ಬೆಂಗಳೂರು ಜಿಲ್ಲೆಯಲ್ಲಿ 18 ಎಕರೆ ಒತ್ತುವರಿ ಭೂಮಿ ತೆರವು : ಜೆ ಮಂಜುನಾಥ್

34.50 ಕೋಟಿ ಮೌಲ್ಯದ ಒತ್ತುವರಿ ಭೂಮಿ ತೆರವು

Team Udayavani, Mar 6, 2021, 6:31 PM IST

ಜಹಜಹಜಹ್

ಬೆಂಗಳೂರು : ನಗರ ಜಿಲ್ಲೆಯಲ್ಲಿ ಇಂದು ಏಕಕಾಲಕ್ಕೆ ನಾಲ್ಕು ತಾಲ್ಲೂಕುಗಳಲ್ಲಿ ಕೈಗೊಳ್ಳಲಾದ ತೆರವು ಕಾರ್ಯಾಚರಣೆಯಲ್ಲಿ,  ಅಕ್ರಮವಾಗಿ ಒತ್ತುವರಿಯಾದ ಒಟ್ಟು ರೂ. 34.50 ಕೋಟಿ ಮೌಲ್ಯದ ಸರ್ಕಾರಿ ಕೆರೆ, ಗುಂಡುತೋಪು, ಗೋಮಾಳ ಜಮೀನುಗಳ ಒಟ್ಟು 18 ಎಕರೆ ಪ್ರದೇಶವನ್ನು ತೆರವುಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದ್ದಾರೆ.

ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಕಾರ್ಯಾಚರಣೆ ನಡೆಸಿ, ಜಿಲ್ಲೆಯ ವಿಭಾಗಾಧಿಕಾರಿಗಳು, ಬಿ.ಎಂ.ಟಿ.ಎಫ್. ಅಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ವರ್ಗದವರ ಸಹಯೋಗದಿಂದಿಗೆ ತೆರವುಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಅದರಂತೆ  ಬೆಂಗಳೂರು ಉತ್ತರ  ತಾಲ್ಲೂಕು, ದಾಸನಪುರ  ಹೋಬಳಿ, ಕುದುರೆಗೆರೆ ಗ್ರಾಮದ

30-31 ಎ/ಗುಂಟೆ ವಿಸ್ತೀರ್ಣದ ಸರ್ಕಾರಿ ಕೆರೆ ಸರ್ವೆ ನಂ. 100 ರಲ್ಲಿ ಒಟ್ಟು  0-30 ಎಕರೆ ಜಮೀನು ಒತ್ತುವರಿಯಾಗಿದ್ದು, ಅದನ್ನು  ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್  ಬಾಲಕೃಷ್ಣ,  ಮತ್ತು ಅವರ ಸಿಬ್ಬಂದಿ ಸಹಕಾರದಿಂದ ಇಂದು ತೆರವುಗೊಳಿಸಲಾಗಿದೆ ಎಂದು  ತಿಳಿಸಿದ ಜಿಲ್ಲಾಧಿಕಾರಿಗಳು ದಾಸನಪುರ  ಹೋಬಳಿ, ಕುದುರೆಗೆರೆ ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 81 ರಲ್ಲಿ ಒಟ್ಟು  02-30 ಎ/ಗುಂಟೆ ವಿಸ್ತೀರ್ಣದ ಪೈಕಿ 02-30 ಎಕರೆ ಜಮೀನು ಒತ್ತುವರಿಯಾಗಿದ್ದು, ಅಂದಾಜು ರೂ. 06.50 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತೆರವುಗೊಳಿಸಲಾಯಿತು ಎಂದು ತಿಳಿಸಿದರು.

ಯಲಹಂಕ  ತಾಲ್ಲೂಕು, ಹೆಸರಘಟ್ಟ ಹೋಬಳಿ, ಕಾಳತಿಮ್ಮನಹಳ್ಳಿ ಗ್ರಾಮದ ಸರ್ಕಾರಿ ಕೆರೆ ಸರ್ವೆ ನಂ. 25 ರಲ್ಲಿ ಒಟ್ಟು ವಿಸ್ತೀರ್ಣ 18-21 ಎ/ಗುಂಟೆ ಪೈಕಿ 4-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ಹೆಸರಘಟ್ಟ ಹೋಬಳಿ, ಮೈಲಪ್ಪನಹಳ್ಳಿ ಗ್ರಾಮದ ಸರ್ಕಾರಿ ಕರೆ ಸರ್ವೆ ನಂ. 91 ರಲ್ಲಿ ಒಟ್ಟು ವಿಸ್ತೀರ್ಣ 11-26 ಎ/ಗುಂಟೆ ಪೈಕಿ 2-11 ಎಕರೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದರು.

ಹೆಸರಘಟ್ಟ ಹೋಬಳಿ, ಮಾದಪ್ಪನಹಲ್ಳಿ ಗ್ರಾಮದ ಸರ್ಕಾರಿ ಕರೆ ಸರ್ವೆ ನಂ. 73 ರಲ್ಲಿ ಒಟ್ಟು ವಿಸ್ತೀರ್ಣ 2-02 ಎ/ಗುಂಟೆ ಪೈಕಿ 0-20 ಎಕರೆ ಜಮೀನು ಒತ್ತುವರಿಯಾಗಿದ್ದು  ಅಂದಾಜು 09-00 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತಹಶೀಲ್ದಾರ್  ನರಸಿಂಹಮೂರ್ತಿ ಹಾಗೂ ಅವರ ಸಿಬ್ಬಂದಿಯೊಂದಿಗೆ ತೆರವುಗೊಳಿಸಲಾಯಿತು.

ಅದರಂತೆ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ ಅಗರ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 31 ರಲ್ಲಿ ಒಟ್ಟು ವಿಸ್ತೀರ್ಣ 14-34 ಎ/ಗುಂಟೆ ಪೈಕಿ 1-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ಅಗರ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 73 ರಲ್ಲಿ ಒಟ್ಟು ವಿಸ್ತೀರ್ಣ 91-28 ಎ/ಗುಂಟೆ ಪೈಕಿ 2-00 ಎಕರೆ ಜಮೀನು ಒತ್ತುವರಿಯಾಗಿದ್ದು  ಜಿಲ್ಲಾಧಿಕಾರಿಗಳ ನಿರ್ದೇಶನದಂತೆ

ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಗಳಾದ ಡಾ|| ಎಂ.ಜಿ.ಶಿವಣ್ಣ, ತಹಶೀಲ್ದಾರ್ ಶಿವಪ್ಪ ಹೆಚ್. ಲಮಾಣಿ , ಹಾಗೂ ಅವರ ಸಿಬ್ಬಂದಿಯೊಡನೆ ಅಂದಾಜು 04-00 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತೆರವುಗೊಳಿಸಲಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ  ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 96 ರಲ್ಲಿ ಒಟ್ಟು ವಿಸ್ತೀರ್ಣ 04-00 ಎ/ಗುಂಟೆ ಪೈಕಿ 04-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 30 ರಲ್ಲಿ ಒಟ್ಟು ವಿಸ್ತೀರ್ಣ 1-10 ಎ/ಗುಂಟೆ ಪೈಕಿ 0-20 ಗುಂಟೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 31 ರಲ್ಲಿ ಒಟ್ಟು ವಿಸ್ತೀರ್ಣ 0-13 ಗುಂಟೆ ಪೈಕಿ 0-02 ಗುಂಟೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಗುಂಜೂರು ಗ್ರಾಮದ ಸರ್ಕಾರಿ ಖರಾಬು ಸರ್ವೆ ನಂ. 290 ರಲ್ಲಿ ಒಟ್ಟು ವಿಸ್ತೀರ್ಣ 1-07 ಗುಂಟೆ ಪೈಕಿ 0-07 ಗುಂಟೆ ಜಮೀನು ಒತ್ತುವರಿಯಾಗಿದ್ದು ಅಂದಾಜು 15-00 ಕೋಟಿ ಮೌಲ್ಯದ ಈ ಸರ್ಕಾರಿ ಜಮೀನನ್ನು ತಹಶೀಲ್ದಾರ್, ಅಜಿತ್ ರೈ ಸಾರೋಕೆ ಮತ್ತು ಅವರ ಸಿಬ್ಬಂದಿಯೊಡನೆ  ತೆರವುಗೊಳಿಸಲಾಯಿತು ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.