ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಮತ್ತೆ ಪಾಲಿಕೆ ಫೇಲ್‌?


Team Udayavani, May 28, 2020, 5:46 AM IST

swachcha

ಬೆಂಗಳೂರು: ಕೇಂದ್ರ ಸರ್ಕಾರ ಪ್ರತಿ ವರ್ಷವೂ ಎಲ್ಲ ನಗರಗಳ ಕಸ ನಿರ್ವಹಣೆ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿ ನೀಡುವ ರ್‍ಯಾಂಕಿಂಗ್‌ ಪಟ್ಟಿ (ಸ್ವಚ್ಛ ಸರ್ವೇಕ್ಷಣ್‌ನಲ್ಲಿ) ಈ ಬಾರಿಯೂ ಪಾಲಿಕೆ ಹಿನ್ನಡೆ ಬಹುತೇಕ ಖಚಿತವಾಗಿದೆ. ಬೆಂಗಳೂರು 2019ನೇ ಸಾಲಿನಲ್ಲಿ ಸ್ವಚ್ಛ ಸರ್ವೇಕ್ಷಣ್‌ನಲ್ಲಿ 194ನೇ ರ್‍ಯಾಂಕಿಂಗ್‌ಗೆ ತೃಪ್ತಿ ಪಟ್ಟಿಕೊಂಡಿತ್ತು.

ಕಳೆದ ಒಂದು ವರ್ಷಗಳಲ್ಲಿ ಕಸ ನಿರ್ವಹಣೆ. ವಿಲೇವಾರಿ ಹಾಗೂ ಸ್ವಚ್ಛತೆಯ ವಿಚಾರಗಳಲ್ಲಿ ಯಾವುದೇ ಬದಲಾವಣೆಯಾಗದ ಹಿನ್ನೆಲೆಯಲ್ಲಿ ಈ ಬಾರಿಯೂ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಕಡಿಮೆ ರ್‍ಯಾಂಕಿಂಗ್‌ ಬರುವ ಸಾಧ್ಯತೆ ಇದೆ ಎಂದು ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರ್‍ಯಾಂಕಿಂಗ್‌ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಕೊರೊನಾ ತುರ್ತು ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಪ್ರಶಸ್ತಿ  ಪ್ರದಾನ ಮಾಡುವುದು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ರ್‍ಯಾಂಕಿಂಗ್‌ ಪ್ರಕಟ ಮಾಡುವುದನ್ನು ತಡೆಹಿಡಿಯಲಾಗಿದೆ ಎಂದು ತಿಳಿದುಬಂದಿದೆ.

ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಉತ್ತಮ  ರ್‍ಯಾಂಕಿಂಗ್‌ ಗಳಿಸಬೇಕಾದರೆ ಹಸಿ ಮತ್ತು ಒಣಕಸ ನಿರ್ವಹಣೆಯಲ್ಲಿ ಉತ್ತಮ ವ್ಯವಸ್ಥೆ ಮಾಡಿಕೊಂಡಿರಬೇಕು. ಭೂಭರ್ತಿ ಕೇಂದ್ರಗಳಿಗೆ ಅತೀ ಕಡಿಮೆ ಪ್ರಮಾಣದಲ್ಲಿ ಮಿಶ್ರಕಸ ಹೋಗಬೇಕು. ಪಾಲಿಕೆ ಈ ಎರಡೂ ವಿಚಾರಗಳಲ್ಲೂ ಎಡವಿದೆ. ನಗರದಲ್ಲಿ ಸದ್ಯ ಶೇ.20ರಿಂದ 30ರಷ್ಟು ಮಾತ್ರದಲ್ಲಿ  ಮಾತ್ರ ಕಸ ವಿಂಗಡಣೆಯಾಗುತ್ತಿದೆ.

ಅಷ್ಟೇ ಅಲ್ಲ, ಹಸಿಕಸ ಸಂಸ್ಕರಣೆಗಿಂತ ಹೆಚ್ಚಾಗಿ ಭೂಭರ್ತಿಗೆ ಕಸ ಹೆಚ್ಚು ಹೋಗುತ್ತಿದೆ. ಹೀಗಾಗಿ, ಈ ಅಂಶಗಳು ಸ್ವಚ್ಛ  ಸರ್ವೇಕ್ಷಣ್‌ನಲ್ಲಿ ಪಾಲಿಕೆ ರ್‍ಯಾಂಕಿಂಗ್‌ ಕುಸಿಯಲು ಕಾರಣವಾಗಲಿದೆ. ನಗರದಲ್ಲಿ ಹಸಿಕಸ ಹಾಗೂ ಒಣಕಸ ಪ್ರತ್ಯೇಕವಾಗಿ ಸಂಗ್ರಹ ಮಾಡುವ ಸಂಬಂಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಿಶ್ರ ಆಡಳಿತದ ಅವಧಿಯಲ್ಲಿ ಟೆಂಡರ್‌  ರೆಯಲಾಗಿತ್ತು. ಇದು  ಬಹುತೇಕ ಅಂತಿಮವಾಗಿ ನಗರದಲ್ಲಿ ಕಸದ ಸಮಸ್ಯೆಗೆ ಪರಿಹಾರ ಸಿಕ್ಕು, ಕಸ ನಿರ್ವಹಣೆಯಲ್ಲಿ ಪಾಲಿಕೆ ಮಾದರಿಯಾಗಲಿದೆ ಎಂದೇ ಆಶಯಿಸಲಾಗಿತ್ತು.

ಆದರೆ, ಮೊದಲಿನಿಂದಲೂ ಈ ಟೆಂಡರ್‌ಗೆ ವಿರೋಧ  ವ್ಯಕ್ತಪಡಿಸುತ್ತಿದ್ದ ಬಿಜೆಪಿ ಆಡಳಿತಕ್ಕೆ ಬರುತ್ತಿದ್ದಂತೆಯೇ ಇಂದೋರ್‌ ಮಾದರಿಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿತು. ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸದ್ಯ ಇಂದೋರ್‌ ಮಾದರಿಯನ್ನು ನಿಲ್ಲಿಸಲಾಗಿದೆ. ಹೀಗಾಗಿ, ಪಾಲಿಕೆ ವ್ಯಾಪ್ತಿಯಲ್ಲಿ ಹಳೆ ಮಾದರಿಯೇ ಮುಂದುವರಿದಿದೆ.

ಸ್ವಚ್ಛ ಸರ್ವೇಕ್ಷಣ್‌ ಮಾನದಂಡಗಳು
1. ಹಸಿ ಮತ್ತು ಒಣಕಸ ನಿರ್ವಹಣೆ ಜತೆಗೆ ಕಸ ಸಂಸ್ಕರಣೆ ಪ್ರಮಾಣ ಹೆಚ್ಚಿರಬೇಕು. ಅತೀ ಕಡಿಮೆ ಮೊತ್ತದ ಕಸ ಭೂಭರ್ತಿ ಕೇಂದ್ರಗಳಿಗೆ ಹೋಗಬೇಕು. ಪಾಲಿಕೆಯಲ್ಲಿ ಇದು ತದ್ವಿರುದ್ಧವಾಗಿದೆ.

2. ನಗರದ ವಾಣಿಜ್ಯ ಪ್ರದೇಶಗಳಲ್ಲಿ ದಿನಕ್ಕೆ ಎರಡು ಬಾರಿ ಸ್ವಚ್ಛತೆ ಮಾಡಬೇಕು. ಆದರೆ, ನಗರದಲ್ಲಿ ಮೆಜೆಸ್ಟಿಕ್‌ ಹಾಗೂ ಕೃಷ್ಣರಾಜೇಂದ್ರ ಮಾರುಕಟ್ಟೆ ಹೊರತುಪಡಿಸಿ, ಬಹುತೇಕ ಕಡೆಗಳಲ್ಲಿ ಸ್ವಚ್ಛತೆ ಕಾಪಾಡಿಲ್ಲ. ಕಾಂಪ್ಯಾಕ್ಟರ್‌ಗಳಿಗೆ  ಜಿಪಿಎಸ್‌ ಇರಬೇಕು ಈ ಕೆಲಸವನ್ನು ಪಾಲಿಕೆ ವಾಹನಗಳಿಗೆ ಮಾಡಿಸಿಲ್ಲ.

3. ಮುಖ್ಯವಾಗಿ ನಗರದ ಜನ ಸಾಂದ್ರತೆಗೆ ಅನುಗುಣವಾಗಿ ಸಮುದಾಯ, ಸಾರ್ವಜನಿಕ ಶೌಚಾಲಯಗಳು ಇರಬೇಕು.

4. ಸ್ವಚ್ಛ ಸರ್ವೇಕ್ಷಣ್‌ ಅಭಿಯಾನದಲ್ಲಿ ಜನಾಭಿಪ್ರಾಯಕ್ಕೆ ಮಾನ್ಯತೆ ಹೆಚ್ಚು. ಬೆಂಗಳೂರಿನಲ್ಲಿ 50 ಸಾವಿರ ಜನ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ ನಗರ ಬ್ಲಾಕ್‌ ಸ್ಪಾಟ್‌ಗಳ ಸಂಖ್ಯೆಯೂ ಇಳಿಕೆಯಾಗಿಲ್ಲ.

5. ಕಸ ನಿರ್ವಹಣೆಯಲ್ಲಿ ನಿಯಮ ಉಲ್ಲಂ ಸುವವರ ವಿರುದ್ಧ ದಂಡ ಪ್ರಯೋಗದಿಂದ ಈ ವರ್ಷ ಪಾಲಿಕೆಗೆ ತುಸು ಅಂಕ ಸಿಗಬಹುದು. ಈ ಎಲ್ಲ ಕಾರಣಗಳಿಂದ ಪಾಲಿಕೆ ರ್‍ಯಾಂಕಿಂಗ್‌ನಲ್ಲಿ ಹಿಂದುಳಿಯಲಿದೆ 200ರ ಗಡಿದಾಟಿ ರ್‍ಯಾಂಕಿಂಗ್‌  ಬಂದರೂ ಅಚ್ಚರಿ ಇಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.