ಗ್ರಾಹಕರ ಸೋಗಿನಲ್ಲಿ ಆಯುರ್ವೇದಿಕ್‌ ಸೆಂಟರ್‌ಗೆ ನುಗ್ಗಿ ಸುಲಿಗೆ: ಐವರ ಬಂಧನ

ಮಹಿಳೆಯ ಪ್ರಜ್ಞೆ ತಪ್ಪಿಸಿ ಕೈಕಾಲು ಕಟ್ಟಿ, ಮಾಂಗಲ್ಯಸರ ಸೇರಿ 2 ಚಿನ್ನದ ಸರ, ಮೊಬೈಲ್‌ ದರೋಡೆ

Team Udayavani, Jan 18, 2024, 3:01 PM IST

13-bng

ಬೆಂಗಳೂರು: ಸಾಲ ತೀರಿಸಲು ಗ್ರಾಹಕರ ಸೋಗಿನಲ್ಲಿ ಹಾಡುಹಗಲೇ ಆಯುರ್ವೇದಿಕ್‌ ಸೆಂಟರ್‌ಗೆ ನುಗ್ಗಿ ಮಹಿಳೆಯ ಕೈ, ಕಾಲು ಕಟ್ಟಿ ಮಾಂಗಲ್ಯ ಸರ ಸೇರಿ ಎರಡು ಚಿನ್ನದ ಸರ ಹಾಗೂ ಮೊಬೈಲ್‌ ಸುಲಿಗೆ ಮಾಡಿದ್ದ ದಂಪತಿ ಸೇರಿ ಐವರು ಕೊಡಿಗೇಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾರೋಹಳ್ಳಿ ನಿವಾಸಿ ಗುರು, ಆತನ ಪತ್ನಿ ರೇಣುಕಾ, ಸ್ನೇಹಿತೆ ಪ್ರಭಾವತಿ ಹಾಗೂ ಈಕೆಯ ಸಂಬಂಧಿಕರಾದ ರುದ್ರೇಶ್‌, ಸಂದೀಪ್‌ನನ್ನು ಬಂಧಿಸಲಾಗಿದೆ.

ಆರೋಪಿಗಳು ಜ.14ರಂದು ಕೊಡಿಗೇಹಳ್ಳಿ ಸಮೀಪದ ತಿಂಡ್ಲು ಸರ್ಕಲ್‌ನಲ್ಲಿರುವ ಗಂಗಾ ಆಯುರ್ವೇದಿಕ್‌ ಸೆಂಟರ್‌ಗೆ ನುಗ್ಗಿ, ಅನುಶ್ರೀ ಎಂಬಾಕೆಯ ಕೈ, ಕಾಲು ಕಟ್ಟಿ ಹಾಕಿ, 35 ಗ್ರಾಂ ತೂಕದ ಮಾಂಗಲ್ಯ ಸರ, 13 ಗ್ರಾಂ ತೂಕದ ಚಿನ್ನದ ಸರ ಹಾಗೂ ಒಂದು ಐಫೋನ್‌ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಅನುಶ್ರೀ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಪೈಕಿ ಗುರು, ರೇಣುಕಾಳನ್ನು 2ನೇ ಮದುವೆಯಾಗಿದ್ದು, ಗುರು ಹಾಗೂ ರೇಣುಕಾ ಸ್ನೇಹಿತೆ ಪ್ರಭಾವತಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಳ ಸಂಚಿನಂತೆ ಆರೋಪಿಗಳು ಆಯುರ್ವೇದಿಕ್‌ ಸೆಂಟರ್‌ಗೆ ನುಗ್ಗಿ ಅನುಶ್ರಿ ಅವರನ್ನು ಸುಲಿಗೆ ಮಾಡಿದ್ದರು ಎಂದು ಪೊಲೀಸರು ಹೇಳಿದರು. ಬಳಿಕ ಅನುಶ್ರೀ ಎಚ್ಚರಗೊಂಡ ಕೂಡಲೇ ಸ್ಥಳೀಯರ ನೆರವು ಪಡೆದು ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಯಲಹಂಕದ ಉಪವಿಭಾಗದ ಎಸಿಪಿ ಪಿ.ನರಸಿಂಹಮೂರ್ತಿ, ಠಾಣಾಧಿಕಾರಿ ಎಂ.ಎ.ಮಹೇಶ್‌, ಪಿಎಸ್‌ಐ ಕೌಶಿಕ್‌, ಅನಿಲ್‌, ಪ್ರೊಬೆಷನರಿ ಪಿಎಸ್‌ಐ ಪದ್ಮನಾಭ ಹಾಗೂ ತಂಡ ಕಾರ್ಯಾಚರಣೆ ನಡೆಸಿದೆ.

ಸ್ನೇಹಿತೆಯೇ ಟಾರ್ಗೆಟ್‌

ಆರೋಪಿ ರೇಣುಕಾ ಈ ಹಿಂದೆ ಇದೇ ಆಯುರ್ವೇದಿಕ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಆಗ ಅನುಶ್ರೀ ಪರಿಚಯವಿತ್ತು. ಈ ವೇಳೆ ಅನುಶ್ರೀ ಬಳಿ ಚಿನ್ನಾಭರಣ, ನಗದು ಹಾಗೂ ಸೆಂಟರ್‌ ಅನ್ನು ಈಕೆಯ ನಿರ್ವಹಿಸುತ್ತಿದ್ದರಿಂದ ಭಾರೀ ನಗದು ಸಿಗುತ್ತದೆ ಎಂದು ಭಾವಿಸಿದ ರೇಣುಕಾ ಪತಿ ಹಾಗೂ ಇತರರ ಜತೆ ಸೇರಿ ಸಂಚು ರೂಪಿಸಿದ್ದಳು.

ಅದರಂತೆ ಜ.13ರಂದು ಸಂಜೆ ಪ್ರಭಾವತಿ ಆಯುರ್ವೇದಿಕ್‌ ಸೆಂಟರ್‌ಗೆ ಹೋಗಿ ಬೆನ್ನು ನೋವಿಗೆ ಚಿಕಿತ್ಸೆ ಬೇಕೆಂದು ಕೇಳಿದ್ದಾಳೆ. ಆಗ ಅನುಶ್ರೀ, ಮರು ದಿನ ಬರುವಂತೆ ಸೂಚಿಸಿದ್ದರು. ಹೀಗಾಗಿ ಜ.14ರಂದು ಬೆಳಗ್ಗೆಯೇ ಸೆಂಟರ್‌ಗೆ ಬಂದ ಪ್ರಭಾವತಿಗೆ ಅನುಶ್ರೀ ಚಿಕಿತ್ಸೆ ಕೊಡಲು ಒಳಗಡೆ ಕರೆದೊಯ್ಯುತ್ತಿದ್ದಂತೆ, ರುದ್ರೇಶ್‌, ಸಂದೀಪ್‌ ಮತ್ತು ಗುರು ಏಕಾಏಕಿ ಸೆಂಟರ್‌ನ ಒಳಗಡೆ ನುಗ್ಗಿದ್ದಾರೆ.

ಅದನ್ನು ಪ್ರಶ್ನಿಸಿದ ಅನುಶ್ರೀಗೆ, ಆರೋಪಿ ಗುರು, ಪ್ರಭಾವತಿ ತನ್ನ ಪತ್ನಿ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ಆನ್‌ಲೈನ್‌ ಪೇಮೆಂಟ್‌ ಮಾಡುತ್ತೇನೆ ಎಂದು ಜೇಬಿನಿಂದ ಕರವಸ್ತ್ರ ತೆಗೆದು, ಅದರಲ್ಲಿದ್ದ ಕೆಮಿಕಲ್‌ನಿಂದ ಅನುಶ್ರೀಯ ಮುಖಕ್ಕೆ ಸಿಂಪಡಿಸಿ ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಆಕೆಯ ಕೈ, ಕಾಲುಗಳನ್ನು ಕಟ್ಟಿಹಾಕಿ, ಮೈಮೇಲಿದ್ದ ಮಾಂಗಲ್ಯ ಸರ ಸೇರಿ ಎರಡು ಚಿನ್ನದ ಸರಗಳು, 1 ಐಫೋನ್‌ ಸುಲಿಗೆ ಮಾಡಿ ಪರಾರಿಯಾಗಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.