ದೂಡಾದಿಂದ ಅಮರ್ ಜವಾನ್ ಸ್ಮಾರಕ ನಿರ್ಮಾಣ
Team Udayavani, Jun 20, 2021, 8:26 PM IST
ದಾವಣಗೆರೆ : ಹುತಾತ್ಮ ಸೈನಿಕರ ನೆನಪಿಗಾಗಿ ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿನ ವರ್ತುಲ ರಸ್ತೆ ವೃತ್ತದ (ಸರ್ಕಾರಿ ನೌಕರರ ಸಮುದಾಯ ಭವನದ ಎದುರು) ಬಳಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಯ್ದಿರಿಸಲಾದ ಬಯಲು ಜಾಗದಲ್ಲಿ ಅಮರ್ ಜವಾನ್ ಸ್ಮಾರಕ ನಿರ್ಮಿಸಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದು ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದರು.
ದೂಡಾ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅಮರ್ ಜವಾನ್ ಸ್ಮಾರಕದ ಜೊತೆಗೆ ಹುತಾತ್ಮರಾದ ಸೈನಿಕರ ನೆನಪಿಗಾಗಿ ದೇಶದಲ್ಲಿಯೇ ಉತ್ತಮವಾದ ಸ್ಮಾರಕ ಹಾಗೂ ಸೌಂದಯಕರಣ ಉದ್ಯಾನವನವನ್ನಾಗಿ ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರಾಧಿಕಾರದ ವತಿಯಿಂದ 63 ಲಕ್ಷ ರೂ. ಕಾಮಗಾರಿ ಮುಕ್ತಾಯ ಹಂತದಲ್ಲಿದೆ.
ಉದ್ಯಾನವನಕ್ಕೆ ಹೆಚ್ಚುವರಿಯಾಗಿ ಪ್ರಾಧಿಕಾರದಿಂದ ಒಂದು ಕೋಟಿ ರೂ. ಹಣ ನಿಗದಿ ಮಾಡಿ ಹೆಚ್ಚು ಅಭಿವೃದ್ಧಿ ಮಾಡಲು ಸಂಸದ ಜಿ.ಎಂ. ಸಿದ್ದೇಶ್ವರವರು ಸೂಚನೆ ನೀಡಿದ್ದಾರೆ ಎಂದರು.
ಸೈನಿಕ ಸಂಘದ ಮಾಜಿ ಅಧ್ಯಕ್ಷ ಸತ್ಯಪ್ರಕಾಶ ಮಾತನಾಡಿ, ಮೈದಾನದ ಮಧ್ಯ ಭಾಗದಲ್ಲಿ ಫ್ಲಾಟ್ಫಾರ್ಮ್, ಕೆಳ ಭಾಗದಲ್ಲಿ ಪ್ರವಾಸಿಗರಿಗೆ ಧ್ಯಾನ ಮಾಡಲು ಒಂದು ಚಿಕ್ಕ ಕೊಠಡಿ ಹಾಗೂ ಮೈದಾನದ ಮೂಲೆಯಲ್ಲಿ (ಸರ್ಕಲ್) ಒಂದು ಓಪನ್ ಆಡಿಟೋರಿಯಂ ರೀತಿಯ ವೇದಿಕೆ ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕೆಂದು ಸಲಹೆ ನೀಡಿದರು. ನಕ್ಷೆಗಳನ್ನು ತಯಾರಿಸಿ ಕಚೇರಿಗೆ ಒಂದು ಡೆಮೋ ಮಾದರಿ ನೀಡಬೇಕೆಂದು ದೂಡಾ ಅಧ್ಯಕ್ಷರು ಆಯುಕ್ತರಿಗೆ ಮತ್ತು ಸೈನಿಕ ಸಂಘದವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ