ಮಾನವ ರಹಿತ ಡ್ರೋನ್‌ ಮಾದರಿ ವಿಮಾನ ಪತನ


Team Udayavani, Sep 18, 2019, 5:38 AM IST

patana

ನಾಯಕನಹಟ್ಟಿ (ಚಿತ್ರದುರ್ಗ): ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸುತ್ತಿರುವ ಮಾನವ ರಹಿತ ಡ್ರೋನ್‌ ಮಾದರಿ ವಿಮಾನ ತಾಂತ್ರಿಕ ದೋಷದಿಂದ ನೆಲಕ್ಕಪ್ಪಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿಚಿಕ್ಕೇನಹಳ್ಳಿಯಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ 6.30ರ ಸುಮಾರಿಗೆ ಡಿಆರ್‌ಡಿಒ ರನ್‌ವೇಯಿಂದ ಪರೀûಾರ್ಥ ಹಾರಾಟ ನಡೆಸುತ್ತಿದ್ದ ವಿಮಾನವು 15 ನಿಮಿಷಗಳ ಅಂತರದಲ್ಲೇ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನ ರಾಡಾರ್‌ನಿಂದ ಸಂಪರ್ಕ ಕಡಿದುಕೊಂಡು ನೆಲಕ್ಕೆ ಅಪ್ಪಳಿಸಿತು.

ತಪಸ್‌-4 ಎಡಿಇ 19 ಎಂದು ಬರೆಯ ಲಾಗಿರುವ ವಿಮಾನ ಚಳ್ಳಕೆರೆ ತಾಲೂಕಿನ ಕುದಾಪುರ ಡಿಆರ್‌ಡಿಒ ಕೇಂದ್ರದಿಂದ ಹೊರಟು ಹಾಸನದ ವಾಯುನೆಲೆಯವರೆಗೆ ಹೋಗಿ ಬರಬೇಕಿತ್ತು ಎನ್ನಲಾಗಿದ್ದು, ಡಿಆರ್‌ಡಿಒ ಕೇಂದ್ರದಿಂದ 17 ಕಿ.ಮೀ. ದೂರದಲ್ಲೇ ಪತನವಾಗಿದೆ.

ಗಿರಕಿ ಹೊಡೆದು ಬಿತ್ತು
ನಸುಕಿನ ಜಾವ ಭಾರೀ ಸದ್ದಿನೊಂದಿಗೆ ಹಾರಿ ಬಂದ ಡ್ರೋನ್‌ ಮಾದರಿಯ ರುಸ್ತುಂ 2 ವಿಮಾನವನ್ನು ಜೋಡಿಚಿಕ್ಕೇನಹಳ್ಳಿ ಗ್ರಾಮಸ್ಥರು ಕಂಡರು. ಆಗಸದಲ್ಲೇ ಗಿರಕಿ ಹೊಡೆ ಯುವು ದನ್ನು ನೋಡಿ ತತ್‌ಕ್ಷಣ ವೀಡಿಯೋ ಕೂಡ ಮಾಡಿದ್ದಾರೆ. ನೋಡ ನೋಡು  ತ್ತಿದ್ದಂತೆ ವಿಮಾನ ಭಾರೀ ಸದ್ದಿ ನೊಂದಿಗೆ ಬಿದ್ದಿದೆ. ಈ ವೇಳೆ ಆತಂಕಗೊಂಡ ನೂರಾರು ಗ್ರಾಮಸ್ಥರು ವಿಮಾನದ ಹತ್ತಿರ ಬಂದು ಅದರಲ್ಲಿ ಯಾರಾದರೂ ಇದ್ದಾರೆಯೇ ಎಂದು ಹುಡುಕಾಡಿದರು. ಬರೀ ವೈರ್‌ಗಳು, ಯಂತ್ರಗಳನ್ನಷ್ಟೇ ಕಂಡಾಗ ಸಮಾ ಧಾನಗೊಂಡರು.

ಸೆಲ್ಫಿ ತೆಗೆದ ಜನ
ಮೊದಲ ಬಾರಿ ಇಂಥದ್ದೊಂದು ವಿಮಾನವನ್ನು ಕಂಡ ಹಳ್ಳಿಯ ಜನರು ವಿಮಾನದ ಮೇಲೆ ಹತ್ತಿ ಓಡಾಡಿದರು. ಸೆಲ್ಫಿ ತೆಗೆದುಕೊಂಡು ವೀಡಿಯೋ ಮಾಡಿದರು. ಚಿತ್ರದುರ್ಗ ಎಸ್ಪಿ ಡಾ| ಕೆ. ಅರುಣ್‌ ಹಾಗೂ ಚಳ್ಳಕೆರೆ ಪೊಲೀಸರು ಘಟನ ಸ್ಥಳಕ್ಕೆ ದೌಡಾಯಿಸಿ ಅಲ್ಲಿದ್ದ ಜನರನ್ನು ಚದುರಿಸಿದರು.

ಲಾರಿಯಲ್ಲಿ ಅವಶೇಷ
ವಿಮಾನ ಪತನಗೊಂಡ ಜಾಗ ಹುಡುಕಿಕೊಂಡು ಸ್ಥಳಕ್ಕೆ ಬಂದ ಡಿಆರ್‌ಡಿಒ ಅಧಿಕಾರಿಗಳು, ಎಂಜಿನಿಯರ್‌ಗಳು ಹಾಗೂ ಮಿಲಿಟರಿಯವರು ಇಡೀ ಪ್ರದೇಶ ಸುತ್ತುವರಿದು ಅಲ್ಲಿದ್ದ ಜನರಿಗೆ ಪ್ರವೇಶ ನಿರ್ಬಂಧಿ ಸಿದರು. ಕೆಲವೇ ಹೊತ್ತಿನಲ್ಲಿ ಇಡೀ ವಿಮಾನವನ್ನು ಬಿಚ್ಚಿ ಅದರ ಅವಶೇಷಗಳನ್ನು ಎರಡು ಲಾರಿಗಳಲ್ಲಿ ಡಿಆರ್‌ಡಿಒ ಕೇಂದ್ರಕ್ಕೆ ಸಾಗಿಸಿದರು.

ಮಾಹಿತಿ ನೀಡಲಿಲ್ಲ
ಪತನವಾದ ವಿಮಾನ ಕುರಿತು ಡಿಆರ್‌ಡಿಒ ಅಧಿಕಾರಿಗಳನ್ನು ಪ್ರಶ್ನಿಸಿದಾಗ ವಿಷಮ ವಾತಾವರಣ ಕಾರಣಕ್ಕೆ ಸಂಪರ್ಕ ಕಳೆದುಕೊಂಡು ಪತನವಾಗಿದೆ ಎಂದಷ್ಟೇ ಹೇಳಿದ ಅವರು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.