BMTC ಬಸ್ ಹರಿದು ಸಿವಿಲ್ ಗುತ್ತಿಗೆದಾರ ಸ್ಥಳದಲ್ಲೇ ಸಾವು
Team Udayavani, Oct 6, 2023, 3:26 PM IST
ಬೆಂಗಳೂರು: ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಿವಿಲ್ ಕಂಟ್ರ್ಯಾಕ್ಟರ್ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೆರೆ ನಿವಾಸಿ ಭರತ್ ರೆಡ್ಡಿ(24) ಮೃತ ಸಿವಿಲ್ ಕಂಟ್ರ್ಯಾಕ್ಟರ್.
ಬುಧವಾರ ಸಂಜೆ 5 ಗಂಟೆಗೆ ಅಟ್ಟೂರಿನ ಮದರ್ ಡೇರಿ ಬಳಿ ಘಟನೆ ನಡೆದಿದೆ. ಸಿವಿಲ್ ಗುತ್ತಿಗೆದಾರನಾಗಿರುವ ಭರತ್ ರೆಡ್ಡಿ, ಬುಧವಾರ ಅಟ್ಟೂರಿನಲ್ಲಿ ನಿರ್ಮಿಸುತ್ತಿರುವ ಕಟ್ಟಡ ಪರಿಶೀಲಿಸಲು ಬೈಕ್ನಲ್ಲಿ ಹೋಗಿದ್ದರು. ವಾಪಸ್ ಸಂಜೆ 5 ಗಂಟೆಗೆ ಬರುವಾಗ ಅತಿ ವೇಗವಾಗಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಭರತ್ ರೆಡ್ಡಿ ಬೈಕ್ಗೆ ಗುದ್ದಿದ್ದು, ಕೆಳಗೆ ಬಿದ್ದ ಆತನ ಮೇಲೆ ಬಸ್ನ ಚಕ್ರಗಳು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.
ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!