ಜನತಾ ಕರ್ಫ್ಯೂ 4ನೇ ದಿನವೂ ಯಶಸ್ವಿ
Team Udayavani, May 2, 2021, 5:41 PM IST
ದಾವಣಗೆರೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂಗೆ ಶನಿವಾರವೂ ಬೆಂಬಲ ವ್ಯಕ್ತವಾಗಿದ್ದು, ಜಿಲ್ಲೆ ಸಂಪೂರ್ಣ ಸ್ತಬ್ಧಗೊಂಡಿತು. ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅವಕಾಶ ನೀಡಲಾಗಿದ್ದು, ಈ ಅವಧಿಯಲ್ಲಿ ಅವಶ್ಯಕ ವಸ್ತುಗಳ ಮಾರಾಟ ಅಂಗಡಿಗಳು ಸೇರಿದಂತೆ ಉಳಿದೆಲ್ಲ ಅಂಗಡಿಗಳು ತೆರೆದಿದ್ದವು.
ಈ ಅವಧಿಯಲ್ಲಿ ಜನ, ವಾಹನ ಸಂಚಾರ ಅತ್ಯಧಿಕವಾಗಿತ್ತು. ಸಾರ್ವಜನಿಕರು ಈ ಅವಧಿಯಲ್ಲಿ ಹೊರ ಬಂದು ಹಾಲು, ತರಕಾರಿ ಸೇರಿದಂತೆ ಇನ್ನಿತರ ಅವಶ್ಯ ವಸ್ತುಗಳನ್ನು ಖರೀದಿಸಿದರು. ಆದರೆ ಈ ವೇಳೆ ಎಲ್ಲಿಯೂ ದೈಹಿಕ ಅಂತರ ಪಾಲನೆಯಾಗದೇ ಇರುವುದು ಗೋಚರಿಸಿತು. ತುರ್ತು ಹಾಗೂ ಅವಶ್ಯ ಕೆಲಸಗಳಿಗಾಗಿ ಓಡಾಡಲು ಇರುವ ವಿನಾಯಿತಿಯನ್ನು ಕೆಲವರು ದುರುಪಯೋಗ ಪಡಿಸಿಕೊಂಡು ಅನಗತ್ಯವಾಗಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು, ಶನಿವಾರ ಕಟ್ಟುನಿಟ್ಟಿನ ವಿಚಾರಣೆ ನಡೆಸಿ ಅನಗತ್ಯ ಸಂಚಾರ ನಡೆಸಿದವರಿಗೆ ದಂಡದ ಬಿಸಿ ಮುಟ್ಟಿಸಿದರು.
ಹಲವೆಡೆ ಬ್ಯಾರಿಕೇಡ್: ಅನಗತ್ಯ ವಾಹನ ಸಂಚಾರ ತಡೆಯಲು ಪೊಲೀಸರು ನಗರದ ವಿವಿಧೆಡೆ ಬ್ಯಾರಿಕೇಡ್ ಹಾಕಿದ್ದರು. ಈ ಬ್ಯಾರಿಕೇಡ್ ಗಳ ಕಾರಣದಿಂದಾಗಿ ತುರ್ತು ಸೇವೆಗಾಗಿ ರಸ್ತೆಗಿಳಿದವರು ಸುತ್ತು ಹಾಕಿ ಬೇರೆ ರಸ್ತೆಗಳ ಮೂಲಕ ಸಂಚರಿಸುವಂತಾಯಿತು. ತುರ್ತು ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿ ಹಾಗೂ ಪೆಟ್ರೊಲ್ ಬಂಕ್ಗಳು ಎಂದಿನಂತೆ ತೆರೆದಿದ್ದವು. ಆಟೋ, ಟ್ಯಾಕ್ಸಿ, ಸರ್ಕಾರಿ ಹಾಗೂ ಖಾಸಗಿ ಬಸ್, ವಾಹನ ಸಂಚಾರ ಸಹ ಸಂಪೂರ್ಣ ಬಂದ್ ಆಗಿದ್ದವು. ಮಹಾನಗರ ವ್ಯಾಪ್ತಿಯ ಜನದಟ್ಟಣೆಯ ಪ್ರದೇಶಗಳೆಲ್ಲವೂ ಜನ, ವಾಹನ ಸಂಚಾರವಿಲ್ಲದೇ ಭಣಗುಟ್ಟಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
MUST WATCH
ಹೊಸ ಸೇರ್ಪಡೆ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ