿ ಎರಡು ಲಕ್ಷಗಳ ಮತಗಳ ಅಂತರದಿಂದ ಜಯ ಪಡೆದರು.

ಕಾಂಗ್ರೆಸ್‌ನಲ್ಲಿನ ಅಸಮಾಧಾನ ಹಾಗೂ ಒಗ್ಗಟ್ಟಿನ ಕೊರತೆಯ
ಲಾಭ ಅಂಗಡಿ ಪಾಲಾಯಿತು.

ಮೋದಿ ಮತ್ತೂಮ್ಮೆ ಪ್ರಧಾನಿ ಮಾಡಬೇಕು ಎಂದು ಜನ
ನಿರ್ಧರಿಸಿದ್ದಾರೆ. ಅದಕ್ಕೆ ಈಗ ಬಂದಿರುವ ಅಭೂತ ಪೂರ್ವ
ಫಲಿತಾಂಶವೇ ಸಾಕ್ಷಿ. ಚುನಾವಣೆಯಲ್ಲಿ ನನಗೆ ಪûಾತೀತವಾಗಿ ಬೆಂಬಲ ಸಿಕ್ಕಿದ್ದು, ಹೆಚ್ಚಿನ ಮತಗಳ ಅಂತರದ ಗೆಲುವು ನನ್ನದಾಗಿದೆ.
– ಸುರೇಶ ಅಂಗಡಿ, ಬಿಜೆಪಿ ವಿಜೇತ ಅಭ್ಯರ್ಥಿ

ನಾನು ಜಯದ ನಿರೀಕ್ಷೆ ಮಾಡಿದ್ದೆ. ಎಲ್ಲ ಕ್ಷೇತ್ರದಲ್ಲೂ ಒಳ್ಳೆಯ ಬೆಂಬಲ ಸಿಕ್ಕಿತ್ತು. ಮತದಾರರ ತೀರ್ಪಿಗೆ ನಾನು ಬದಟಛಿ. ನಮ್ಮಲ್ಲಿ ಯಾವುದೇ ಭಿನ್ನಮತ ಇರಲಿಲ್ಲ.ಚುನಾವಣೆಯ ಸೋಲಿನ ಬಗ್ಗೆ ಆಲೋಚನೆ ಮಾಡುತ್ತೇನೆ.
– ಡಾ.ವಿ.ಎಸ್‌.ಸಾಧುನವರ,
ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ

ಗೆಲುವಿಗೆ 3 ಕಾರಣ
– 8 ವಿಧಾನಸಭಾ ಕ್ಷೇತ್ರದಲ್ಲೂ ಪ್ರಧಾನಿ ನರೇಂದ್ರ ಮೋದಿ
ಅಲೆ ಪ್ರಬಲವಾಗಿದ್ದು
– ಅಭ್ಯರ್ಥಿ ಘೋಷಣೆ ಮೊದಲೇ ಬಿಜೆಪಿ ಕಾರ್ಯಕರ್ತರ ವ್ಯವಸ್ಥಿತ ಹಾಗೂ ಕರಾರುವಾಕ್‌ ಪ್ರಚಾರ
– ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿದ್ದು

ಸೋಲಿಗೆ 3 ಕಾರಣ
– ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ತಿಕ್ಕಾಟ, ಕಾರ್ಯಕರ್ತರನ್ನು
ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ
– ಪ್ರಚಾರಕ್ಕೆ ಬಾರದ ಕಾಂಗ್ರೆಸ್‌ ನಾಯಕರು. ದೂರ ಉಳಿದ ಜೆಡಿಎಸ್‌ ಮುಖಂಡರು
– ಮತದಾರರಿಗೆ ಮೈತ್ರಿ ಅಭ್ಯರ್ಥಿ ಡಾ.ವಿ.ಎಸ್‌. ಸಾಧುನವರ ಪರಿಚಯವಿಲ್ಲದೇ ಇರುವುದು

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.