Bengaluru: ಸಿಎಂ, ಗೌರ್ನರ್‌ ಹೆಸರಲ್ಲಿ ಶಿಕ್ಷಕಿಗೆ 4 ಕೋಟಿ ಟೋಪಿ

ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಶಿಕ್ಷಕಿಗೆ ವಂಚನೆ, ಪ್ರಧಾನಿ ಸೋದರನ ಪರಿಚಯವಿದೆ ಎಂದು ನಂಬಿಸಿದ್ದ ಆರೋಪಿಗಳು

Team Udayavani, Apr 3, 2024, 7:33 AM IST

1-aaa

ಬೆಂಗಳೂರು: ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಸದಸ್ಯತ್ವ ಕೊಡಿಸುವುದಾಗಿ ಚಿತ್ರಕಲಾ ಶಿಕ್ಷಕಿಗೆ ಬರೋಬ್ಬರಿ 4.10 ಕೋಟಿ ರೂ.ವಂಚಿಸಿದ್ದ ಸರ್ಕಾರಿ ನೌಕರ ಸೇರಿ ನಾಲ್ವರು ಆರೋಪಿಗಳನ್ನು ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನ ತಾವರೆಕೆರೆ ನಿವಾಸಿ ರಿಯಾಜ್‌ ಅಹ್ಮದ್‌ (41), ಮಲ್ಲೇಶ್ವರದ ನಿವಾಸಿ ಯೂಸುಫ್ ಸುಬ್ಬೆಕಟ್ಟೆ (47), ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ರುದ್ರೇಶ್‌ (35) ಮತ್ತು ಚಿಕ್ಕಮಗಳೂರು ಕಳಸ ತಾಲೂಕಿನ ತೋಟಗಾರಿಕಾ ನಿರ್ದೇಶಕರ ಕಚೇರಿ ಸಿಬ್ಬಂದಿ ಸಿ.ಚಂದ್ರಪ್ಪ (44) ಎಂಬುವರನ್ನು ಬಂಧಿಸಲಾಗಿದೆ.

ಕಲಬುರಗಿ ಮೂಲದ ಶಿಕ್ಷಕಿಗೆ ವಂಚನೆ: ತಲೆಮರೆಸಿಕೊಂಡಿರುವ ಚೇತನ್‌, ಶಂಕರ್‌, ಮಹೇಶ್‌,ಹರ್ಷವರ್ಧನ್‌ಗಾಗಿ ಶೋಧ ನಡೆಯುತ್ತಿದೆ. ಆರೋಪಿಗಳು ಕಲಬುರಗಿ ಮೂಲದ ಶಾಲೆಯೊಂದರ ಚಿತ್ರಕಲಾ ಶಿಕ್ಷಕಿ ನೀಲಮ್ಮ ಎಂ.ಬೆಳಮಗಿ ಅವರಿಗೆ ಕೆಪಿಎಸ್‌ಸಿ ಸದಸ್ಯತ್ವ ಸ್ಥಾನ ಕೊಡಿಸುವುದಾಗಿ 4.10 ಕೋಟಿ ರೂ. ಪಡೆದು ವಂಚಿಸಿದ್ದರು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಿ ಸಹೋದರ ಪರಿಚಯ ಎಂದಿದ್ದ ಆರೋಪಿ
ಆರೋಪಿಗಳ ಪೈಕಿ ರಿಯಾಜ್‌ ಅಹ್ಮದ್‌, ಸರ್ಕಾರಿ ನೌಕರರ ವರ್ಗಾವಣೆ ದಂಧೆಯ ಮಧ್ಯವರ್ತಿಯಾಗಿದ್ದಾನೆ ಎಂದು ಹೇಳಲಾಗಿದೆ. ಯೂಸುಫ್ ಸುಬ್ಬೆಕಟ್ಟೆ ಮಲ್ಲೇಶ್ವರದಲ್ಲಿ ಅಕ್ಯೂರೆಟ್‌ ಟೈಂ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಚೇರಿ ನಡೆಸುತ್ತಿದ್ದ. ಚಂದ್ರಪ್ಪ ಸರ್ಕಾರಿ ನೌಕರನಾಗಿದ್ದಾನೆ. ಇನ್ನು ರುದ್ರೇಶ್‌, ಈ ಹಿಂದೆ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ. ಜತೆಗೆ ಕರವೇ ಅಧ್ಯಕ್ಷ ಎಂದು ಹೇಳಿಕೊಂಡಿದ್ದ ಎಂಬುದು ಗೊತ್ತಾಗಿದೆ. ಇನ್ನು ವಂಚನೆಗೊಳಗಾದ ಚಿತ್ರಕಲಾ ಶಿಕ್ಷಕಿಗೆ ಪರಿಚಯಸ್ಥರೊಬ್ಬರ ಮೂಲಕ ರಿಯಾಜ್‌ ಪರಿಚಯವಾಗಿದೆ. ಈ ವೇಳೆ ಆರೋಪಿ, “ತನಗೆ ಪ್ರಧಾನಿ ನರೇಂದ್ರ ಮೋದಿ ಸಹೋದರನ ಪರಿಚಯವಿದೆ ಎಂದು ಹೇಳಿಕೊಂಡು, ಕೆಪಿಎಸ್‌ ಸಿಯಲ್ಲಿ ಸದಸ್ಯತ್ವ ಕೊಡಿಸುತ್ತೇನೆ. ಈ ಕುರಿತು ಅರ್ಜಿ ಸಲ್ಲಿಸುವಂತೆ ಹೇಳಿದ್ದ. ಆಗ, ಇತರೆ ಆರೋಪಿಗಳು ದೂರುದಾರರನ್ನು ಭೇಟಿಯಾಗಿ, ಅದಕ್ಕೆ 15-20 ಕೋಟಿ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಅಲ್ಲದೆ, ಮಲ್ಲೇಶ್ವರದಲ್ಲಿರುವ ಯೂಸುಫ್ ಸುಬ್ಬೆಕಟ್ಟೆಯ ಕಚೇರಿಗೆ ದೂರುದಾರ ಮಹಿಳೆಯನ್ನು ಕರೆಸಿಕೊಂಡಿದ್ದ ಆರೋಪಿಗಳು, ತಮ್ಮ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ-ಹಂತವಾಗಿ 4.10 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಆ ನಂತರ ಆರೋಪಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರ ಹೆಸರಿನ ನಕಲಿ ನೇಮಕಾತಿ ಆದೇಶ ಪ್ರತಿ ನೀಡಿ ವಂಚಿಸಿದ್ದರು. ಈ ಸಂಬಂಧ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಳಿಕ ತಾಂತ್ರಿಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು. ಸಿಸಿಬಿ ಇನ್‌ಸ್ಪೆಕ್ಟರ್‌ ಪ್ರವೀಣ್‌ ಹೆಲಿಗಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

40 ಲಕ್ಷ ರೂ., 4 ಮೊಬೈಲ್‌ ಜಪ್ತಿ
ಮಲ್ಲೇಶ್ವರದಲ್ಲಿರುವ ಆಕ್ಯೂರೇಟ್‌ ಟೈಂ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಚೇರಿಗೆ ಕರೆಸಿಕೊಂಡಿದ್ದ ಮಹಿಳೆಯನ್ನು ಆರೋಪಿಗಳು, ಆಕೆಯನ್ನು ನಂಬಿಸಲು ಮುಖ್ಯಮಂತ್ರಿಗಳ ಟಿಪ್ಪಣಿ, ನಡಾವಳಿ ಹಾಗೂ ನಕಲಿ ಸಹಿ ಮಾಡಿರುವ ಪತ್ರ ಹಾಗೂ ರಾಜ್ಯಪಾಲರಹೆಸರಿನಲ್ಲಿ ಸೃಷ್ಟಿಸಿದ್ದ ಸುಳ್ಳು ರಾಜ್ಯಪತ್ರ ತೋರಿಸಿ ವಂಚಿಸಿದ್ದರು. ಸದ್ಯ ಬಂಧಿತರಿಂದ 40 ಲಕ್ಷ ರೂ.ನಗದು, 4 ಮೊಬೈಲ್‌ ವಶಪಡಿಸಿಕೊಳ್ಳ ಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.