Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


Team Udayavani, Mar 29, 2024, 4:12 PM IST

20-

ಸ್ನೇಹಿತರ ಅತಿರೇಕದ ಹುಚ್ಚಾಟ; ತಮಾಷೆಗೆಂದು ಏರ್‌ಪ್ರಷರ್‌ನಿಂದ ಗುದದ್ವಾರಕ್ಕೆ ಗಾಳಿ; ಕರುಳು, ಇತರ ಅಂಗಾಗ ಸ್ಫೋಟದಿಂದ ಯುವಕ ಸಾವು

ಬೆಂಗಳೂರು: ಇಬ್ಬರು ಸ್ನೇಹಿತರ ನಡುವಿನ ಹುಚ್ಚಾಟದಲ್ಲಿ ಒಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಹೈ ಏರ್‌ ಪ್ರಷರ್‌ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗಿನ ಕರುಳು ಹಾಗೂ ಇತರೆ ಅಂಗಗಳು ಸ್ಫೋಟಗೊಂಡು ಯುವಕ ಮೃತಪಟ್ಟಿರುವ ದಾರುಣ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂಪಿಗೇಹಳ್ಳಿ ನಿವಾಸಿ ಯೋಗೀಶ್‌ (28) ಮೃತ ಯುವಕ. ಈ ಸಂಬಂಧ ಆತನ ಸ್ನೇಹಿತ ಮುರಳಿ(25) ಎಂಬಾತನನ್ನು ಬಂಧಿಸಲಾಗಿದೆ. ಮಾ.25ರಂದು ಬೈಕ್‌ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್‌ಎಸ್‌ ಕಾರ್‌ ಸ್ಪಾ ಕಾರ್‌ ಸರ್ವಿಸ್‌ ಸೆಂಟರ್‌ಗೆ ಬಂದಾಗ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಮುರಳಿ ಸಿಎನ್‌ಎಸ್‌ ಕಾರ್‌ ಸ್ಪಾ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ. ದೇವನ ಹಳ್ಳಿಯ ವಿಜಯಪುರ ಮೂಲದ ಯೋಗೀಶ್‌ ಈವೆಂಟ್‌ ಮ್ಯಾನೆಜ್‌ಮೆಂಟ್‌ ಕಂಪನಿ ಹಾಗೂ ಡೆಲಿವರಿ ಏಜೆಂಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಹೋದರಿಯ ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ 15 ದಿನಗಳಿಂದ ಕೆಲಸಕ್ಕೆ ಹೋಗಿರಲಿಲ್ಲ. ಮಾ.25ರಂದು ಸ್ನೇಹಿತನ ಕಾರ್‌ ಸ್ಪಾ ಸರ್ವಿಸ್‌ ಸೆಂಟರ್‌ಗೆ ಬೈಕ್‌ ವಾಶ್‌ಗೆ ಬಂದಿದ್ದಾನೆ. ಆಗ ನೀರಿನಿಂದ ತೊಳೆದ ಕಾರುಗಳನ್ನು ಅಧಿಕ ಏರ್‌ ಪ್ರಷರ್‌ ಪೈಪ್‌ನಿಂದ ಆರಿಸುತ್ತಿದ್ದ. ಈ ವೇಳೆ ತಮಾ ಷೆಗಾಗಿ ನಿಂತಿದ್ದ ಯೋಗೇಶ್‌ನ ಮುಖ, ತಲೆಗೆ ಗಾಳಿ ಬಿಟ್ಟಿದ್ದಾನೆ. ಹೆಚ್ಚು ಗಾಳಿ ಬಂದಿದ್ದರಿಂದ ಯೋಗೇಶ್‌, ಹಿಮ್ಮುಖವಾಗಿ ನಿಂತಿದ್ದಾನೆ.

ಆಗ ಮುರಳಿ, ಯೋಗೇಶ್‌ ಗುದದ್ವಾರದ ಕಡೆ ಗಾಳಿ ಬಿಟ್ಟಿದ್ದು, ಕೆಲ ಕ್ಷಣಗಳಲ್ಲೇ ಯೋಗೇಶ್‌ನ ಹೊಟ್ಟೆ ಊದಿಕೊಂಡು ಒಳಭಾಗದಲ್ಲೇ ಕರಳು ಸ್ಫೋಟಗೊಂಡು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ. ಈ ಸಂಬಂಧ ಯೋಗೇಶ್‌ನ ಸಹೋದರಿ ಜಯಶ್ರೀ ಎಂಬವರು ನೀಡಿದ್ದು, ಈ ಹಿನ್ನೆಲೆಯಲ್ಲಿ ಐಪಿಸಿ 304 ಅಡಿ (ನರಹತ್ಯೆ) ಪ್ರಕರಣ ದಾಖಲಿಸಿಕೊಂಡು ಮುರಳಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹೈ ಪ್ರಷರ್‌ ಏರ್‌ಪೈಪ್‌ನಿಂದ ಯೋಗೇಶ್‌ನ ಗುದದ್ವಾರಕ್ಕೆ ಗಾಳಿ ಬಿಟ್ಟ ಪರಿಣಾಮ ಆತನ ದೇಹದ ಒಳಭಾಗಗಳು ಸ್ಫೋಟಗೊಂಡು ಚಿಕಿತ್ಸೆ ಫ‌ಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ. ಈ ಸಂಬಂಧ ಮುರಳಿ ಎಂಬಾತನನ್ನು ಬಂಧಿಸಲಾಗಿದೆ. ●ಲಕ್ಷ್ಮೀಪ್ರಸಾದ್‌, ಈಶಾನ್ಯ ವಿಭಾಗ ಡಿಸಿಪಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.