ಬೆಂಗಳೂರು: 1,443 ಕಟ್ಟಡಗಳಲ್ಲಿ ಲೌಡ್‌ ಸ್ಪೀಕರ್‌ಗೆ ಅನುಮತಿ

797 ಮಸೀದಿಗಳಿಂದ ಲೌಡ್‌ ಸ್ಪೀಕರ್‌ ಅಳವಡಿಕೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಲಾಗಿದೆ

Team Udayavani, Jul 29, 2022, 5:41 PM IST

ಬೆಂಗಳೂರು: 1,443 ಕಟ್ಟಡಗಳಲ್ಲಿ ಲೌಡ್‌ ಸ್ಪೀಕರ್‌ಗೆ ಅನುಮತಿ

ಬೆಂಗಳೂರು: ನಗರದಲ್ಲಿ ಲೌಡ್‌ ಸ್ಪೀಕರ್‌ ಅಳವಡಿಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ 1,443 ಕಟ್ಟಡಗಳಿಗೆ ಅನುಮತಿ ನೀಡಿದೆ. ಧಾರ್ಮಿಕ ಕೇಂದ್ರಗಳಿಂದಾಗುತ್ತಿರುವ ಶಬ್ದ ಮಾಲಿನ್ಯ ನಿಯಂತ್ರಣಕ್ಕಾಗಿ ಎಲ್ಲರೂ ಪೊಲೀಸರಿಂದ ಶಬ್ದ ಮಾಲಿನ್ಯ ಮಾಡುತ್ತಿಲ್ಲ ಎಂದು ದೃಢಪಡಿಸಿ ಪರವಾನಗಿ ಪಡೆಯುವಂತೆ ರಾಜ್ಯ ಸರ್ಕಾರ ಈ ಹಿಂದೆ ಸೂಚಿಸಿತ್ತು. ಅಲ್ಲದೆ ಬಿಬಿಎಂಪಿ, ಪೊಲೀಸ್‌ ಇಲಾಖೆ ಕೂಡ ಈ ಕುರಿತು ಅರ್ಜಿ ಸಲ್ಲಿಸುವಂತೆ ತಿಳಿಸಿತ್ತು.

ಅದರಂತೆ ಕಳೆದೆರಡು ತಿಂಗಳಲ್ಲಿ ನಗರ ಪೊಲೀಸ್‌ ಇಲಾಖೆಗೆ ಅನುಮತಿ ಕೋರಿ 1,532 ಅರ್ಜಿ ಸಲ್ಲಿಕೆಯಾಗಿದ್ದವು. ಅವುಗಳನ್ನು ಪರಿಶೀಲನೆ ನಡೆಸಿದ್ದ ಪೊಲೀಸರು ಸುಪ್ರೀಂಕೋರ್ಟ್‌ ಆದೇಶ ಹಾಗೂ ಶಬ್ದ ಮಾಲಿನ್ಯ (ರೆಗ್ಯುಲೇಷನ್‌ ಆ್ಯಂಡ್‌ ಕಂಟ್ರೋಲ್‌) ನಿಯಮ 2000 ಅಡಿಯಲ್ಲಿ ಷರತ್ತು ವಿಧಿಸಿ 1,443 ಕಟ್ಟಡಗಳಲ್ಲಿ ಲೌಡ್‌ ಸ್ಪೀಕರ್‌ ಅಳವಡಿಕೆಗೆ ಪರವಾನಗಿ ವಿತರಿಸಿದ್ದಾರೆ.

ಮಸೀದಿಗಳಿಂದಲೇ ಹೆಚ್ಚಿನ ಅರ್ಜಿ, ಪರವಾನಗಿ: ಅರ್ಜಿ ಸಲ್ಲಿಕೆಯಾದ ಪೈಕಿ ಮಸೀದಿಗಳಿಂದಲೇ ಅತಿ ಹೆಚ್ಚಿನ ಅರ್ಜಿ ಸಲ್ಲಿಕೆಯಾಗಿವೆ. ಅದರಂತೆ 797 ಮಸೀದಿಗಳಿಂದ ಲೌಡ್‌ ಸ್ಪೀಕರ್‌ ಅಳವಡಿಕೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಉಳಿದಂತೆ 358 ಚರ್ಚ್ ಗಳಿಂದ, 308 ದೇವಸ್ಥಾನಗಳಿಂದ ಹಾಗೂ ಇತರ 69 ಕಟ್ಟಡಗಳಿಂದ ಅರ್ಜಿ ಸಲ್ಲಿಸಲಾಗಿದೆ. ಆ ಪೈಕಿ 762 ಮಸೀದಿಗಳಿಗೆ ಲೌಡ್‌ ಸ್ಪೀಕರ್‌ ಅಳವಡಿಕೆಗೆ ಅನುಮತಿಸಲಾಗಿದೆ. ಹಾಗೆಯೇ, 320 ಚರ್ಚ್‌ ಹಾಗೂ 295 ದೇವಸ್ಥಾನ ಹಗೂ 66 ಇತರ ಕಟ್ಟಡಗಳಲ್ಲಿ ಲೌಡ್‌ ಸ್ಪೀಕರ್‌ ಅಳವಡಿಸುವುದಕ್ಕೆ ಅನುಮತಿಸಲಾಗಿದೆ.

ಪೂರ್ವ ವಿಭಾಗದಲ್ಲಿ ಹೆಚ್ಚು: ನಗರ ಪೊಲೀಸರಲ್ಲಿರುವ 8 ವಿಭಾಗಗಳ ಪೈಕಿ ಪೂರ್ವ ವಿಭಾಗದಲ್ಲಿಯೇ ಅತಿ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಅದರ ಪ್ರಕಾರ ಒಟ್ಟು 394 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 363 ಅರ್ಜಿಗಳನ್ನು ಪುರಸ್ಕರಿಸಿ ಲೌಡ್‌ ಸ್ಪೀಕರ್‌ ಅಳವಡಿಕೆಗೆ ಅನುಮತಿಸಲಾಗಿದೆ. ಹಾಗೆಯೇ ಎರಡು ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, 29 ಅರ್ಜಿಗಳ ಪರಿಶೀಲನಾ ಕಾರ್ಯ ನಡೆಸಲಾಗುತ್ತಿದೆ.

29 ಅರ್ಜಿಗಳು ತಿರಸ್ಕೃತ: ಶಬ್ದ ಮಾಲಿನ್ಯ ಮಾಡುವುದಿಲ್ಲ ಎಂಬ ಕುರಿತಂತೆ ಸಲ್ಲಿಸಲಾಗುವ ಪ್ರಮಾಣ ಪತ್ರದಲ್ಲಿನ ದೋಷ ಹಾಗೂ ಇನ್ನಿತರ ಕಾರಣಗಳಿಂದಾಗಿ 29 ಅರ್ಜಿಗಳನ್ನು ಪೊಲೀಸರು ತಿರಸ್ಕರಿಸಿದ್ದಾರೆ. ಅದರಲ್ಲಿ 6 ಮಸೀದಿಗಳು, 2 ದೇವಸ್ಥಾನ ಹಾಗೂ ಇತರ ಕಟ್ಟಡಗಳ 2 ಅರ್ಜಿಗಳಿಗೆ ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ಅರ್ಜಿ ತಿರಸ್ಕರಿಸಲಾಗಿದೆ. ಅದರ ಜತೆಗೆ 29 ಮಸೀದಿ, 11 ದೇವಸ್ಥಾನ, 38 ಚರ್ಚ್‌ ಹಾಗೂ ಇತರ ಕಟ್ಟಡದ ಒಂದು ಅರ್ಜಿಯ ಪರಿಶೀಲನಾ ಕಾರ್ಯ ನಡೆಸಲಾಗುತ್ತಿದೆ. ಅರ್ಜಿ ಜತೆ ಸಲ್ಲಿಸಿರುವ ದಾಖಲೆ ಹಾಗೂ ಸ್ಥಳ ಪರಿಶೀಲನೆಯ ನಂತರ ಅರ್ಜಿಯನ್ನು ಪುರಸ್ಕರಿಸಿ ಪರವಾನಗಿ ನೀಡಲಾಗುತ್ತದೆ. ಒಂದು ವೇಳೆ ನಿಯಮಕ್ಕೆ ವಿರುದ್ಧವಾದ ಅಂಶಗಳು ಪತ್ತೆಯಾದರೆ ಅರ್ಜಿ ತಿರಸ್ಕರಿಸಲಾಗುತ್ತದೆ.

ಸುಪೀಂಕೋರ್ಟ್‌ ಆದೇಶ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗಳ ನಿಯಮಗಳನ್ನಾಧರಿಸಿ ಧಾರ್ಮಿಕ ಕಟ್ಟಡಗಳಲ್ಲಿ ಧ್ವನಿವರ್ಧಕ ಅಳವಡಿಕೆಗೆ ಅನುಮತಿ ನೀಡಲಾಗಿದೆ. ಅದನ್ನು ಉಲ್ಲಂಘಿ ಸಿದರೆ ಅನುಮತಿ ರದ್ದುಪಡಿ ಸಿ ಧ್ವನಿವರ್ಧಕ ಅಳವಡಿಕೆ ನಿಷೇಧಿಸಲಾಗುವುದು.
● ಸುಬ್ರಹ್ಮಣ್ಯೇಶ್ವರ ರಾವ್‌, ಪೂರ್ವ
ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ

ಗಿರೀಶ್‌ ಗರಗ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.