Bigg Boss: ಹಿಂದಿ ಬಿಗ್‌ ಬಾಸ್‌ ಶೋಗೆ ಬೀದರ್‌ ಯುವಕ!

- ಸಲ್ಮಾನ್‌ಖಾನ್‌ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಅರುಣ ಮಾಶೆಟ್ಟಿಗೆ ಅವಕಾಶ

Team Udayavani, Oct 19, 2023, 7:09 PM IST

mashetty

ಬೀದರ್‌: ಹಿಂದಿ ಕಲರ್ ವಾಹಿನಿಯಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಡೆಸಿಕೊಡುವ ಬಿಗ್‌ ಬಾಸ್‌-17 ರಿಯಾಲಿಟಿ ಶೋಗೆ ಬೀದರ್‌ ಮೂಲದ ಯುವಕ ಅರುಣ ಮಾಶೆಟ್ಟಿ ಪ್ರವೇಶಿಸಿದ್ದಾರೆ. ಜನಪ್ರಿಯ ಯೂಟ್ಯೂಬರ್‌ ಆಗಿರುವ ಅರುಣ್‌ ಅವರು ತಮ್ಮ ಅಜ್ಜನ ಕಾಲದಿಂದ ತೆಲಂಗಾಣದ ಹೈದರಾಬಾದ್‌ನಲ್ಲಿ ನೆಲೆಸಿದ್ದಾರೆ.

ಇವರು ರಾಷ್ಟ್ರಮಟ್ಟದ ಬಿಗ್‌ಬಾಸ್‌ ಸ್ಪರ್ಧೆಗೆ ಕರ್ನಾಟಕ ಮೂಲದಿಂದ ಪ್ರವೇಶಿಸಿದ ಮೊದಲ ಸ್ಪರ್ಧಾಳು ಎನಿಸಿಕೊಂಡಿದ್ದಾರೆ. ಸಲ್ಮಾನ್‌ ಖಾನ್‌ ನಿರೂಪಕರಾಗಿರುವ ಬಿಗ್‌ ಬಾಸ್‌ನ 17ನೇ ಆವೃತ್ತಿಯಲ್ಲೂ ದೇಶದ ಘಟನಾನುಘಟಿ ಕಲಾವಿದರು, ಖ್ಯಾತನಾಮರು ಭಾಗವಹಿಸಿದ್ದು, ಅದರಲ್ಲಿ ಜನಪ್ರಿಯ ಕಂಟೆಂಟ್‌ ಕ್ರಿಯೇಟರ್‌ ಆಗಿರುವ ಅರುಣ ಮಾಶೆಟ್ಟಿ ಕೂಡ ಒಬ್ಬರಾಗಿದ್ದಾರೆ.
ಚಿನ್ನದ ವ್ಯಾಪಾರಿಯಾಗಿದ್ದ ಅರುಣ ಅವರ ಅಜ್ಜ ಶಂಕರೆಪ್ಪ ಮಾಶೆಟ್ಟಿ ಹೈದ್ರಾಬಾದ್‌ಗೆ ವಲಸೆ ಹೋಗಿದ್ದರು. ಅರುಣ್‌ ಅವರು ಬೀದರ್‌ ಜಿಲ್ಲೆಯ ರಾಚಪ್ಪ ಗೌಡಗಾಂವ್‌ ಗ್ರಾಮದ ಶಂಕರೆಪ್ಪ ಅವರ ಪುತ್ರ ದಿ| ಬಾಬುರಾವ್‌ ಮಾಶೆಟ್ಟಿ ಅವರ ಪುತ್ರ. ಗ್ರಾಮದಲ್ಲಿ ಜಮೀನು ಮತ್ತು ಬೀದರ್‌ನಲ್ಲಿ ಮನೆ ಹೊಂದಿರುವ ಮಾಶೆಟ್ಟಿ ಕುಟುಂಬ ಈಗಲೂ ಮಣ್ಣಿನ ಸಂಬಂಧ ಹೊಂದಿದೆ.

ಕನ್ನಡದ ಬಗ್ಗೆ ವಿಶೇಷ ಪ್ರೇಮ
ತೆಲುಗಿನಷ್ಟೇ ಸುಲಲಿತವಾಗಿ ಬೀದರ್‌ ಕನ್ನಡವನ್ನೂ ಮಾತನಾಡುವ ಅರುಣ್‌ ಅವರು ಯೂಟ್ಯೂಬ್‌ ಹಾಸ್ಯ ಚಟಾಕಿಗಳಲ್ಲಿ ಕನ್ನಡವನ್ನೂಬಳಸುತ್ತಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ 6.2 ಲಕ್ಷ ಅನುಯಾಯಿಗಳನ್ನು ಹೊಂದಿದ್ದು, ಅವರ ಹಾಸ್ಯಭರಿತ ವೀಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅರುಣ್‌ ಪತ್ನಿ ಟುನೇಶಿಯಾ ದೇಶದವರಾಗಿದ್ದು, ಇವರ ವೀಡಿಯೋಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಅರುಣ್‌ ಹೈದರಾಬಾದ್‌ನ ಚಾರ್‌ಮಿನಾರ್‌ ಪ್ರದೇಶದಲ್ಲಿ ಸಾಮಾಜಿಕ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ಅ.15ರಿಂದ ಶುರುವಾಗಿರುವ ಬಿಗ್‌ ಬಾಸ್‌ ಹೊಸ ಆವೃತ್ತಿಯಲ್ಲಿ 17 ಮಂದಿ ಪ್ರವೇಶ ಪಡೆದುಕೊಂಡಿದ್ದಾರೆ. ಸನ್ನಿ ಅರ್ಯ, ರಿಂಕು ಧವನ್‌, ಅಭಿಷೇಕಕುಮಾರ್‌, ಇಶಾ ಮಾಳವಿಯಾ, ಸೋನಿಯಾ ಬನ್ಸಾಲ್‌, ಅಂಕಿತಾ ಲೋಖಂಡೆ ಮತ್ತು ಅವರ ಪತ್ನಿ ವಿಕ್ಕಿ ಜೈನ್‌ ಇತರ ಸ್ಪರ್ಧಾಳುಗಳು. ಮನೆಯಲ್ಲಿ ಮೂರು ದಿನಗಳಿಂದ ಹಾಸ್ಯಭರಿತ ಚಟಾಕಿಗಳ ಮೂಲಕ ಉತ್ತಮ ಸ್ಪರ್ಧೆ ನೀಡುತ್ತಿದ್ದಾರೆ. ಬುಧವಾರ ಬಿಗ್‌ ಬಾಸ್‌ ಮನೆಯವರ ಜತೆಗೆ ಮಾತನಾಡುವಾಗ ಕನ್ನಡದ ಬಗ್ಗೆ ಪ್ರಸ್ತಾವಿಸಿದ್ದಾರೆ. ನನಗೆ ಕನ್ನಡ ಬರುತ್ತದೆ, ನನ್ನ ಮಾತೃ ಭಾಷೆ ಕನ್ನಡ ಎನ್ನುವ ಮೂಲಕ ಅಭಿಮಾನ ಮೆರೆದಿದ್ದಾರೆ.

ನನ್ನ ಮಗ ಅರುಣ ರಾಷ್ಟ್ರ ಮಟ್ಟದ ಖ್ಯಾತ ರಿಯಾಲಿಟಿ ಶೋ ಬಿಗ್‌ ಬಾಸ್‌-17ಗೆ ಪ್ರವೇಶಿಸಿರುವುದು ಹೆಮ್ಮೆಯ ವಿಷಯ. ನಮ್ಮ ಮಾವನ ಕಾಲದಲ್ಲಿ ಹೈದರಾಬಾದ್‌ನಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಮತ್ತು ಬೀದರ್‌ನ ನಂಟನ್ನು ಬಿಟ್ಟಿಲ್ಲ. ಈಗಲೂ ನಮ್ಮ ಮಾತೃ ಭಾಷೆ ಕನ್ನಡವೇ ಆಗಿದೆ. ತನ್ನ ಕೆಲಸ, ಸಾಧನೆ ಮೂಲಕ ದೊಡ್ಡ ಕಾರ್ಯಕ್ರಮಕ್ಕೆ ಪ್ರವೇಶ ಪಡೆದಿದ್ದು, ಗೆದ್ದು ಬರಲಿ ಎಂದು ಹಾರೈಸುತ್ತೇನೆ. ಇದಕ್ಕಾಗಿ ಬೆಂಬಲಿಸಲು ಎಲ್ಲರಲ್ಲೂ ಮನವಿ ಮಾಡುತ್ತೇನೆ.
– ಗೋದಾವರಿ ಮಾಶೆಟ್ಟಿ, ಅರುಣ ತಾಯಿ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.