ಬಿಬಿಎಂಪಿ: ಕಸ ಗುಡಿಸುವ ಯಂತ್ರ ಟೆಂಡರ್ ರದ್ದು
Team Udayavani, May 19, 2020, 6:43 AM IST
ಬೆಂಗಳೂರು: ನಗರದಲ್ಲಿ ಕಸಗುಡಿಸಲು ಯಾಂತ್ರಿಕ ವಾಹನ ಖರೀದಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕೌನ್ಸಿಲ್ನಲ್ಲಿ ಅನುಮೋದನೆ ನೀಡಿದ್ದ ಟೆಂಡರ್ಗೆ ರಾಜ್ಯ ಸರ್ಕಾರ ತಡೆ ನೀಡಿದ್ದು, ಮರು ಟೆಂಡರ್ ಕರೆಯಲು ಸೂಚಿಸಿದೆ. ಕಸ ಗುಡಿಸುವ ಯಂತ್ರ ಖರೀದಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್ಗೆ ಜನವರಿಯಲ್ಲಿ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿತ್ತು.
ಆದರೆ, ಇದರಲ್ಲಿನ ಲೋಪದ ಬಗ್ಗೆ ನಗರಾಭಿವೃದಿಟಛಿ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೌನ್ಸಿಲ್ ನಿರ್ಣಯವನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯಲು ಸೂಚನೆ ನೀಡಿದೆ. ನಗರದಲ್ಲಿನ ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳಲ್ಲಿ ಕಸ ಗುಡಿಸಲು 17 ಹೊಸ ಯಂತ್ರಗಳನ್ನು ಖರೀದಿಸಲಾಗಿತ್ತು. ಆ ವಾಹನಗಳನ್ನು ಪೂರೈಸಿರುವ ಗುತ್ತಿಗೆದಾರರೇ ಅದನ್ನು ನಿರ್ವಹಣೆ ಮಾಡಬೇಕು ಮತ್ತು ರಸ್ತೆ ಗುಡಿಸಲು ಸಿಬ್ಬಂದಿ ನಿಯೋಜಿಸಬೇಕು ಎಂದು ನಿಗದಿ ಮಾಡಲಾಗಿತ್ತು. ಇದಕ್ಕೆ ಬದಲಾಗಿ ಬಿಬಿಎಂಪಿ ಪ್ರತಿ ಕಿ.ಮೀ. ಕಸಗುಡಿಸಲು 600 ರೂ. ನೀಡುವ ಬಗ್ಗೆಯೂ ಕೌನ್ಸಿಲ್ ನಲ್ಲಿ ಅನುಮೋದನೆ ಪಡೆಯಲಾಗಿದೆ.
ಈ ಪ್ರಕ್ರಿಯೆ ಕಾನೂನು ಬಾಹಿರ ಎಂದು ನಗರಾಭಿವೃದಿ ಇಲಾಖೆ ಅಭಿಪ್ರಾಯಪಟ್ಟಿದೆ. ಪ್ರತಿದಿನ 65 ಕಿ.ಮೀ. ರಸ್ತೆ ಗುಡಿಸಬೇಕು ಎಂಬ ದೂರವನ್ನು 40 ಕಿ.ಮೀ.ಗೆ ಇಳಿಸಲಾಗಿದೆ. ಅಲ್ಲದೆ, ರಸ್ತೆ ಗುಡಿಸಲು ನಿಗದಿ ಮಾಡಿರುವ ದರದಲ್ಲೂ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದಂತಹ ದರಕ್ಕಿಂತ ಹೆಚ್ಚಿಸಲಾಗಿದೆ. ಇದರಿಂದ ಕೆಟಿಟಿಪಿ ಕಾಯ್ದೆ ಸ್ಪಷ್ಟ ಉಲ್ಲಂಘನೆ ಎಂದು ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ