ಪಾಸಿಟಿವಿಟಿ ದರ ಶೇ. 5ಕ್ಕೆ ಇಳಿದರೆ ಲಾಕ್ ತೆರವು
Team Udayavani, Jun 23, 2021, 10:30 PM IST
ಶೃಂಗೇರಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಮಾತ್ರ ಸಂಪೂರ್ಣ ಲಾಕ್ಡೌನ್ ತೆರವು ಮಾಡಬಹುದಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ತಾಪಂ ಸಭಾಂಗಣದಲ್ಲಿ ಮಂಗಳವಾರ ಕೋವಿಡ್ ನಿರ್ವಹಣೆ ಮತ್ತು ಪ್ರಕೃತಿ ವಿಕೋಪ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಪ್ರತಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಪ್ರತಿ ದಿನವೂ ವರದಿ ಪಡೆಯುತ್ತಿದ್ದು, ಲಾಕ್ಡೌನ್ ತೆರವು ಮಾಡಲು ನಿದಿ ಷ್ಟ ಪಡಿಸಿದ ಪಾಸಿಟಿವಿಟಿ ಇರಬೇಕಿದೆ.
ಜಿಲ್ಲೆಯಲ್ಲಿ ಹಂತ- ಹಂತವಾಗಿ ಇಳಿಯುತ್ತಿರುವ ಪಾಸಿಟಿವಿಟಿ ದರದಿಂದ ಒಂದೆರಡು ದಿನದಲ್ಲಿ ಲಾಕ್ಡೌನ್ ತೆರವಾಗುವ ವಿಶ್ವಾಸವಿದೆ. ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಬೇಗಾರಿನ ಮೊರಾರ್ಜಿ ಶಾಲೆ ವಸತಿ ಗೃಹದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 71 ರೋಗಿಗಳು ಬೇಗಾರು ವಸತಿ ನಿಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಕೋವಿಡ್ ಮೊದಲ ಅಲೆಗಿಂತ ಎರಡನೇ ಅಲೆ ಜೋರಾಗಿದ್ದು, ತಜ್ಞರ ಅನಿಸಿಕೆಯಂತೆ ಮೂರನೇ ಅಲೆ ಮಕ್ಕಳ ಮೇಲಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಈಗಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಏನೆಲ್ಲಾ ಕೊರತೆ ಇದೆ ಅದನ್ನು ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳಬೇಕು. ಲಸಿಕೆ ಅಭಿಯಾನವನ್ನು ಪ್ರಧಾನ ಮಂತ್ರಿಗಳ ಆದೇಶದಂತೆ ಈಗ ಮತ್ತಷ್ಟು ಚುರುಕುಗೊಳಿಸಲಾಗಿದೆ ಎಂದರು.
ಸಭೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ತಹಶೀಲ್ದಾರ್ ಅಂಬುಜಾ, ತಾಪಂ ಕಾರ್ಯನಿರ್ವಹಣಾಧಿ ಕಾರಿ ಜಯರಾಂ ಇದ್ದರು. ಪಪಂ ಅಧ್ಯಕ್ಷ ಹರೀಶ್ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಸಿ. ಶಂಕರಪ್ಪ, ವೇಣುಗೋಪಾಲ್, ನೂತನಕುಮಾರ್, ತಲಗಾರು ಉಮೇಶ್ ಮತ್ತಿತರರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್