Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ


Team Udayavani, Sep 29, 2023, 2:57 PM IST

3-bangalore

ಬೆಂಗಳೂರು: ಹಿಂದೂ ಹೆಸರಿನ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಜತೆ ಲಿವಿಂಗ್‌ ಟುಗೆದರ್‌(ಸಹಜೀವನ) ನಡೆಸಿ, ಇದೀಗ ಕಿರುಕುಳ ನೀಡಿ, ಪ್ರಾಣ ಬೆದರಿಕೆ ಹಾಕಿರುವ ಘಟನೆ ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಕಾಡುಬೀಸನಹಳ್ಳಿಯ 25 ವರ್ಷದ ಮಹಿಳಾ ಟೆಕಿಯೊಬ್ಬರು ದೂರು ನೀಡಿದ್ದು, ಗುರುಪ್ರಸಾದ್‌(ರಫೀಕ್‌ ಬಾದ್‌ ಶಾ) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ 7 ವರ್ಷಗಳ ಹಿಂದೆ ಯುವತಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಸಾಮಾಜಿಕ ಜಾಲತಾಣದಲ್ಲಿ ಗುರುಪ್ರಸಾದ್‌ ಎಂಬಾತನ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಕಳೆದ ಐದು ವರ್ಷಗಳಿಂದ ಆತನ ಜತೆ ಲಿವಿಂಗ್‌ ಟುಗೆದರ್‌ ರಿಲೇಷನ್‌ ಶಿಪ್‌ ನಡೆಸುತ್ತಿದ್ದೆ. ಆದರೆ, ಇತ್ತೀಚೆಗೆ ಆತ ಗುರುಪ್ರಸಾದ್‌ ಅಲ್ಲ, ಆತನ ಹೆಸರು ರಫೀಕ್‌ ಬಾದ್‌ ಶಾ ಎಂಬುದು ಗೊತ್ತಾಗಿದೆ. ಅಲ್ಲದೆ, ಆತ ಆಟೋ ಚಾಲಕ ಎಂಬುದು ತಿಳಿದು ಬಂದಿದೆ. ಆದರೂ, ಆತನ ಜತೆ ಪ್ರೀತಿಯಿಂದ ಹೊಂದಾಣಿಕೆ ಮಾಡಿಕೊಂಡು ಹೋಗುತ್ತಿದ್ದೆ. ಆದರೆ, ಆರೋಪಿ ಕೆಲ ದಿನಗಳಿಂದ ಕಿರುಕುಳ ನೀಡಲು ಆರಂಭಿಸಿದ್ದಾನೆ.

ಅದರಿಂದ ಬೇಸರಗೊಂಡು ಕಾಡುಬೀಸನಹಳ್ಳಿಯ ಪೋಷಕರ ಮನೆಯಲ್ಲಿ ವಾಸವಾಗಿದ್ದೆ. ಆದರೆ, ಆರೋಪಿ ಆಗಾಗ ಕಚೇರಿ ಹಾಗೂ ಮನೆಯಿಂದ ಹೊರಗಡೆ ಹೋದಾಗ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ. ಸೆ.20ರಂದು ಹೊಸಕೆರೆಹಳ್ಳಿ ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿ, ತನ್ನೊಂದಿಗೆ ಬಾರದಿದ್ದರೆ ಇಡೀ ಕುಟುಂಬವನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಹಿಂದೂ ಯುವಕನ ಹೆಸರಿನಲ್ಲಿ ವಂಚಿಸಿದ ರಫೀಕ್‌ ಬಾದ್‌ ಶಾ ಎಂಬಾತನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಂತ್ರಸ್ತೆ ದೂರಿನಲ್ಲಿ ಕೋರಿದ್ದಾರೆ.

ಆರೋಪಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲಾಗಿದೆ. ತನಿಖೆ ಮುಂದವರಿದಿದೆ ಎಂದು ಪೊಲೀಸರು ಹೇಳಿದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.