ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ತೇನೆ
ನಾಯಕರ ಪ್ರತಿಷ್ಠೆಯ ತೀರ್ಮಾನಗಳಿಂದ ಹಿನ್ನಡೆಯಾಗಿದೆ: ದಿನೇಶ್
Team Udayavani, May 25, 2019, 6:02 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೀನಾಯ ಸೋಲು ಕಂಡಿರುವುದರಿಂದ ಕಾಂಗ್ರೆಸ್ ಸಾಕಷ್ಟು ಮುಜುಗರ ಎದುರಿಸುವಂತಾಗಿದ್ದು, ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿರುವುದಾಗಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಚುನಾವಣೆಯ ಫಲಿತಾಂಶ, ಕಾಂಗ್ರೆಸ್ ಪಕ್ಷ ಮತ್ತು ಮೈತ್ರಿ ಸರ್ಕಾರದ ಮೇಲೆ ಬೀರಿರುವ ಪರಿಣಾಮ ಹಾಗೂ ಮುಂದಿನ ಪಕ್ಷದ ಕಾರ್ಯ ಚಟುವಟಿಕೆಯ ಬಗ್ಗೆ ‘ಉದಯವಾಣಿ’ ಯೊಂದಿಗೆ ಮಾತನಾಡಿದ್ದಾರೆ.
ಚುನಾವಣೆ ಫಲಿತಾಂಶದಿಂದ ಮೈತ್ರಿಗೆ ಹಿನ್ನಡೆಯಾಯ್ತು ಅನಿಸುತ್ತಾ ?
ಒಂದು ರೀತಿಯಲ್ಲಿ ಈ ಚುನಾವಣೆಯಲ್ಲಿ ನಾವು ಮೊದಲೇ ಹೊಂದಾಣಿಕೆ ಮಾಡಿಕೊಂಡಿ ದ್ದರೆ, ಒಳ್ಳೆಯ ಫಲಿತಾಂಶ ತರಬಹುದಿತ್ತು. ಎರಡೂ ಪಕ್ಷಗಳಿಂದ ಲೋಪವಾಗಿದೆ ಎಂದು ನಮಗೆ ಈಗ ಅರಿವಾಗಿದೆ. ಕೆಲವು ಪ್ರತಿಷ್ಠೆಗೆ ತೆಗೆದುಕೊಂಡ ತೀರ್ಮಾನ ದಿಂದ ಈ ರೀತಿಯ ಹಿನ್ನಡೆಯಾಗಿದೆ ಎಂದು ಅನಿಸಿದೆ. ಮುಂದಿನ ದಿನಗಳಲ್ಲಿ ಹೊಂದಾಣಿಕೆ ಯಿಂದ ಕೆಲಸ ಮಾಡಲು ತೀರ್ಮಾನಿಸಿದ್ದೇವೆ.
ಮುಖ್ಯಮಂತ್ರಿ ಬದಲಾವಣೆಗೆ ಪ್ರಯತ್ನ ನಡೆಸಿದ್ದೀರಾ ?
ಆ ರೀತಿಯ ಯಾವುದೇ ಬದಲಾವಣೆಯಿಲ್ಲ. ನಿನ್ನೆ ರಾತ್ರಿಯೇ ಮುಖ್ಯಮಂತ್ರಿ ಹಾಗೂ ದೇವೇಗೌಡರನ್ನು ಭೇಟಿ ಮಾಡಿ ಸಂಪೂರ್ಣ ಬೆಂಬಲ ಸೂಚಿಸಿದ್ದೇವೆ. ಇವತ್ತು ಕೂಡ ಸಭೆ ಸೇರಿ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಐದು ವರ್ಷ ಅವರೇ ಮುಂದುವರಿಯುತ್ತಾರೆ.
ಈ ಫಲಿತಾಂಶಕ್ಕೆ ನಿಮ್ಮ ನಾಯಕರ ಗೊಂದಲದ ಹೇಳಿಕೆಗಳೇ ಕಾರಣವಾಯ್ತು ಅನಿಸ್ತಾ?
ಅವುಗಳನ್ನು ನಾವು ತಡೆಯಬಹುದಿತ್ತು. ಎರಡೂ ಕಡೆಯಿಂದ ತಡೆಯಲು ಅವಕಾಶ ಇತ್ತು. ನಾವು ಸ್ವಲ್ಪ ಯಶಸ್ವಿಯಾಗಿ ಕೋಆರ್ಡಿನೇಷನ್ ಮಾಡಲು ಆಗಲಿಲ್ಲ. ಇಂದು ಸಚಿವರ ಸಭೆಯಲ್ಲಿ ಅದರ ಬಗ್ಗೆ ಚರ್ಚಿಸಿ, ರಾಜಕೀಯವಾಗಿ ಯಾರೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ. ಸಚಿವರ ಸಭೆಯಲ್ಲಿಯೂ ಸಿಎಂ ಅದನ್ನೇ ಹೇಳಿದ್ದಾರೆ. ಯಾರಾದರೂ ಅನಗತ್ಯ ಹೇಳಿಕೆ ನೀಡಿದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ.
ಮೈತ್ರಿಯಿಂದ ಕಾಂಗ್ರೆಸ್ಗೆ ನಷ್ಟವಾಗಿದೆ ಎಂದು ಶಾಸಕರು ಹೇಳುತ್ತಿದ್ದಾರಲ್ಲಾ ?
ದೇಶದ ಎಲ್ಲ ರಾಜ್ಯಗಳಲ್ಲಿಯೂ ಕಾಂಗ್ರೆಸ್ಗೆ ಸೋಲಾಗಿದೆ. ಮೈತ್ರಿಯಿಂದಲೇ ಸೋಲಾಯಿತು ಎನ್ನುವುದು ಸರಿಯಲ್ಲ. ಈ ಬಗ್ಗೆ ಅದರ ವಿಶ್ಲೇಷಣೆ ಸರಿಯಲ್ಲ
ಬಿಜೆಪಿಯವರು ಮೈತ್ರಿ ಸರ್ಕಾರ ಉರುಳಿಸಲು ಪ್ರಯತ್ನ ನಡೆಸಿದ್ದಾರಲ್ಲಾ ?
ಕಳೆದ ಒಂದು ವರ್ಷದಿಂದ ಬಿಜೆಪಿಯವರು ಈ ಪ್ರಯತ್ನ ನಡೆಸಿದ್ದಾರೆ. ಹೇಗಾದರೂ ಮಾಡಿ ಅಧಿಕಾರ ಹಿಡಿಬೇಕು ಎನ್ನುವುದು ಅವರ ಅಜೆಂಡಾ. ಈಗಲೂ ಆಪರೇಷನ್ ಕಮಲ ಮಾಡುವ ಪ್ರಯತ್ನ ನಡೆಸುತ್ತಾರೆ. ಸರ್ಕಾರ ಬೀಳಿಸಲು ಕುದುರೆ ವ್ಯಾಪಾರ ಮಾಡಲು ಕಸರತ್ತು ನಡೆಸುತ್ತಾರೆ. ಆದರೆ, ನಾವು ಹೆಚ್ಚು ಸಮನ್ವಯತೆಯಿಂದ ಕೆಲಸ ಮಾಡಿ, ಅವರ ಆಪರೇಷನ್ ಕಮಲಕ್ಕೆ ಅವಕಾಶ ಕೊಡಬಾರದು ಎಂಬ ತೀರ್ಮಾನ ಕೈಗೊಂಡಿದ್ದೇವೆ. ಅದನ್ನು ಎದುರಿಸುವ ಶಕ್ತಿ ನಮಗೆ ಇದೆ.
ಮುಂದಿನ ಚುನಾವಣೆಗಳಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಚರ್ಚೆಯಾಗಿದೆಯಾ?
ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ.
ನೀವು ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೀರಾ ?
ಹೌದು, ಈ ಚುನಾವಣೆಯ ಸಂಪೂರ್ಣ ಜವಾಬ್ದಾರಿ ನಾನು ಹೊರಬೇಕಾಗುತ್ತದೆ. ನಾನು ಅಧ್ಯಕ್ಷನಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಕಳುಹಿಸುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!