ಹಫ್ತಾ ನೀಡದ್ದಕ್ಕೆ ಗುಜರಿ ವ್ಯಾಪಾರಿಯ ಅಪಹರಿಸಿದ್ದ 3 ನಕಲಿ ಪೊಲೀಸರ ಸೆರೆ
ಏರಿಯಾದಲ್ಲಿ ಹವಾ ಸೃಷ್ಟಿಸಲು ರೌಡಿಯಿಂದ ಹಫ್ತಾ ವಸೂಲಿ
Team Udayavani, Mar 14, 2024, 11:34 AM IST
ಬೆಂಗಳೂರು: ಅಮೃತಹಳ್ಳಿಯಲ್ಲಿ ಪೊಲೀಸರ ವೇಷ ಧರಿಸಿಕೊಂಡು ಅಪಹರಿಸಿದ್ದ ಗುಜರಿ ವ್ಯಾಪಾ ರಿಯು ತಪ್ಪಿಸಿಕೊಳ್ಳಲು ಮುಂದಾದಾಗ ಬೆನ್ನತ್ತಿ ಹಿಡಿಯಲು ಹೋಗಿ ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಯಲಹಂಕ ಠಾಣೆಯ ರೌಡಿ ಮುಜಮಿಲ್ ಅಲಿಯಾಸ್ ಮುಜ್ಜು, ಸೈಯದ್ ಶಿಫಾಸ್ ಹಾಗೂ ಯೂಸುಫ್ ಬಂಧಿತರು.
ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ನಲ್ಲಿ ತನ್ನ ಹವಾ ಸೃಷ್ಟಿಸಲು ರೌಡಿ ಮುಜಾಮಿಲ್ ಹಫ್ತಾ ವಸೂಲಿಗೆ ಮುಂದಾಗಿದ್ದ. ಚಿಂದಿ ಆಯುವುದಕ್ಕೂ ಪ್ರತಿ ತಿಂಗಳು ಹಫ್ತಾ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ ತನ್ನ ಸಹಚರರಿಗೆ ಹಫ್ತಾ ಕೊಡಲು ನಿರಾಕರಿಸಿದ್ದ ಗುಜರಿ ವ್ಯಾಪಾರಿಯೊಬ್ಬನನ್ನು ಅಪಹರಿಸಲು ಸಂಚು ರೂಪಿಸಿದ್ದ. ಅದರಂತೆ ಮಧ್ಯರಾತ್ರಿ ಕಾರಿನಲ್ಲಿ ಬಂದು ಪೊಲೀಸರೆಂದು ಹೇಳಿ ಕಾರಿನಲ್ಲಿ ಗುಜರಿ ವ್ಯಾಪಾರಿಯನ್ನು ಅಪಹರಿಸಿ ಸ್ವಲ್ಪ ದೂರ ಹೋದಾಗ ಆರೋಪಿಗಳ ಬಗ್ಗೆ ಗುಜುರಿ ವ್ಯಾಪಾರಿಗೆ ಅನುಮಾನ ಮೂಡಿತ್ತು.
ಕಾರಿನಿಂದ ಇಳಿದು ತಪ್ಪಿಸಿಕೊಳ್ಳಲು ಗುಜರಿ ವ್ಯಾಪಾರಿ ಓಡುತ್ತಿದ್ದಾಗ ಆತನನ್ನು ಆರೋಪಿಗಳು ಹಿಂಬಾಲಿಸಿದ್ದರು. ಅದೇ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಅಸಲಿ ಪೊಲೀಸರು ಗುಜರಿ ವ್ಯಾಪಾರಿಯನ್ನು ಆರೋಪಿಗಳು ಹಿಂಬಾಲಿಸಿಕೊಂಡು ಓಡುತ್ತಿರುವುದನ್ನು ಗಮನಿಸಿದ್ದರು. ಓಡುತ್ತಿದ್ದ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ನಕಲಿ ಪೊಲೀಸರ ಅಸಲಿ ಅಂಗತಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಾಗಿದೆ.
■ ಉದಯವಾಣಿ ಸಮಾಚಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ