‘ಬಿಜೆಪಿಗೆ ಆತುರ ಇರಬಹುದು, ನನಗಿಲ್ಲ’

ಇಂದಿನ ರಾಜಕೀಯ ಪರಿಸ್ಥಿತಿಗೆ ಕಾರಣ ಏನೆಂದು ಜನರ ಮುಂದಿಡುತ್ತೇನೆ: ಸಿಎಂ

Team Udayavani, Jul 19, 2019, 5:00 AM IST

180719kpn7424

ಬೆಂಗಳೂರು: ‘ವಿಶ್ವಾಸಮತ ಕುರಿತು ನಿಮಗೆ (ಬಿಜೆಪಿ) ಆತುರ ಇರಬಹುದು. ಆದರೆ, ನನಗೆ ಯಾವುದೇ ಆತುರ ಇಲ್ಲ. ನಾನು ಅಧಿಕಾರದಲ್ಲಿ ಶಾಶ್ವತವಾಗಿ ಗೂಟ ಹೊಡೆದು ಕೊಂಡು ಕುಳಿತಿರುತ್ತೇನೆ ಅಂದು ಕೊಂಡೂ ಇಲ್ಲ. ಆದರೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಇಂತಹ ಪರಿಸ್ಥಿತಿಗೆ ಕಾರಣಗಳ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕಾಗಿದೆ’ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಶ್ವಾಸಮತ ಯಾಚನೆ ನಿರ್ಣಯ ಮಂಡಿಸಿ ಮಾತನಾಡಿದ ಅವರು, ಈ ಅಧಿಕಾರ ಶಾಶ್ವತ ಎಂದು ನಾನು ಅಂದುಕೊಂಡಿಲ್ಲ, ಆದರೆ, 14 ತಿಂಗಳಲ್ಲಿ ಸರ್ಕಾರ ಪತನಕ್ಕೆ ಸಾಕಷ್ಟು ಪ್ರಯತ್ನಗಳು ನಡೆದವು. ಯಾರ್ಯಾರು, ಏನೇನು ಮಾಡಿದರು ಎಂಬುದು ನಾನು ಸದನದ ಮೂಲಕ ತಿಳಿಸಬೇಕಾಗಿದೆ ಎಂದು ತಿಳಿಸಿದರು. ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿರುವ ಶಾಸಕರು, ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ, ಐಎಂಎ ಹಗರಣ, ಜಿಂದಾಲ್ಗೆ ಭೂಮಿ ಪರಭಾರೆ ಮತ್ತಿತರ ವಿಚಾರ ಪ್ರಸ್ತಾಪಿಸಿದ್ದಾರೆ. ಆ ಎಲ್ಲದಕ್ಕೂ ನಾನು ಉತ್ತರ ಕೊಡಬೇಕಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು, ಶಾಸಕರ ಬಗ್ಗೆ ಜನಸಾಮಾನ್ಯರಲ್ಲಿ ಅಸಹ್ಯ ಭಾವನೆ ಮೂಡಿಸಿದೆ. ನಾನೂ ಸೇರಿ ಇಲ್ಲಿರುವ ಸ್ನೇಹಿತರು ಇನ್ನೂ ಮಾನ ಮರ್ಯಾದೆ ಇಟ್ಟು ಕೊಂಡು ಬದುಕುತ್ತಿದ್ದೇವೆ. ಏಳೆಂಟು ದಿನಗಳಿಂದ ನಡೆಯು ತ್ತಿರುವ ವಿದ್ಯಮಾನಗಳು ಸಾಕಷ್ಟು ಚರ್ಚೆಯಾಗುತ್ತಿವೆ. ಈ ಹಂತದಲ್ಲಿ ದೇಶ ನಮ್ಮನ್ನು ಗಮನಿಸುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದಾಗ ಕಲಬೆರಕೆ ಸರ್ಕಾರ ಬೇಕಾ, ಬಲಿಷ್ಠ ಸರ್ಕಾರ ಬೇಕಾ ಎಂದು ಕೇಳಿದ್ದರು. ಆ ನಂತರ ರಾಜ್ಯದಲ್ಲಿ ನಡೆದ ಘಟನೆಗಳನ್ನು ನೋಡುತ್ತಿದ್ದೇವೆ. ಇದೆಲ್ಲರ ಬಗ್ಗೆ ಚರ್ಚೆ ಮಾಡದೆ ವಿಶ್ವಾಸಮತ ಕೇಳಿ ಹೋದರೆ ನಮ್ಮ ಮೇಲೆ ಶಂಕೆ ಹಾಗೆಯೆ ಉಳಿಯುತ್ತದೆ. ಹೀಗಾಗಿ, ರಾಜ್ಯದ ಜನರಿಗೆ ನಾನು ಸ್ಪಷ್ಟನೆ ಕೊಡಬೇಕಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ನಾಯಕರು ಸಾಕಷ್ಟು ಪ್ರವಾಸ ಮಾಡಿ ಬಂದಿದ್ದಾರೆ. ಆ ವಿಚಾರದಲ್ಲಿ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನೂ ನಾನು ತಿಳಿಸಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕು ನಾಟಕ ದೇಶದ ಜನತೆಗೆ ಗೊತ್ತಾಗಬೇಕು ಎಂದು ಹೇಳಿದರು.

ಈ ಸದನ ದೇವರಾಜ ಅರಸು ಅವರಂತಹ ನಾಯಕರನ್ನು ಕಂಡಿದೆ. ಅವರು ಎಂಟು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ಅವರು ಮುಖ್ಯಮಂತ್ರಿಯಾಗಿದ್ದಾಗ ನಾವು ಆಟ ಆಡೋ ಮಕ್ಕಳು. ಅಲ್ಲಿಂದ ಪ್ರಾರಂಭವಾಗಿ ರಾಮಕೃಷ್ಣ ಹೆಗಡೆ ಸಹಿತ ಸಾಕಷ್ಟು ನಾಯಕರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷಾಂತರ ವಿಚಾರ ಬಂದಾಗ ಒಂದು ಕಾಯ್ದೆಯನ್ನೂ ಮಾಡಿದ್ದಾರೆ. ಅದಕ್ಕೆ ಮಹತ್ವವೂ ಇದೆ. ಶಾಸಕರು ಒಂದು ಪಕ್ಷದಿಂದ ಚಿಹ್ನೆಯಡಿ ಗೆದ್ದು ಬೇರೆ ಪಕ್ಷಕ್ಕೆ ಹೋಗುವುದು, ವಾಮ ಮಾರ್ಗದಲ್ಲಿ ಸರ್ಕಾರ ಪತನಗೊಳಿಸಲು ಯತ್ನಿಸುವುದು ಇವೆಲ್ಲವೂ ಪ್ರಜಾಪ್ತಭುತ್ವಕ್ಕೆ ಮಾರಕವಾಗುವ ಬೆಳವಣಿಗೆಗಳು ಎಂದು ತಿಳಿಸಿದರು.

ಸಿದ್ಧತೆ ಮಾಡಿಕೊಂಡೇ ಬಂದಿದ್ದ ಎಚ್‌ಡಿಕೆ
ವಿಶ್ವಾಸಮತ ಯಾಚನೆ ನಿರ್ಣಯ ಮಂಡನೆ ಮೇಲೆ ಸುದೀರ್ಘ‌ವಾಗಿ ಮಾತನಾಡಲು ಸಿದ್ಧತೆ ಮಾಡಿಕೊಂಡೇ ಬಂದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಹಿಂದಿನ ಜೆಡಿಎಸ್‌-ಬಿಜೆಪಿ ಸರ್ಕಾರ, ಆ ನಂತರದ ಬಿಜೆಪಿ ಸರ್ಕಾರದಲ್ಲಿ ಆದ ಬೆಳವಣಿಗೆಗಳ ಕ್ಲಿಪಿಂಗ್ಸ್‌ ಸಮೇತ ಬಂದಿದ್ದರು. ಇದಕ್ಕಾಗಿ ಎರಡು ದಿನಗಳಿಂದ ಮಾಹಿತಿ ಸಂಗ್ರಹಿಸಿ ದಾಖಲೆ ಮಾಡಿಟ್ಟುಕೊಂಡಿದ್ದರು. ಕಡತದ ಜತೆಯೇ ಸದನಕ್ಕೆ ಆಗಮಿಸಿದ್ದರು. ಇದರ ನಡುವೆ, ರಾಜ್ಯಪಾಲರಿಂದ ಸ್ಪೀಕರ್‌ಗೆ ಸಂದೇಶ ಬಂದಾಗ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶಾಸಕರೊಬ್ಬರ ಮೂಲಕ ರಾಜ್ಯಪಾಲರಿಗೆ ಸ್ಪೀಕರ್‌ಗೆ ನಿರ್ದೇಶನ ನೀಡುವ ಅಧಿಕಾರ ಇಲ್ಲ ಎಂದು ಚೀಟಿಯಲ್ಲಿ ಬರೆದು ಮುಖ್ಯಮಂತ್ರಿಯವರಿಗೆ ತಲುಪಿಸಿದರು ಎಂದು ಹೇಳಲಾಗಿದೆ.


ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.