Bengaluru: ಜಯದೇವಕ್ಕೆ ಇನ್ನೂ ಇಲ್ಲ ಪೂರ್ಣಾವಧಿ ನಿರ್ದೇಶಕ

ಪ್ರತಿಷ್ಠಿತ ಸಂಸ್ಥೆಯಲ್ಲೇ ಅನುಭವಿಗಳಿದ್ದರೂ ನಿವೃತ್ತರಿಗೆ ಹಂಗಾಮಿ ಅಧಿಕಾರ: ಚರ್ಚೆಗೆ ಗ್ರಾಸವಾದ ಕ್ರಮ

Team Udayavani, Feb 23, 2024, 3:47 PM IST

14-bng

ಬೆಂಗಳೂರು: ಡಾ| ಸಿ.ಎನ್‌.ಮಂಜುನಾಥ್‌ ನಿವೃತ್ತಿಯಿಂದ ತೆರವಾಗಿರುವ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದು, ಹುದ್ದೆ ಗಿಟ್ಟಿಸಲು ಭಾರೀ ಪೈಪೋಟಿ ಶುರುವಾಗಿದೆ. ಆದರೆ ಈ ನಡುವೆಯೇ, ಇಷ್ಟೊಂದು ದೊಡ್ಡ ಸಂಸ್ಥೆಗೆ ನಿರ್ದೇಶಕರಾಗಲು ಸಂಸ್ಥೆಯಲ್ಲಿಯೇ ಹಲವು ಮಂದಿ ಹಿರಿಯರು, ಅನುಭವಿಗಳು, ಸೇವಾ ಹಿರಿತನವುಳ್ಳವರಿದ್ದರೂ ನಿವೃತ್ತರೊಬ್ಬರನ್ನು ಹಂಗಾಮಿಯಾಗಿ ನೇಮಿಸಿರುವುದು ಸಂಸ್ಥೆಯಲ್ಲಿ ಅನೇಕರ ಹುಬ್ಬೇರಿಸಿದೆ.

ಬೆಂಗಳೂರು, ಮೈಸೂರು, ಕಲಬುರಗಿ ಸೇರಿ 3 ಸಾವಿರ ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾಲ ಯ ಆಗಲಿದೆ. ಹೃದ್ರೋಗಿಗಳ ಚಿಕಿತ್ಸೆಗೆಂದೇ ಪ್ರತ್ಯೇಕವಾಗಿ ಇಷ್ಟು ದೊಡ್ಡ ವ್ಯವಸ್ಥೆ ಹೊಂದಿರುವ ಬೆಂಗಳೂರು ಆಸ್ಪತ್ರೆ ಒಂದರÇÉೇ ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆಗಳು ಸಿಗುತ್ತಿವೆ. ಪ್ರಮುಖವಾಗಿ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಸೇರಿ 35 ಸಾವಿರ ವೈದ್ಯಕೀಯ ಸೇವೆಗಳು ಲಭ್ಯವಿವೆ. ಸಾವಿರಾರು ಸಿಬ್ಬಂದಿ ಹಾಗೂ ನಿತ್ಯ ಹೊರರೋಗಿ ವಿಭಾಗವೊಂದರಲ್ಲೇ 1500ಕ್ಕೂ ಅಧಿಕ ಮಂದಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಇಂತಹ ಸಂಸ್ಥೆಗೆ ಪೂರ್ಣಾವಧಿಯ ನಿರ್ದೇಶಕರನ್ನು ನೇಮಿಸದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಡಾ.ಮಂಜುನಾಥ್‌ ನಿವೃತ್ತಿಯಿಂದ ತೆರವಾಗಿರುವ ಹುದ್ದೆಗೆ ನಿವೃತ್ತ ಕುಲಪತಿ ಡಾ.ಕೆ.ಎಸ್‌. ರವೀಂದ್ರನಾಥ್‌ ಅವರನ್ನು ಪ್ರಭಾರಿಯಾಗಿ ನೇಮಿಸಲಾಗಿದೆ. ಮಂಜು ನಾಥ್‌ ಅವರನ್ನು ನಿವೃತ್ತಿ ನಂತರವೂ ಎರಡು ಬಾರಿ ನಿರ್ದೇಶಕ ಹುದ್ದೆಯ ಸೇವಾವಧಿಯನ್ನು ಸರ್ಕಾರ ವಿಸ್ತರಿಸಿತ್ತು. ಹುದ್ದೆ ಖಾಲಿಯಾಗುವ ನಿರೀಕ್ಷೆಯಲ್ಲಿ 20 ಮಂದಿ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

ಬಹುತೇಕರು ಹಿರಿಯರು ಹಾಗೂ ಅನುಭವಿಗಳೇ ಇದ್ದರು. ಈ ಪೈಕಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇ ಶನಾಲಯದಿಂದ 12 ಮಂದಿಯ ಆಯ್ಕೆಪಟ್ಟಿಯನ್ನು ಆಡಳಿತ ಮಂಡಳಿ ಮುಂದೆ ಮಂಡಿಸಲಾಗಿತ್ತು. ಜಯದೇವ ಆಸ್ಪತ್ರೆ ಆಡಳಿತ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧ್ಯಕ್ಷರಾಗಿದ್ದು, ಪೂರ್ಣಪ್ರಮಾಣದ ನಿರ್ದೇಶಕರ ನೇಮಕಕ್ಕೆ ಕರೆದಿದ್ದ ಸಭೆಯನ್ನೂ ಕಡೇ ಗಳಿಗೆಯಲ್ಲಿ ಹಠಾತ್‌ ಮುಂದೂಡ ಲಾಗಿದೆ. ಇದರಿಂದಾಗಿ ನಿರ್ದೇಶಕ ಸ್ಥಾನದ ಮೇಲೆ ಹಲವರ ಕಣ್ಣು ನೆಟ್ಟಿದ್ದು, ಒತ್ತಡಗಳೂ ಹೆಚ್ಚುತ್ತಿವೆ.

ಪ್ರಸ್ತುತ ವೈದ್ಯಕೀಯ ವರಿಷ್ಠಾಧಿಕಾರಿ (ಮೆಡಿಕಲ್‌ ಸೂಪ ರಿಂಟೆಂಡೆಂಟ್‌) ಆಗಿರುವ ಡಾ.ಕೆ.ಎಚ್‌. ಶ್ರೀನಿವಾಸ್‌, ಹಿರಿಯ ಹೃದ್ರೋಗ ತಜ್ಞರಾದ ಡಾ. ನಾಗ ಮಣಿ, ಡಾ.ಪ್ರಸನ್ನಸಿಂಹ ಸೇರಿದಂತೆ ಹಲವರ ಹೆಸರುಗಳು ನಿರ್ದೇಶಕ ಹುದ್ದೆಗೆ ಕೇಳಿಬಂದಿತ್ತು. ಆದರೆ, ಮೈಸೂರಿನ ವೈದ್ಯಕೀಯ ಕಾಲೇಜಿನ ಸಾಮಾನ್ಯ ವೈದ್ಯಕೀಯ (ಜನರಲ್‌ ಮೆಡಿಸಿನ್‌) ವಿಭಾಗದಲ್ಲಿದ್ದ ವೈದ್ಯರೊಬ್ಬರು ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಜನರಲ್‌ ಮೆಡಿಸಿನ್‌ ವಿಭಾಗದಲ್ಲಿ ಮಾಡಿರುವ ತಮ್ಮ ಸೇವೆಯನ್ನೂ ಪರಿಗಣಿಸಿ ಜ್ಯೇಷ್ಠತೆಯ ಹಕ್ಕು ಸಾಧಿಸಿ ಬೆಂಗಳೂರು ಜಯದೇವ ಆಸ್ಪತ್ರೆ ನಿರ್ದೇಶಕ ಹುದ್ದೆಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ನಿರ್ದೇಶಕರ ನೇಮಕಕ್ಕೆ ಒತ್ತಡ: ಲೋಕಸಭೆ ಚುನಾವಣೆ ಸಮೀಪದಲ್ಲೇ ಇದೆಯಲ್ಲದೆ, ನೀತಿಸಂಹಿತೆ ಜಾರಿಯಿಂದ ನಿರ್ದೇಶಕ ಹುದ್ದೆಯ ನೇಮಕಾತಿ ಮತ್ತಷ್ಟು ಮುಂದೂಡಿಕೆ ಆಗಬಹುದು. ಸಂಸ್ಥೆಯ ಭವಿಷ್ಯ ಹಾಗೂ ರೋಗಿಗಳ ಹಿತದೃಷ್ಟಿಯಿಂದ ಅರ್ಹ ಹಿರಿಯರನ್ನು ಸಂಸ್ಥೆಗೆ ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ನೇಮಿಸಬೇಕೆಂದು ಸರ್ಕಾರದ ಮೇಲೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.