ಲಂಚದ ಬೇಡಿಕೆ ಪ್ರಕರಣ: ಹೊಸ ವಿಚಾರಣಾ ಸಮಿತಿ ರಚನೆಗೆ ಸೂಚನೆ
Team Udayavani, Jun 14, 2020, 5:16 AM IST
ಬೆಂಗಳೂರು: ಲಂಚ ನೀಡಿಲ್ಲ ಎಂಬ ಕಾರಣಕ್ಕೆ ಸರ್ಜರಿ (ಶಸ್ತ್ರಚಿಕಿತ್ಸೆ) ವಿಷಯ ದ ಪ್ರಾಯೋಗಿಕ ಪರೀಕ್ಷೆಯಲ್ಲಿ ಕಲಬುರಗಿಯ ಖಾಜಾ ಬಂದೆನವಾಜ್ ವೈದ್ಯಕೀಯ ವಿಜ್ಞಾನಗಳ ಕಾಲೇಜಿನ 4ನೇ ವರ್ಷದ 7 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಪ್ರಾಧ್ಯಾಪಕರು ಅನುತ್ತೀರ್ಣಗೊಳಿಸಿದ ಆರೋಪಕ್ಕೆ ಸಂಬಂಧಿಸಿದ ವಿಚಾರಣಾ ವರದಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣದ ಕುರಿತು ವಿಚಾರಣೆಗೆ ಆದೇಶಿಸಬೇಕು ಹಾಗೂ ಮತ್ತೆ ಪ್ರಾಯೋಗಿಕ ವಿಷಯ ಪರೀಕ್ಷೆ ನಡೆಸಲು ವಿವಿಗೆ ಆದೇಶಿಸುವಂತೆ ಕೋರಿ ವಿನೋದಿನಿ ಸೇರಿದಂತೆ 7 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯು ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ರಹಮತ್ ಉಲ್ಲಾ ಕೋತ್ವಾಲ್ ವಾದ ಮಂಡಿಸಿದರು.
ಆರೋಪ ಕೇಳಿ ಬಂದಿದೆಯೋ ಅದೇ ಕಾಲೇಜಿನ ಪ್ರಾಧ್ಯಾಪಕರನ್ನೊಳ್ಳಗೊಂಡ ಸಮಿತಿಯ ವಿಚಾರಣಾ ವರದಿ ಬಗ್ಗೆ ಅರ್ಜಿದಾರರು ಅಕ್ಷೇಪ ಎತ್ತಿದ್ದರು. ಆದ್ದರಿಂದ ಆ ವರದಿಯನ್ನು ರದ್ದುಗೊಳಿಸಿ ರುವ ಹೈಕೋರ್ಟ್, ಹೊಸದಾಗಿ ಸಮಿತಿ ರಚಿಸಬೇಕು. ಇದರಲ್ಲಿ ಬೇರೆ ಕಾಲೇಜಿನ ಪ್ರಾಧ್ಯಾಪಕರು ಇರಬೇಕು. ಈ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು. ಸಮಿತಿ ರಚನೆ ಹಾಗೂ ವರದಿ ಸಲ್ಲಿಸುವ ಪ್ರಕ್ರಿಯೆ 15 ದಿನಗಳಲ್ಲಿ ಪೂರ್ಣ ಗೊಳಿಸಲು ಕಾಲೇಜಿಗೆ ನಿರ್ದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!