Crime: ಯುವಕನ ಕೊಂದು ಪೊದೆಗೆ ಎಸೆದ ದುಷ್ಕರ್ಮಿಗಳು
Team Udayavani, Dec 7, 2023, 10:24 AM IST
ಬೆಂಗಳೂರು: ಹಳೇ ದ್ವೇಷಕ್ಕೆ ಯುವಕ ನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.
ಚಿಕ್ಕಲ್ಲಸಂದ್ರ ನಿವಾಸಿ ಶರತ್(30) ಕೊಲೆಯಾದವ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶರತ್ನನ್ನು ಮಂಗಳವಾರ ರಾತ್ರಿ ಮಲ್ಲಸಂದ್ರ ಸಮೀಪದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು, ಮೃತದೇಹವನ್ನು ಸಮೀಪದ ಪೊದೆ ಪಕ್ಕ ಎಸೆದು ಪರಾರಿಯಾಗಿದ್ದಾರೆ.
ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಕೊಲೆಯಾದವ ಶರತ್ ಎಂಬುದು ಗೊತ್ತಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಮತ್ತೂಂದೆಡೆ ಶರತ್ ವಿರುದ್ಧ ಈ ಹಿಂದೆ ಆರ್.ಆರ್.ನಗರ ಠಾಣೆ ವ್ಯಾಪ್ತಿಯಲ್ಲಿ ಎನ್ಡಿಪಿಎಸ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆಯೂ ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!