5 ವರ್ಷದಲ್ಲಿ 25 ಕೋಟಿ ಸಸಿ ನೆಡುವ ಕಾರ್ಯಕ್ರಮ: ಖಂಡ್ರೆ

ಈ ವರ್ಷ 5 ಕೋಟಿ, ಜಿಯೋ ಟ್ಯಾಗ್‌ ಮೂಲಕ ಗಿಡಗಳ ಆಡಿಟ್‌

Team Udayavani, Jun 24, 2023, 7:40 AM IST

5 ವರ್ಷದಲ್ಲಿ 25 ಕೋಟಿ ಸಸಿ ನೆಡುವ ಕಾರ್ಯಕ್ರಮ: ಖಂಡ್ರೆ

ಬೆಂಗಳೂರು: ರಾಜ್ಯದ ಅರಣ್ಯ ಹಾಗೂ ಹಸಿರು ವ್ಯಾಪ್ತಿಯ ಹೆಚ್ಚಳಕ್ಕಾಗಿ ಪ್ರಸಕ್ತ ವರ್ಷ 5 ಕೋಟಿ ಗಿಡ ನೆಡುವ ಯೋಜನೆಗೆ ಮುಂದಾಗಿರುವ ಅರಣ್ಯ ಇಲಾಖೆ, ನೆಟ್ಟ ಸಸಿಗಳ ಪೈಕಿ ಎಷ್ಟು ಉಳಿದುಕೊಂಡಿದೆ ಎಂಬುದರ ಬಗ್ಗೆ ಕಾಳಜಿ ವಹಿಸಲು ಜಿಯೋ ಟ್ಯಾಗ್‌ ವ್ಯವಸ್ಥೆ ಮೂಲಕ ಆಡಿಟ್‌ ಮಾಡಲು ನಿರ್ಧರಿಸಿದೆ.

ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಬಳಿಕ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ ಅರಣ್ಯ ಹಾಗೂ ಹಸಿರು ವ್ಯಾಪ್ತಿ ಕನಿಷ್ಠ ಶೇ.33ಕ್ಕೆ ಇರಬೇಕು. ರಾಜ್ಯದಲ್ಲಿ ಈ ವ್ಯಾಪ್ತಿ ಸುಮಾರು 20.19ರಷ್ಟು ಮಾತ್ರವೇ ಇದ್ದು, ಸರ್ಕಾರ ವ್ಯಾಪ್ತಿ ಹೆಚ್ಚಳವನ್ನು ಆದ್ಯ ಕರ್ತವ್ಯ ಎಂದು ಪರಿಗಣಿಸಿದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಯೋಜನೆ ರೂಪಿಸಿದ್ದು, ಶಿಕ್ಷಣ ಇಲಾಖೆಯೂ ಸೇರಿ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು, ಪೋಷಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು. ಮುಂದಿನ ಐದು ವರ್ಷದಲ್ಲಿ 25 ಕೋಟಿ ಸಸಿ ನೆಡುವ ಗುರಿ ಸರ್ಕಾರದ ಮುಂದಿದೆ ಎಂದು ಹೇಳಿದರು.

ಜುಲೈ 1ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿಪಂ ಸಿಇಒಗಳೂ ಇದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಜಿಲ್ಲೆಯ ಇತರ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ. ಇದೊಂದೇ ವಾರದಲ್ಲಿ 1 ಕೋಟಿ ಸಸಿ ನೆಡಲಾಗುತ್ತದೆ ಎಂದು ವಿವರಿಸಿದರು.

2.5 ಕೋಟಿಯಷ್ಟು ಸಸಿಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಇಲಾಖೆಯಿಂದ ನೆಡಲಾಗುತ್ತಿದೆ. ನಾನು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್‌ ಪರಿಶೀಲನೆ ಮಾಡಿ, 5-8 ಗಿಡಗಳಿಗೆ 2 ರೂ. 6-8 ಗಿಡಗಳಿಗೆ 3 ರೂ. ಮತ್ತು 8 -12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ ಎಂದರು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ನೆಟ್ಟ ಸಸಿಗಳು ಜೀವಂತ ಉಳಿಯಬೇಕು, ಬೆಳೆಯಬೇಕು. ಇದಕ್ಕಾಗಿ ಜಿಯೋ ಟ್ಯಾಗ್‌ ಮೂಲಕ ಆಡಿಟ್‌ ಮಾಡಿಸಲಾಗುವುದು, ಅಗತ್ಯ ಬಿದ್ದರೆ ಮೂರನೆ ವ್ಯಕ್ತಿ ಮೂಲಕ ಆಡಿಟ್‌ ಕೂಡ ಮಾಡಿಸಲಾಗುವುದು ಎಂದರು.

ಕ್ರಮ : ಅಕೇಶಿಯಾ ಮತ್ತು ನೀಲಗಿರಿ ಗಿಡಗಳ ತೋಪುಗಳ ನಿರ್ಮಾಣದಿಂದ ಆಗುವ ದುಷ್ಪರಿಣಾಮದ ಬಗ್ಗೆಯೂ ಕ್ರಮ ವಹಿಸುತ್ತೇವೆ. ಅಕೇಷಿಯಾ ನಿಷೇಧ ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಜತೆಗೆ ಚರ್ಚೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.