ಲಂಚ ಪಡೆದ ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆ
Team Udayavani, May 15, 2020, 5:30 AM IST
ಬೆಂಗಳೂರು: ಸಿಗರೇಟ್ ವಿತರಕರನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದ ಸಿಸಿಬಿ ಎಸಿಪಿ ಪ್ರಭು ಶಂಕರ್, ಇನ್ಸ್ಪೆಕ್ಟರ್ಗಳಾದ ಅಜಯ್ ಹಾಗೂ ನಿರಂಜನ್ ವಿರುದ್ಧ ಎರಡು ಕಡೆ ಪ್ರತ್ಯೇಕ ತನಿಖೆ ಆರಂಭವಾಗಿದೆ. ಸುಲಿಗೆ ಆರೋಪ ಸಂಬಂಧ ಕಾಟನ್ ಪೇಟೆ ಠಾಣೆಯಲ್ಲಿ ಎಸಿಪಿ, ಇನ್ಸ್ಪೆಕ್ಟರ್ಗಳ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋಟ್ ಕಾರ್ಯನಿರ್ವಹಿಸಲಿದ್ದಾರೆ.
ಇದಲ್ಲದೆ ಸಿಸಿಬಿ ಡಿಸಿಪಿಗಳು ನಡೆಸಿದ ವಿಚಾರಣಾ ವರದಿ ಅವಲೋಕಿಸಿರುವ ಡಿಜಿಪಿ ಪ್ರವೀಣ್ ಸೂದ್, ಮೂವರು ಆರೋಪಿತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಎಸಿಬಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿತರಾದ ಎಸಿಪಿ, ಇನ್ಸ್ಪೆಕ್ಟರ್ಗಳ ವಿರುದ್ಧ ಎಸಿಬಿ ಪ್ರತ್ಯೇಕ ತನಿಖೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.ಲಾಕ್ಡೌನ್ ಸಂದರ್ಭದಲ್ಲಿ ಸಿಗರೇಟ್ ವಿತರಕರಿಂದ ಎಸಿಪಿ ಪ್ರಭುಶಂಕರ್ ಇನ್ಸ್ಪೆಕ್ಟರ್ಗಳಾದ ಅಜಯ್, ನಿರಂಜನ್ ಕುಮಾರ್ ಸೇರಿ ಒಟ್ಟು 1.75 ಕೋಟಿ ರೂ. ಸುಲಿಗೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಾಗ ಪ್ರಕರಣ ಬೆಳಕಿಗೆ ಬಂದಿತ್ತು. ತನಿಖೆ ಬಳಿಕ ಮೂವರು ಅಧಿಕಾರಿಗಳು ಸಸ್ಪೆಂಡ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ