Bangalore: ಎಇಪಿಎಸ್‌ ದುರ್ಬಳಕೆ ಮಾಡಿ ವಂಚನೆ: ನಾಲ್ವರ ಬಂಧನ

ಬೆಂಗಳೂರು ನಗರ ಸೈಬರ್‌ ಕ್ರೈಂನ ವಿಶೇಷ ಘಟಕಕ್ಕೆ ಸಿಕ್ಕಿ ಬಿದ್ದ ನಯವಂಚಕರು

Team Udayavani, Jan 18, 2024, 3:12 PM IST

14-bng

ಬೆಂಗಳೂರು: ಆಧಾರ್‌ ಕಾರ್ಡ್‌ ಮತ್ತು ಫಿಂಗರ್‌ ಪ್ರಿಂಟ್‌ ಬಳಸಿ ಸಾರ್ವಜನಿಕರ ಬ್ಯಾಂಕ್‌ ಖಾತೆಯಲ್ಲಿದ್ದ ಲಕ್ಷಾಂತರ ರೂ. ದೋಚುತ್ತಿದ್ದ ಬಿಹಾರ ಮೂಲದ ನಾಲ್ವರು ಸೈಬರ್‌ ವಂಚಕರನ್ನು ಬೆಂಗಳೂರು ನಗರ ಸೈಬರ್‌ ಕ್ರೈಂನ ವಿಶೇಷ ಘಟಕ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಿಹಾರ ಮೂಲದ ರುಹಮಾನ್‌, ಅಜುಬರ್‌, ಆರೀಫ್, ನಾಶೀರ್‌ ಅಹಮದ್‌ ಎಂಬವರನ್ನು ಬಂಧಿಸಲಾಗಿದೆ.

ಆಧಾರ್‌ ಕಾರ್ಡ್‌ ಎನೆಬಲ್‌ ಪೇಮೆಂಟ್‌ ಸಿಸ್ಟಂ(ಎಇಪಿಎಸ್‌) ದುರ್ಬಳಕೆ ಮಾಡಿಕೊಂಡು ವಂಚಕರು, ಬೆರಳಚ್ಚು ಬಳಸಿ ಗ್ರಾಹಕರಿಗೆ ಯಾವುದೇ ಒಟಿಪಿ, ಸಂದೇಶ ಹೋಗದೇ ಹಣ ಎಗರಿಸುತ್ತಿದ್ದರು. ಈ ರೀತಿ ನಗರದ ಎಂಟು ಸಿಇಎನ್‌ ಠಾಣೆ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಇದುವರೆಗೂ 128ಕ್ಕೂ ಹೆಚ್ಚು ಎಇಪಿಎಸ್‌ ಪ್ರಕರಣಗಳು ದಾಖಲಾಗಿವೆ.

ಹೀಗಾಗಿ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳ ವಿಚಾರಣೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿ ದೇಶದ ಹಲವು ರಾಜ್ಯಗಳಲ್ಲಿ ವಂಚಿಸಿದ್ದಾರೆ.

ಅಲ್ಲದೆ, ರಾಜ್ಯದ ಕಂದಾಯ ಇಲಾಖೆಯ ವೆಬ್‌ಸೈಟ್‌ನಿಂದಲೇ ಬಯೋಮೆಟ್ರಿಕ್‌ ಸೇರಿ ಕೆಲವೊಂದು ಮಾಹಿತಿ ಕಳವು ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಹೀಗಾಗಿ ಸಂಬಂಧಿಸಿದ ಇಲಾಖೆಗೆ ಪತ್ರದ ಮೂಲಕ ಗೌಪ್ಯತೆ ಕಾಪಾಡುವಂತೆ ಮನವಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಒಂದು ಫಿಂಗರ್‌ ಪ್ರಿಂಟ್‌ಗೆ 5 ಸಾವಿರಕ್ಕೆ ಮಾರಾಟ:

ಬಿಹಾರ ಮೂಲದ ವಂಚಕರು ಸ್ಥಳೀಯವಾಗಿ ಕಸ್ಟಮರ್‌ ಸರ್ವಿಸ್‌ ಸೆಂಟರ್‌ ಇಟ್ಟುಕೊಂಡಿದ್ದರು. ಬೆರಳಚ್ಚು ಬಳಸಿ ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಬಂಧಿತ ಪೈಕಿ ಕೆಲವರು ಸುಲಭವಾಗಿ ಆಧಾರ್‌ ಕಾರ್ಡ್‌ ನಂಬರ್‌ ಹಾಗೂ ಬೆರಳಚ್ಚು ಸಿಗುವ ಕರ್ನಾಟಕ ಸೇರಿ ಬೇರೆ ರಾಜ್ಯ ಸರ್ಕಾರಗಳ ಕಂದಾಯ ಇಲಾಖೆ ವೆಬ್‌ ಸೈಟ್‌ನಿಂದ ಮಾಹಿತಿ ಪಡೆಯುತ್ತಿದ್ದರು. ಈ ಮೂಲಕ ಹಣ ದೋಚುವ ಜತೆಗೆ ಅರೋಪಿಗಳು ವೆಬ್‌ಸೈಟ್‌ನಿಂದ ಫಿಂಗರ್‌ ಪ್ರಿಂಟ್‌ ಪಡೆದು 5 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ.

ಅಲ್ಲದೆ, ಗ್ರಾಹಕರ ಮೊಬೈಲ್‌ ಸಂಖ್ಯೆ, ಇ-ಮೇಲ್‌ ವಿಳಾಸದ ಮೂಲಕ ವೆಬ್‌ಸೈಟ್‌ ಪ್ರವೇಶಿಸುತ್ತಿದ್ದ ಆರೋಪಿಗಳು, ಅದರಲ್ಲಿದ್ದ ಸಾರ್ವಜನಿಕರ ನೋಂದಣಿ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುತ್ತಿದ್ದರು. ಬಳಿಕ, ಅದರಲ್ಲಿರುವ ಆಧಾರ್‌ ಸಂಖ್ಯೆ, ಬೆರಳಚ್ಚನ್ನು ಫೋಟೋ ಪ್ರಿಂಟ್‌ ಹಾಳೆ ಮೇಲೆ ನಕಲು ಮಾಡಿಕೊಳ್ಳುತ್ತಿದ್ದರು. ಎಇಪಿಎಸ್‌ (ಆಧಾರ್‌ ಎನೆಬಲ್‌ ಪೇಮೆಂಟ್‌ ಸಿಸ್ಟಂ) ಸೌಲಭ್ಯದ ಮೂಲಕ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾ ವಣೆ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.