ಖಾಸಗಿ ವಿಮಾನದಲ್ಲಿ ಆಗಮಿಸಲು ಕೇಂದ್ರ ಸೂಚನೆ?


Team Udayavani, Jun 5, 2020, 6:08 AM IST

soochane kendra

ಬೆಂಗಳೂರು: ಕೋವಿಡ್‌ 19 ಸಂಕಷ್ಟಕ್ಕೆ ಸಿಲುಕಿರುವ ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಶಾಕ್‌ ನೀಡಿದೆ. ರಾಜ್ಯಕ್ಕೆ ವಾಪಸ್‌ ಬರಬೇಕೆಂದರೆ ಚಾರ್ಟರ್‌ ಫ್ಲೈಟ್‌ (ಖಾಸಗಿ ವಿಮಾನ) ಮಾಡಿಕೊಂಡು ಬರುವಂತೆ ಸೂಚಿಸಿದ್ದು, ಅರಬ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಅನಿವಾಸಿ  ಕನ್ನಡಿಗರಲ್ಲಿ ಆತಂಕ ಮೂಡಿಸಿದೆ.ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರಲ್ಲಿ ಶೇ. 60 ರಷ್ಟು ಕನ್ನಡಿಗರು ಗಲ್ಫ್‌ ರಾಷ್ಟ್ರಗಳಲ್ಲಿ ನೆಲೆಸಿದ್ದಾರೆ.

ಈಗ ಕೇಂದ್ರ ಸರ್ಕಾರ  ಜಾರಿಗೊಳಿಸಿರುವ ಒಂದೇ  ಭಾರತ್‌ ಮಿಷನ್‌ ಅಡಿಯಲ್ಲಿ ದುಬೈ, ಕತಾರ್‌, ಸೌದಿ ಅರೇಬಿಯಾ, ಬಹರೇನ್‌, ಕುವೈತ್‌, ಮಸ್ಕತ್‌, ಶಾರ್ಜಾ, ಅಬು  ದಾಭಿ ದೇಶಗಳಿಂದ ಅಗತ್ಯಕ್ಕೆ ತಕ್ಕಷ್ಟು ವಿಮಾನ ಸೇವೆ ಒದಗಿಸಿಲ್ಲ. ದುಬೈನಲ್ಲಿ 2500, ಕತಾರ್‌ ನಲ್ಲಿ 4000, ಸೌದಿ  ಅರೇಬಿಯಾ, ಬಹರೇನ್‌ ಕುವೈತ್‌ ಸೇರಿದಂತೆ ಇತರ ಅರಬ್‌ ರಾಷ್ಟ್ರಗಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಕನ್ನಡಿಗರು ವಾಪಸ್‌ ಬರಲು ನೋಂದಣಿ ಮಾಡಿಕೊಂಡು ವಿಮಾನದ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಈಗಾಗಲೇ ಪ್ರವಾಸಕ್ಕೆ  ತೆರಳಿ ಸಿಲುಕಿಕೊಂಡವರು, ಗರ್ಭಿಣಿಯರು ಹಾಗೂ ಹಿರಿಯ ನಾಗರಿಕರು ತುರ್ತಾಗಿ ವಾಪಸ್‌ ಬರುವವರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದು, ಅವರಿಗೆ ತಕ್ಷಣಕ್ಕೆ ವಿಮಾನ ಸೇವೆ ಒದಗಿಸದೆ ಖಾಸಗಿ ವಿಮಾನ ವ್ಯವಸ್ಥೆ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ  ನೀಡಿದೆ ಎಂದು ಹೇಳಲಾಗಿದೆ. ದುಬೈ ಹಾಗೂ ಕತಾರ್‌ ನಲ್ಲಿರುವ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ  ಸಚಿವರಾದ ಸುರೇಶ್‌ ಅಂಗಡಿ ಹಾಗೂ ಡಿ.ವಿ.ಸದಾ ನಂದ ಗೌಡ  ಅವರ ಮೂಲಕ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್‌ ಅವರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬೇಸತ್ತ ಕೆಲ ಉದ್ಯಮಿಗಳು ತಮ್ಮ ಸಂಸ್ಥೆಯ ನೌಕರರನ್ನು ರಾಜ್ಯಕ್ಕೆ  ಕರೆತರಲು ಖಾಸಗಿ ವಿಮಾನ ಸೇವೆ ವ್ಯವಸ್ಥೆ ಮಾಡಿದ್ದು ದುಬೈ ಹಾಗೂ ಸೌದಿ ಅರೇಬಿಯಾದಿಂದ 2 ಖಾಸಗಿ ವಿಮಾನಗಳು  ಮಂಗಳೂರಿಗೆ ಆಗಮಿಸಿವೆ. ಆದರೆ, ಯಾರಾದರೂ ಖಾಸಗಿ ವಿಮಾನ ಸೇವೆ ಒದಗಿಸಿದರೆ ಅವರಿಗೆ ಟಿಕೆಟ್‌ ಹಣ  ಕೊಟ್ಟು ರಾಜ್ಯಕ್ಕೆ ವಾಪಸ್‌ ಬರಲು ಸಾಮಾನ್ಯ ಜನರೂ ಸಿದ್ದರಾಗಿದ್ದು, ಯಾರಾದರೂ ಖಾಸಗಿ ವಿಮಾನ ಸೇವೆಯನ್ನಾ ದರೂ ಒದಗಿಸಲಿ ಎಂದು ಕೇಳಿಕೊಳ್ಳುತ್ತಿದ್ದಾರೆ. ದುಬೈ ಅಥವಾ ಇತರೆ ಅರಬ್‌ ರಾಷ್ಟ್ರಗಳಿಂದ ಒಂದು ಖಾಸಗಿ ವಿಮಾನ ಸೇವೆ ಒದಗಿಸಲು ಸುಮಾರು 45 ರಿಂದ 50 ಲಕ್ಷ ರೂ. ಖರ್ಚಾಗುತ್ತದೆ.

ರಾಜ್ಯಕ್ಕೆ ಬರಲು ಉದ್ಯೋಗ ಕಳೆದುಕೊಂಡವರು, ಗರ್ಭಿಣಿಯರು, ಹಿರಿಯರು ಹೆಸರು ನೋಂದಾಯಿಸಿ ಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಖಾಸಗಿ ವಿಮಾನ ಮಾಡಿಕೊಂಡು ಬನ್ನಿ ಎನ್ನುತ್ತಿದೆ. ಸಂಕಷ್ಟದಲ್ಲಿರುವ ಜನರು ಹೇಗೆ ವಿಮಾನ ಮಾಡಿಕೊಂಡು ಬರಲು ಸಾಧ್ಯ? ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು. 
-ಚಂದ್ರಶೇಖರ ಲಿಂಗದಳ್ಳಿ, ದುಬೈ ಬಸವ ಸಮಿತಿ ಸಂಚಾಲಕ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಬ್ಬರ ಮೇಲೊಬ್ಬರು ಹಾಕುತ್ತ ಜಾರಿಕೊಳ್ಳುತ್ತಿದ್ದಾರೆ. ಮುಂಬೈನಿಂದ ಬಂದವರಿಂದ ಕರ್ನಾಟಕದಲ್ಲಿ ಕೋವಿಡ್‌ 19 ಹೆಚ್ಚಾಗಿದೆ ವಿನಹ ಗಲ#… ರಾಷ್ಟ್ರಗಳಿಂದ ಬಂದವರಿಂದಲ್ಲ.
-ಸುಬ್ರಮಣ್ಯ ಹೆಬ್ಟಾಗಿಲು, ಕತಾರ್‌ ಕನ್ನಡ ಸಂಘದ ಸದಸ್ಯ

* ಶಂಕರ ಪಾಗೋಜಿ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.