ಪೋಷಕರು ಬುದ್ಧಿವಾದ ಹೇಳಿದಕ್ಕೆ ಬಾಲಕ ಆತ್ಮಹತ್ಯೆ
ಹೋಮ್ವರ್ಕ್, ಮನೆ ಕೆಲಸ ಮಾಡು ಎಂದಿದಕ್ಕೆ ಬೇಸರ
Team Udayavani, Nov 13, 2022, 2:55 PM IST
ಬೆಂಗಳೂರು: ಪೋಷಕರು ಮನೆ ಕೆಲಸ ಮಾಡು ಎಂದಿದಕ್ಕೆ ಬಾಲಕನೊಬ್ಬ ಮನೆಯ ಟೆರೆಸ್ ಮೇಲೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಟಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೋಳನಾಯಕನಹಳ್ಳಿಯ ಗೋವಿಂದಪ್ಪ ಎಂಬುವರ ಪುತ್ರ ಸಾಯಿ ಕುಮಾರ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಗೋವಿಂದಪ್ಪ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದು, ಚೋಳನಾಯಕನಹಳ್ಳಿಯಲ್ಲಿ ಕುಟುಂಬದ ಜತೆ ವಾಸವಾಗಿದ್ದಾರೆ. ಪುತ್ರ ಸಾಯಿಕುಮಾರ್ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಹೋಮ್ ವರ್ಕ್ ಮತ್ತು ಇತರೆ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ ಆತನ ಪೋಷಕರು ಬೈದು ಬುದ್ಧಿವಾದ ಹೇಳಿದ್ದಾರೆ. ಅದರಿಂದ ಬೇಸರಗೊಂಡ ಸಾಯಿ ಕುಮಾರ್, ಶುಕ್ರವಾರ ಮಧ್ಯಾಹ್ನ ಮನೆಯ ಟೆರೆಸ್ ಮೇಲೆ ಹೋಗಿ ಬಟ್ಟೆ ಒಣ ಹಾಕುವ ಕಬ್ಬಿಣ ಕಂಬಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ಬಹಳ ಹೊತ್ತಾದರೂ ಮಗ ಮನೆಗೆ ಬಂದಿಲ್ಲ. ಅದರಿಂದ ಆತಂಕಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಯ ಟೆರೆಸ್ ಮೇಲೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಹೆಬ್ಟಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ