ಮೂರನೇ ಅಲೆಗೆ ಮತ್ತೊಂದು ಮೇಕ್‌ಶಿಫ್ಟ್ಆಸ್ಪತ್ರೆ ಸಜ್ಜು

2ನೇ ಅಲೆ ಆರಂಭದಲ್ಲಿಯೇ ಕೆ.ಸಿ.ಜನರಲ್‌ ಆಸ್ಪತ್ರೆಯು ಮೇಕ್‌ಶಿಪ್ಟ್ ಕೊರೊನಾ ಆಸ್ಪತ್ರೆಯನ್ನು ಆರಂಭಿಸಿತ್ತು.

Team Udayavani, Jul 29, 2021, 1:29 PM IST

ಮೂರನೇ ಅಲೆಗೆ ಮತ್ತೊಂದು ಮೇಕ್‌ಶಿಫ್ಟ್ಆಸ್ಪತ್ರೆ ಸಜ್ಜು

ಬೆಂಗಳೂರು: ಕೊರೊನಾ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ನಗರದ ಸರ್ಕಾರಿ ಆಸ್ಪತ್ರೆಗಳು ಸಜ್ಜಾಗುತ್ತಿದ್ದು, ಹೆಚ್ಚುವರಿ ಕಟ್ಟಡ, ಹಾಸಿಗೆಗಳ ಮೂಲಕ ಮೂಲಸೌಕರ್ಯಗಳನ್ನು ಹೆಚ್ಚಿಸಿಕೊಳ್ಳುತ್ತಿವೆ. ಇದರ ಒಂದು ಭಾಗವಾಗಿ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ ಪಕ್ಕದಲ್ಲಿಯೇ 200 ಹಾಸಿಗೆಗಳ ಸುಸಜ್ಜಿತ ಮೆಕ್‌ ಶಿಪ್ಟ್ ಮಾಡಲ್‌(ತುರ್ತು ಸಂದರ್ಭದ ತಾತ್ಕಾಲಿಕ) ಆಸ್ಪತ್ರೆ ತಲೆ ಎತ್ತಿದ್ದು, ಮುಂದಿನ ತಿಂಗಳು ಆರಂಭವಾಗಲಿದೆ.

ಈಗಾಗಲೇ ಬಿಬಿಎಂಪಿ ವರ್ಷಾಂತ್ಯದೊಳಗೆ ಪ್ರಾಥಮಿಕ ಆಸ್ಪತ್ರೆಗಳು ಇಲ್ಲದ ವಾರ್ಡ್‌ಗಳಲ್ಲಿ ಆಸ್ಪತ್ರೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭಿಸಲು ಮುಂದಾಗುತ್ತಿದೆ. ಅಲ್ಲದೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಜಯ ನಗರದಲ್ಲಿ ಸಿಬ್ಬಂದಿಗೆ ಮೀಸಲಿಟ್ಟಿದ್ದ ಆಸ್ಪತ್ರೆಗಳನ್ನು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತನೆಮುಂದಾಗಿದ್ದು, ನವೆಂಬರ್‌ ಒಳಗಾಗಿ ಸೇವೆ ಪ್ರಾರಂಭವಾಗಲಿದೆ. 2ನೇ ಅಲೆ ಆರಂಭದಲ್ಲಿಯೇ ಕೆ.ಸಿ.ಜನರಲ್‌ ಆಸ್ಪತ್ರೆಯು ಮೇಕ್‌ಶಿಪ್ಟ್ ಕೊರೊನಾ ಆಸ್ಪತ್ರೆಯನ್ನು ಆರಂಭಿಸಿತ್ತು. ಇದರ ಮುಂದುವರೆದ ಭಾಗವಾಗಿ ರಾಜ್ಯದ ಮೊದಲ ಕೊರೊನಾ ಚಿಕಿತ್ಸಾ
ಕೇಂದ್ರವಾಗಿದ್ದ ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿದೆ.

ಮೇ ತಿಂಗಳ ಅಂತ್ಯದಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಕೇವಲ ಎರಡು ತಿಂಗಳಅಂತರಲ್ಲಿಯೇಈಸುಸಜ್ಜಿತಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಸದ್ಯ ಅಂತಿಮ ಹಂತದ ತಯಾರಿಗಳು ನಡೆಯುತ್ತಿದ್ದು, ಆಗಸ್ಟ್‌ ಎರಡನೇ ವಾರದಲ್ಲಿ ಲೋಕಾರ್ಪಣೆಯಾಗಲಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಏನೆಲ್ಲಾ ಸೌಲಭ್ಯಗಳಿವೆ?: ಆಸ್ಪತ್ರೆಯು 200 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ತುರ್ತು ನಿಗಾ ಘಟಕ (ಐಸಿಯು) 30 ಹಾಸಿಗೆಗಳಿವೆ. ಕೃತಕ ಆಕ್ಸಿಜನ್‌ ಅವಲಂಭಿತ ಘಟಕ, ಟ್ರಿಯಾಜ್‌ ಘಟಕ, ಸೆಮಿನಾರ್‌ ಹಾಲ್‌, ಸಿಬ್ಬಂದಿ ಕೊಠಡಿಗಳಿವೆ. ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ ಸಿದ್ಧ ಪಡಿಸಲಾಗುತ್ತಿದ್ದು, ಇದಕ್ಕೆ ಪಕ್ಕದ ಇಂದಿರಾಗಾಂಧಿ ಆಸ್ಪತ್ರೆಯು ಸಹಕಾರ ನೀಡುತ್ತಿದೆ.

ಇತರೆ ಆಸ್ಪತ್ರೆಗಳಿಂದ ಸಿಬ್ಬಂದಿ ವ್ಯವಸ್ಥೆ:
ತಾತ್ಕಾಲಿಕ ಆಸ್ಪತ್ರೆಯಾಗಿರುವುದರಿಂದ ಸದ್ಯ ಈ ಆಸ್ಪತ್ರೆಗೆ ನಗರದ ಪ್ರಮುಖ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ: ಕೊರೊನಾ ಎರಡನೇ ಅಲೆ ಆರಂಭದಲ್ಲಿಯೇ ಸರ್ಕಾರಿ ಆಸ್ಪತ್ರೆಗಳ ಹಾಸಿಗೆಗಳು ಭರ್ತಿಯಾಗಿ ಖಾಸಗಿ ಆಸ್ಪತ್ರೆಗಳ ಅವಲಂಬನೆ ಅನಿವಾರ್ಯವಾಗಿತ್ತು. ಮೇ ಮೊದಲ ಎರಡು ವಾರ ಬೆಂಗಳೂರಿನಲ್ಲಿ25 ಸಾವಿರ ಹಾಸಿಗೆ ಬೇಡಿಕೆ ಇತ್ತು. ಆದರೆ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಸೇರಿ ಕೇವಲ 17 ಸಾವಿರ ಹಾಸಿಗೆಗಳು ಮಾತ್ರಲಭ್ಯವಾಗಿದ್ದವು. ಶೇ.30 ರಷ್ಟು ಹಾಸಿಗೆ ಕೊರತೆ ಉಂಟಾಗಿತ್ತು. ಆ ಸಂದರ್ಭದಲ್ಲಿ ಹಾಸಿಗೆ ಲಭ್ಯವಾಗದೇ ನೂರಾರು ಸೋಂಕಿತರು ಆ್ಯಂಬುಲೆನ್ಸ್‌, ರಸ್ತೆ ಬದಿಯಲ್ಲಿಯೇ ಪ್ರಾಣಬಿಟ್ಟಿದ್ದರು. ಇದರಿಂದ ಪಾಠ ಕಲಿತ ಸರ್ಕಾರವು ಕೊರೊನಾ ಮೂರನೇ ಅಲೆಗೆ ಸಿದ್ಧತೆ
ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣವಾಗುತ್ತಿವೆ.

ಮೂರನೇ ಅಲೆಯ ಮುಂಜಾಗ್ರತಾಕ್ರಮವಾಗಿ ಆಸ್ಪತ್ರೆ ಮೇಕ್‌ಶಿಫ್ಟ್ ನಿರ್ಮಿಸಲಾಗಿದೆ. ಅಂತಿಮ ಹಂತದ ತಯಾರಿ ನಡೆಸಿದ್ದು, ಇನ್ನೆರಡು ವಾರಗಳಲ್ಲಿ ಆಸ್ಪತ್ರೆ ಕಾರ್ಯಾರಂಭ ವಾಗಲಿದೆ. ಕೊರೊನಾ ಸೋಂಕಿತರು, ತೀವ್ರ ಉಸಿರಾಟ ಸಮಸ್ಯೆ ಹೊಂದಿರುವ ರೋಗಿಗಳಿಗೆ (ಸಾರಿ) ಇಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಹಾಸಿಗೆಗಳಕೊರತೆ ತಗ್ಗಲಿದೆ.
ಡಾ.ಸಿ.ನಾಗರಾಜ್‌, ನಿರ್ದೇಶಕರು,
ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ.

ಜಯಪ್ರಕಾಶ್‌ ಬಿರಾದಾರ

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.