Crime: ಪೆಟ್ರೋಲ್‌ ತಂದು ಕೊಟ್ಟ ಪೇದೆಗೆ ಬೆಂಕಿ ಹಚ್ಚಿ ಕೊಂದೇ ಬಿಟ್ಟ ಪ್ರೇಯಸಿ!

ಇನೊಬ್ಬನ ಜೊತೆ ಸಲುಗೆ ಪ್ರಶ್ನಿಸಿದಕ್ಕೆ ಇಬ್ಬರ ನಡುವೆ ಜಗಳ; ಪೆಟ್ರೋಲ್‌ ತಂದು ಸುಡು ಎಂದಾಗ ಹಾಗೇ ಮಾಡಿದ ಮಹಿಳೆ

Team Udayavani, Dec 22, 2023, 12:50 PM IST

4-bng-crime

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ ಹಿನ್ನೆಲೆ ಮುಖ್ಯಮಂತ್ರಿ ಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಿಶೇಷ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ನನ್ನು ಆತನ ಪ್ರೇಯಸಿಯೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನ ಮೂಲದ ಸಂಜಯ್‌ (30)ಕೊಲೆಯಾದ ಕಾನ್‌ಸ್ಟೇಬಲ್‌. ಕೃತ್ಯವೆಸಗಿದ ಮಹಿಳಾ ಹೋಮ್‌ ಗಾರ್ಡ್‌, ಮಂಡ್ಯ ಮೂಲದ ರಾಣಿಯನ್ನು ಬಂಧಿಸಲಾಗಿದೆ.

ಡಿ.6 ರಂದು ಘಟನೆ ನಡೆದಿದ್ದು, ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಜಯ್‌ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೊದಲು ಸಂಜಯ್‌ ಹೇಳಿಕೆ ಆಧರಿಸಿ ಆಕಸ್ಮಿಕ ಘಟನೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಆದರೆ, 3 ದಿನಗಳ ಹಿಂದೆ ಸಂಜಯ್‌, ತನ್ನ ಹೇಳಿಕೆಯನ್ನು ಬದಲಾಯಿಸಿ ರಾಣಿ ವಿರುದ್ಧ ಕೊಲೆ ಯತ್ನ ಆರೋಪಿಸಿದ್ದರು. ಹೀಗಾಗಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ, ಇದೀಗ ಸಂಜಯ್‌ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮೂರು ವರ್ಷಗಳ ಪರಿಚಯ: ಹಾಸನ ಮೂಲದ ಸಂಜಯ್‌ 2018ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡಿದ್ದು, ಬಸವನಗುಡಿ ಠಾಣೆಯಲ್ಲಿ ಕಾನ್‌ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿರುವ ಸಂಜಯ್‌ ತ್ಯಾಗರಾಜನಗರದಲ್ಲಿ ವಾಸವಾಗಿದ್ದರು. 3 ತಿಂಗಳಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಿಶೇಷ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

ಇದೇ ಠಾಣೆಯಲ್ಲಿ 2020-21ನೇ ಸಾಲಿನಲ್ಲಿ ಮಂಡ್ಯ ಮೂಲದ ರಾಣಿ ಗೃಹ ರಕ್ಷಕ ದಳ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಇಬ್ಬರ ಪರಿಚಯವಾಗಿದ್ದು, ಅಕ್ರಮ ಸಂಬಂಧ ಹೊಂದಿದ್ದಾರೆ. ವಿವಾಹಿತೆಯಾಗಿರುವ ರಾಣಿ, ಪತಿ ಹಾಗೂ ಇಬ್ಬರು ಮಕ್ಕಳು ಜತೆ ಪುಟ್ಟೇನಹಳ್ಳಿಯ ಅಷ್ಟಲಕ್ಷ್ಮೀ ಲೇಔಟ್‌ನಲ್ಲಿ ವಾಸವಾಗಿದ್ದಳು. ಸದ್ಯ ಬಸವನಗುಡಿ ಠಾಣೆಯಲ್ಲಿ ಕೆಲಸ ತೊರೆದಿರುವ ರಾಣಿ, ಬೆಳ್ಳಂದೂರಿನ ಕಂಪನಿಯೊಂದರಲ್ಲಿ ಭದ್ರತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ಹೇಳಿದರು.

ಕೊಲೆಗೆ ಕಾರಣವಾದ ಮೊಬೈಲ್‌ ಕರೆ: ಡಿ.6ರಂದು ಕೆಲಸ ಮುಗಿಸಿ ಮನೆಗೆ ಹೋಗಿದ್ದ ಸಂಜಯ್‌ಗೆ ಸಂಜೆ 6 ಗಂಟೆಗೆ ಕರೆ ಮಾಡಿದ್ದ ರಾಣಿ, ತಮ್ಮ ಮನೆಗೆ ಬರುವಂತೆ ಹೇಳಿದ್ದಾಳೆ. ಮನೆಗೆ ಬಂದಿದ್ದ ಸಂಜಯ್‌ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಳು. ಇದೇ ವೇಳೆ ಚೇತನ್‌ ಎಂಬಾತ ರಾಣಿಗೆ ಕರೆ ಮಾಡಿದ್ದಾನೆ. ಅದನ್ನು ಗಮನಿಸಿದ ಸಂಜಯ್‌, “ಕರೆ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ. ಬಳಿಕ ಆಕೆಯ ಮೊಬೈಲ್‌ ಕಸಿದುಕೊಂಡು ಪರಿಶೀಲಿಸಿದಾಗ ಚೇತನ್‌ ಹಾಗೂ ಚಂದನ್‌ ಎಂಬುವರ ಜತೆ ಸಲುಗೆಯಿಂದ ಮಾತನಾಡುತ್ತಿರುವ ಚಾಟಿಂಗ್‌ ಕಂಡಿದೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಆಗ ರಾಣಿ, ಈ ರೀತಿ ಪ್ರಶ್ನಿಸಿದರೆ, ಪೆಟ್ರೋಲ್‌ ಹಾಕಿ ಸುಡುತ್ತೇನೆ ಎಂದು ಬೆದರಿಸಿದ್ದಾಳೆ.

ಪೆಟ್ರೋಲ್‌ ತಂದು ಕೊಲೆಯಾದ ಸಂಜಯ್‌: ಪ್ರೇಯಸಿಯ ಮಾತಿನಿಂದ ಕೋಪಗೊಂಡ ಸಂಜಯ್‌, ಕೂಡಲೇ ಪೆಟ್ರೋಲ್‌ ಬಂಕ್‌ಗೆ ಹೋಗಿ ಒಂದು ಲೀಟರ್‌ ಪೆಟ್ರೋಲ್‌ ತಂದು ಪ್ರೇಯಸಿಗೆ ಕೊಟ್ಟು, “ಪೆಟ್ರೋಲ್‌ ಹಾಕುತ್ತಿಯಾ ಹಾಕು, ಕೊಲೆ ಮಾಡು ನೋಡೋಣ’ ಎಂದು ಸವಾಲೆಸಿದಿದ್ದಾರೆ. ಆಗ ರಾಣಿ, ಪೆಟ್ರೋಲ್‌ ಅನ್ನು ಸಂಜಯ್‌ನ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ್ದಾಳೆ. ಕ್ಷಣಮಾತ್ರದಲ್ಲಿ ಸಂಜಯ್‌ ದೇಹಕ್ಕೆ ಬೆಂಕಿ ಹೊತ್ತಿಕೊಂಡು ಹೊಟ್ಟೆ ಮತ್ತು ಬೆನ್ನಿನ ಭಾಗ ಉರಿಯಲಾರಂಭಿಸಿತ್ತು. ಸಂಜಯ್‌ ಚೀರಾಡುತ್ತಿದ್ದರು. ಅದರಿಂದ ಹೆದರಿದ ರಾಣಿ, ನೀರು ಹಾಕಿ ಬೆಂಕಿ ನಂದಿಸಿ, ನಂತರ, ದ್ವಿಚಕ್ರ ವಾಹನದಲ್ಲಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್‌ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಆಗಿದ್ದೇನು?

 ಪೇದೆ ಸಂಜಯ್‌ ಜತೆ ರಾಣಿ ಎಂಬಾಕೆ ಜತೆ ಸಂಬಂಧ. ಇಬ್ಬರೂ ಜತೆಗಿದ್ದಾಗ ರಾಣಿಗೆ ಚೇತನ್‌ ಎಂಬಾತನ ಕರೆ

 ಇದನ್ನು ಪ್ರಶ್ನಿಸಿದ ಸಂಜಯ್‌. ಇಬ್ಬರಿಗೂ ಭಾರೀ ಜಗಳ. ಪೆಟ್ರೋಲ್‌ ಹಾಕಿ ಸುಡುವೆ ಎಂದ ಪ್ರೇಯಸಿ ರಾಣಿ

 ಪೆಟ್ರೋಲ್‌ ತಂದ ಸಂಜಯ್‌ಗೆ ಸುರಿದು ಸುಟ್ಟ ರಾಣಿ

ಆಕಸ್ಮಿಕ ಘಟನೆ ಎಂದಿದ್ದ ಪೇದೆ:

ಡಿ.7ರಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಪೊಲೀಸರಿಗೆ, ಪಕ್ಕದಲ್ಲಿದ್ದ ರಾಣಿ ಸೂಚನೆ ಮೇರೆಗೆ ಕಾನ್‌ಸ್ಟೇಬಲ್‌ ಸಂಜಯ್‌, ಇದೊಂದು ಆಕಸ್ಮಿಕ ಘಟನೆ ಎಂದು ಹೇಳಿಕೆ ನೀಡಿದ್ದರು. ಆದರೆ, ಡಿ.19ರಂದು ತನ್ನ ಹೇಳಿಕೆ ಬದಲಾಯಿಸಿದ್ದ ಸಂಜಯ್, ರಾಣಿ ಬೆದರಿಕೆ ಹಾಕಿದ್ದರಿಂದ, ಇದು ಆಕಸ್ಮಿಕ ಘಟನೆ ಎಂದು ಸುಳ್ಳು ಹೇಳಿದ್ದೆ. ಆದರೆ, ಆಕೆ ಜತೆ ಅಕ್ರಮ ಸಂಬಂಧ ಹೊಂದಿದ್ದು, ಘಟನೆ ನಡೆದ ದಿನ ವಾಗ್ವಾದ ನಡೆದ ವೇಳೆ ಆಕೆಯೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿಕೆ ನೀಡಿದ್ದರು.

ಘಟನೆ ಸಂಬಂಧ ಮೊದಲಿಗೆ ಹನುಮಂತನಗರ ಠಾಣೆಯಲ್ಲಿ ಕೊಲೆ ಯತ್ನ ಆರೋಪದಡಿ ಎಫ್ಐಆರ್‌ ದಾಖಲಾಗಿತ್ತು. ಘಟನೆ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಪುಟ್ಟೇನಹಳ್ಳಿ ಠಾಣೆಗೆ ವರ್ಗಾಯಿಸಲಾಗಿದೆ.

ಟಾಪ್ ನ್ಯೂಸ್

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.