ಪುನರ್ವಸು ಮಳೆಯಬ್ಬರ


Team Udayavani, Jul 15, 2021, 10:21 PM IST

15-18

ಚಿಕ್ಕಮಗಳೂರು: ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮೋಡ ಕವಿದ ವಾತವರಣ ನಿರ್ಮಾಣವಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಯಾಗುತ್ತಿದ್ದು, ನದಿ ಹಳ್ಳಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಬಯಲುಸೀಮೆ ಭಾಗದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ.

ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ, ಚಿಕ್ಕಮಗಳೂರು ಸುತ್ತಮುತ್ತ ನಿರಂತರ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಈ ಭಾಗದಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಯಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ.

ಕೆರೆಕಟ್ಟೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಡೂರು, ಬೀರೂರು, ತರೀಕೆರೆ ಭಾಗದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಶೀತಗಾಳಿಯೊಂದಿಗೆ ಸಾಧಾರಣ ಮಳೆಯಾಗುತ್ತಿದೆ. ಜೂನ್‌ ತಿಂಗಳ ಮಧ್ಯದಲ್ಲಿ ಅಬ್ಬರಿಸಿದ್ದ ಮಳೆರಾಯ ಮಧ್ಯದಲ್ಲಿ ಮಾಯವಾಗಿದ್ದ, ಜುಲೈ ತಿಂಗಳ ಆರಂಭದಲ್ಲಿ ಮಳೆ ಬಿರುಸು ಪಡೆದುಕೊಳ್ಳುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಗರಿಗೆದರಿದ್ದು, ಭತ್ತದ ಗದ್ದೆಗಳ ನಾಟಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಸಸಿಮಡಿಯನ್ನು ಹಾಕಲಾಗಿದೆ. ಬೇಸಾಯಕ್ಕೆ ಎಲ್ಲಾ ಸಿದ್ಧತೆಯಲ್ಲಿ ರೈತರು ಮಗ್ನರಾಗಿದ್ದಾರೆ.

ಅಡಿಕೆ ಹಾಗೂ ಕಾμತೋಟಗಳಿಗೆ ಔಷಧ ಸಿಂಪಡಣೆ ಕಾರ್ಯ ಭರದಿಂದ ಸಾಗುತ್ತಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಬಯಲು ಸೀಮೆಭಾಗದಲ್ಲಿ ಈಗಾಗಲೇ ಆಲೂಗಡ್ಡೆ ಬಿತ್ತನೆ ಕಾರ್ಯ ಮುಗಿದಿದ್ದು, ಸಕಾಲಕ್ಕೆ ಮಳೆಯಾಗಿದ್ದು, ಆಲೂಗಡ್ಡೆ ಜತೆಗೆ ಮೆಣಸಿನ ಕಾಯಿ, ಕೋಸು, ಬಟಾಣಿ, ಬೀನ್ಸ್‌, ಬೀಟ್‌ರೋಟ್‌ ಮತ್ತು ಕ್ಯಾರೆಟ್‌ ಬೆಳೆಗಳಿಗೂ ಮರು ಜೀವ ಬಂದಂತಾಗಿದೆ. ಕಡೂರು ತಾಲೂಕಿನಲ್ಲಿ ಈರುಳ್ಳಿ ಹತ್ತಿ, ಎಳ್ಳು ಹೆಸರು ಉದ್ದು ಶೇಂಗಾ ರಾಗಿ ಬಿತ್ತನೆಗೆ ರೈತರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ತರೀಕೆರೆ ಭಾಗದಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಸಕಾಲಕ್ಕೆ ಮಳೆಯಾಗುತ್ತಿರುವುದು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಮಂಗಾರು ಪೂರ್ವ ಮತ್ತು ಈಗ ಹದಮಳೆಯಾಗುತ್ತಿರುವುದರಿಂದ ತರಕಾರಿ ಬೆಳೆಗೆ ಈ ಮಳೆ ವರದಾನವಾಗಿದೆ. ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ಜನಜೀವನ ಅಸ್ತವ್ಯಸ್ತ: ಮಲೆನಾಡು ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು ನಿರಂತರವಾಗಿ ಮಳೆಯಾಗುತ್ತಿದೆ. ಇದರೊಂದಿಗೆ ಮೋಡಕವಿದ ವಾತವರಣ ಮತ್ತು ಶೀತಗಾಳಿ ಬೀಸುತ್ತಿದ್ದು, ಜನರು ಮನೆಯಿಂದ ಹೊರಬರದಂತಾಗಿದೆ.

ಜಿಲ್ಲಾದ್ಯಂತ ಸುರಿದ ಮಳೆ ವಿವರ: ಚಿಕ್ಕಮಗಳೂರು ಕಸಬಾ 4.2,ಮಿ.ಮೀ. ಜೋಳದಾಳ್‌ 29, ಅತ್ತಿಗುಂಡಿ 41, ಸಂಗಮೇಶ್ವರ ಪೇಟೆ 22, ಕಳಸಾಪುರ 7.1, ಆಲ್ದೂರು 27, ಬ್ಯಾರುವಳ್ಳಿ 28, ಕೆ.ಆರ್‌.ಪೇಟೆ 19.1, ದಾಸರ ಹಳ್ಳಿ 9.2, ಮಳಲೂರು 24.1, ವಸ್ತಾರೆ 23, ಕಡೂರು 13, ಬೀರೂರು 14.6, ಸಖರಾಯಪಟ್ಟಣ 37.3, ಸಿಂಗಟಗೆರೆ 13, ಪಂಚನಹಳ್ಳಿ 12.6, ಎಮ್ಮೆದೊಡ್ಡಿ 20.2, ಯಗಟಿ 12.6, ಗಿರಿಯಾಪುರ 28, ಬಾಸೂರು 16.2, ಕೊಪ್ಪ 103, ಹರಿಹರಪುರ 84, ಜಯಪುರ 65.4, ಬಸರಿಕಟ್ಟೆ 76.3, ಕಮ್ಮರಡಿ 112.8, ಮೂಡಿಗೆರೆ 17.6, ಕೊಟ್ಟಿಗೆಹಾರ 48, ಗೋಣಿಬೀಡು 29.1, ಜಾವಳಿ 52.4, ಕಳಸ 56, ಹಿರೇಬೈಲು 60, ಹೊಸಕೆರೆ 137 ಬಾಳೂರು 61.2, ನರ ಸಿಂಹರಾಜಪುರ 72, ಬಾಳೆಹೊನ್ನೂರು 36, ಮೇಗರಮಕ್ಕಿ 55, ಶೃಂಗೇರಿ 70 ಕಿಗ್ಗ 128.4, ತರೀಕೆರೆ 32, ಲಕ್ಕವಳ್ಳಿ36.2, ರಂಗೇನಹಳ್ಳಿ 36, ಲಿಂಗದಹಳ್ಳಿ 24.8, ಉಡೇವಾ 26.5, ತ್ಯಾಗದಬಾಗಿ 30, ತಣಿಗೆಬೈಲು 29.8, ಹುಣಸಘಟ್ಟ 44, ಅಜ್ಜಂಪುರ 32, ಶಿವನಿ 19, ಬುಕ್ಕಾಂಬುದಿ 19 ಮತ್ತು ಚೌಳಹಿರಿಯೂರಿನಲ್ಲಿ 2.4 ಮಿ.ಮೀ. ಮಳೆಯಾಗಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.