Arrested: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿದವ ಬಂಧನ
Team Udayavani, Mar 13, 2024, 9:39 AM IST
ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಅವರ ಮಗಳನ್ನು ಎಳೆದಾಡಿದ್ದ ಬಿಹಾರ ಮೂಲದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಟ್ಟೇಗಾರ ಪಾಳ್ಯದ ನಿವಾಸಿ ಬಿಹಾರ ಮೂಲದ ಶಂಕರ್ ಬಂಧಿತ ಆರೋಪಿ. ಟೈಲ್ಸ್ ಹಾಕುವ ಕೆಲಸಮಾಡಿಕೊಂಡಿದ್ದ ಆರೋಪಿ ಶಂಕರ್ ಮಾ.7 ರಂದು ರಾತ್ರಿ 10.30ರಲ್ಲಿ ತನ್ನ ಸ್ನೇಹಿತರನ್ನು ಕರೆದುಕೊಂಡು ತನ್ನ ಮನೆ ಬಳಿ ಬಂದಿದ್ದ. ಆ ಸಂದರ್ಭದಲ್ಲಿ ಪಕ್ಕದ ಮನೆಯ ನಾಯಿ ಬೊಗಳುತ್ತಿದ್ದಾಗ, ಶಂಕರ್ ಹಾಗೂ ಸ್ನೇಹಿತರು ನಾಯಿ ಮೇಲೆ ಹಲ್ಲೆ ನಡೆಸಿ ಜಗಳ ಮಾಡುತ್ತಿದ್ದರು. ನಾಯಿ ಸಾಕಿದ್ದ ಮನೆ ಮಾಲೀಕರು ಹೊರಗೆ ಬಂದು ಈ ಬಗ್ಗೆ ಪ್ರಶ್ನಿಸಿದಾಗ, ಆರೋಪಿಗಳು ಮಾಲೀಕರ ಮೇಲೆಯೇ ಹಲ್ಲೆ ನಡೆಸಿದ್ದಾರೆ. 2ನೇ ವರ್ಷದ ಬಿ.ಕಾಂ ಓದುತ್ತಿರುವ 20 ವರ್ಷದ ಮನೆ ಮಾಲೀಕರ ಮಗಳು ಅಪ್ಪನ ರಕ್ಷಣೆಗೆ ಬಂದಾಗ, ಆರೋಪಿಗಳ ಗುಂಪು ಆಕೆಯನ್ನೂ ಹಿಡಿದು ಎಳೆದಾಡಿದೆ.
ಇದನ್ನು ಸೆರೆಹಿಡಿದಿದ್ದ ವಿದ್ಯಾರ್ಥಿನಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ವಿಡಿಯೋ ಕಳುಹಿಸಿ, ನ್ಯಾಯ ಕೊಡಿಸುವಂತೆ ಕೋರಿಕೊಂಡಿದ್ದಳು. ವಿಚಾರ ತಿಳಿದು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಆರೋಪಿ ಶಂಕರ್ನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ
Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ
Ravichandran ಡ್ರೀಮ್ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿನಿ?