Bangalore: ಶಾಲೆ, ಸ್ಲಂ, ಮಕ್ಕಳು, ವೃದ್ಧರಿಗೆ ಭರವಸೆ ಬೆಳಕು

ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು, ಶಾಲೆ ಕಟ್ಟಡಕ್ಕೆ ಸುಣ್ಣ ಬಣ್ಣ

Team Udayavani, Dec 7, 2023, 4:01 PM IST

15-bng

ಬೆಂಗಳೂರು: ತಾವಾಯಿತು ತಮ್ಮ ಕೆಲಸ ಆಯಿತು ಎಂದು ತೊಡಗಿಸಿಕೊಂಡಿರುವ ಯುವ ಸಮುದಾಯದ ನಡುವೆ, ಒಂದಿಷ್ಟು ಮಂದಿ ಸೇರಿಕೊಂಡು ಭರವಸೆ ಎಂಬ ಟೀಂ ಕಟ್ಟಿಕೊಂಡು ಭರವಸೆ ಬೆಳಕಾಗಿ ಸಮಾಜಮುಖೀಯಾಗಿ ಕಾರ್ಯನಿರ್ವಹಿಸುತ್ತಿದೆ.

-ಬಡ ಮಕ್ಕಳಿಗೆ ವಿದ್ಯಾಭ್ಯಾಸ, ಸರ್ಕಾರಿ ಶಾಲೆಗಳಿಗೆ ಬಣ್ಣ, ಅನಾಥಾಶ್ರಮದ ಮಕ್ಕಳಿಗೆ ಹಾಗೂ ವೃದ್ಧರಿಗೆ ಆರೋಗ್ಯ ಶಿಬಿರ, ಬೀದಿಬದಿ ವ್ಯಾಪಾರಿಗೆ ಹಾಗೂ ಹಸಿದವರಿಗೆ ಊಟ, ಪ್ಲಾಸ್ಟಿಕ್‌ ಬದಲಿಗೆ ಪೇಪರ್‌ ಅಥವಾ ಬಟ್ಟೆ ಬ್ಯಾಗ್‌ ವಿತರಣೆ… ತಾನೊಬ್ಬನೇ ಬೆಳೆಯುವ ಜತೆಗೆ ಸುತ್ತಲಿನ ವರನ್ನೂ ಬೆಳೆಸುವ ಆಲೋಚನೆಯಿಂದ 2019ರ ಡಿಸೆಂಬರ್‌ನಲ್ಲಿ ಒಬ್ಬರಿಂದ ಹುಟ್ಟಿಕೊಂಡ “ಭರ ವಸೆ’ ತಂಡವು, ಈಗ 20 ಜನರ ಕಾಯಂ ಸದಸ್ಯತ್ವ ಹೊಂದಿದೆ. ಜತೆಗೆ ವಿವಿಧ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ 200ಕ್ಕೂ ಹೆಚ್ಚು ಯುವಕರು ಭಾಗಿಯಾಗುತ್ತಾರೆ.

“ಭರವಸೆ’ ಪ್ರಾರಂಭವಾದ ಮೊದಲ ದಿನಗಳಲ್ಲಿ ಅನಾಥಾಶ್ರಮದಲ್ಲಿನ ಮಕ್ಕಳು ಮತ್ತು ವೃದ್ಧಾಶ್ರಮ ದಲ್ಲಿನ ವೃದ್ಧರನ್ನು ಭೇಟಿ ಮಾಡಿದಂತಹ ವೇಳೆ, ಅವರಿಗೆ ಹಣದ ಅವಶ್ಯಕತೆಗಿಂತ ಅವರೊಟ್ಟಿಗೆ ಕಳೆಯುವ ಅಮೂಲ್ಯವಾದ ಸಮಯಕ್ಕೆ ಹೆಚ್ಚಿನ ಬೆಲೆ ಎಂದು ತಿಳಿಯಿತು. ತದನಂತರ, ಅತೀ ಕಡಿಮೆ ವೆಚ್ಚದಿಂದ ಹೆಚ್ಚಿನ ಸಮಾಜ ಸೇವೆ ಮಾಡುವುದನ್ನು ಆರಂಭಿಸಿದೆವು ಎಂದು “ಭರವಸೆ’ಯ ಸಂಸ್ಥಾಪಕ ಸುನೀಲ್‌ ಕುಮಾರ್‌ ತಿಳಿಸುತ್ತಾರೆ.

ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್‌: ಭರವಸೆ ತಂಡದವರು ಸರ್ಕಾರಿ ಶಾಲೆಗಳಿಗೆ ಉಚಿತ ಬಣ್ಣ ಮತ್ತು ಗೋಡೆಗಳ ಮೇಲೆ ವಿವಿಧ ಚಿತ್ತಾರಗಳನ್ನು ಮತ್ತು ಶಿಕ್ಷಣದ ಮಾಹಿತಿಯನ್ನು ಬಣ್ಣಗಳಲ್ಲಿ ಚಿತ್ರಿಸಿ, ಶಾಲೆಯ ಗೋಡೆ ಮತ್ತು ಕಾಂಪೌಂಡ್‌ ಅನ್ನು ಸುಂದರಗೊಳಿಸುತ್ತಾರೆ. ಬೆಂಗಳೂರಿನಲ್ಲಿನ ಉತ್ತರಹಳ್ಳಿ, ಶ್ರೀರಾಮಪುರ, ಮೆಜೆಸ್ಟಿಕ್‌ ಹಾಗೂ ತುಮಕೂರಿನ ಕುಣಿಗಲ್‌, ಚಿಕ್ಕಬಳ್ಳಾಪುರ, ಶಿವಮೊಗ್ಗ ಸೇರಿದಂತೆ ಇದುವರೆಗೆ ಎಂಟರಿಂದ ಹತ್ತು ಶಾಲೆಗಳಿಗೆ ಉಚಿತವಾಗಿ ಬಣ್ಣ ಹಚ್ಚಲಾಗಿದೆ.

ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ: ಕೋವಿಡ್‌ ಸಮಯದಲ್ಲಿ ಸರ್ಕಾರಿ ಶಾಲೆಗಳಿಗೆ ಹೋಗುತ್ತಿದ್ದ ಸ್ಲಂ ಮಕ್ಕಳಿಗೆ ಆನ್‌ಲೈನ್‌ ಕ್ಲಾಸ್‌ನಲ್ಲಿ ಭಾಗಿಯಾಗಲು ಸಾಧ್ಯವಾಗದೇ, ಶಿಕ್ಷಣದಿಂದ ದೂರ ಉಳಿದಿದ್ದರು. ಆ ವೇಳೆ, ನಗರದಲ್ಲಿನ ಕೊಳಗೇರಿ ಪ್ರದೇಶಗಳಿಗೆ “ಭರವಸೆ’ ತಂಡ ಭೇಟಿ ನೀಡುವ ಮೂಲಕ ಅಲ್ಲಿನ ಮಕ್ಕಳಿಗೆ ಶಿಕ್ಷಣ ನೀಡಿತ್ತು.

ಈಗ, 8ರಿಂದ 10ನೇ ತರಗತಿ ಓದುತ್ತಿರುವ 25 ಮಕ್ಕಳ ಸಂಪೂರ್ಣ ಶಿಕ್ಷಣದ ವೆಚ್ಚವನ್ನು ನೋಡಿಕೊಳ್ಳಲಾಗುತ್ತಿದ್ದು, ವಾರಾಂತ್ಯದ ವೇಳೆ 80 ಸ್ಲಂ ಮಕ್ಕಳಿಗೆ ಶಿಕ್ಷಣ ಹೇಳಿಕೊಡಲಾಗುತ್ತದೆ. ಜತೆಗೆ 3 ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್‌ ಪಠ್ಯವನ್ನು ಕಲಿಸಲಾಗುತ್ತಿದೆ. ಜತೆಗೆ ಕಂಪ್ಯೂಟರ್‌ ಶಿಕ್ಷಣವನ್ನು ಹೇಳಿಕೊಡಲಾಗುತ್ತದೆ.

ಭರವಸೆಯ “ಬುತ್ತಿ ಸಮಾಜದಲ್ಲಿ ಒಂದೊತ್ತಿನ ಊಟವಿಲ್ಲದೇ, ಅನೇಕ ಮಂದಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳು, ಬುದ್ಧಿಮಾಂಧ್ಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಹೀಗೆ ಹಸಿವಿನಿಂದ ಬಳಲುತ್ತಿರುವವರಿಗೆ ವಾರಕ್ಕೆ ಒಮ್ಮೆ ಸುಮಾರು 200 ಜನಕ್ಕೆ ಊಟ ವಿತರಿಸಲಾಗುತ್ತದೆ.

ವಸ್ತು ಖರೀದಿಗೆ ಬಂದವರಿಗೆ 13 ಸಾವಿರ ಬಟ್ಟೆ ಬ್ಯಾಗ್‌ ವಿತರಣೆ

ಊರಿಗೆ ಬಂದವಳು ನೀರಿಗೆ ಬರುವುದಿಲ್ಲವಾ! ಎಂಬ ಗಾದೆಮಾತಿನಂತೆ, ಬೆಂಗಳೂರಿಗೆ ಬಂದವಳು ಮಲ್ಲೇಶ್ವರ 8ನೇ ಕ್ರಾಸ್‌ಗೆ ಬರುವುದಿಲ್ಲವಾ ! ಎಂದೇ ಪ್ರಖ್ಯಾತಿ ಪಡೆದಿದೆ. ಏಕೆಂದರೆ, ಯುವತಿಯರಿಗೆ ಬೇಕಾಗುವ ಬಳೆ, ಓಲೆ, ಬಟ್ಟೆ ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳನ್ನು ಖರೀದಿಸಲು ಸಾವಿರಾರು ಜನ ಮಲ್ಲೇಶ್ವರಗೆ ಬರುತ್ತಾರೆ. ಜತೆಗೆ ನಾಗರಿಕರು ತಂದಿರುವ ಪ್ಲಾಸ್ಟಿಕ್‌ ಚೀಲಗಳನ್ನು ತೆಗೆದುಕೊಂಡು, ತಂಡದವರೇ ತಯಾರಿಸಿರುವ ಪೇಪರ್‌ ಬ್ಯಾಗ್‌ಗಳನ್ನು ಅಥವಾ ನಿರುಪಯುಕ್ತ ಬಟ್ಟೆಯಿಂದ ತಯಾರಿಸಿದ ಬಟ್ಟೆ ಬ್ಯಾಗ್‌ಗಳನ್ನು ಉಚಿತವಾಗಿ ನೀಡುವ ಮೂಲಕ ವಾರಾಂತ್ಯದಲ್ಲಿ ಶನಿವಾರ ಅಥವಾ ಭಾನುವಾರದಂದು ಪ್ಲಾಸ್ಟಿಕ್‌ ಮುಕ್ತ ಸಮಾಜವನ್ನಾಗಿಸುವ ವಿವಿಧ ಘೋಷಣಾ ಫ‌ಲಕದೊಂದಿಗೆ ಜಾಗೃತಿ ಜಾಥಾ ನಡೆಸಲಾಗುತ್ತದೆ. ಕಳೆದ ಒಂದು ವರ್ಷದಿಂದ 13 ಸಾವಿರಷ್ಟು ಪೇಪರ್‌ ಚೀಲ, 2 ಸಾವಿರದಷ್ಟು ಬಟ್ಟೆ ಚೀಲಗಳನ್ನು ಉಚಿತವಾಗಿ ವಿತರಿಸಲಾಗಿದೆ.

ನಮಗೆ ಬರುವ ವೇತನವನ್ನು ತನ್ನ ಸ್ವಾರ್ಥಕ್ಕೆ ಬಳಸುವ ಬದಲು, ಪರೋಪಕಾರಕ್ಕೆ ಬಳಸುವುದರಿಂದ ಅಸಹಾಯಕರಿಗೆ ನೆರವಾಗುವುದೇ ನಮ್ಮ ತಂಡದ ಮುಖ್ಯ ಉದ್ದೇಶ. ● ಸುನೀಲ್‌ ಕುಮಾರ್‌, ಭರವಸೆ ತಂಡದ ಸಂಸ್ಥಾಪಕ

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

5-bng-crime

Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.