ಡಿ.ಕೆ.ಶಿಗೆ ಸಿಎಂ ಯಡಿಯೂರಪ್ಪ ಕರೆ; ಶೀಘ್ರ ಗುಣಮುಖರಾಗಲು ಹಾರೈಕೆ
Team Udayavani, Aug 26, 2020, 9:56 AM IST
ಬೆಂಗಳೂರು: ಕೋವಿಡ್ ಸೋಂಕಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಕೋವಿಡ್ ಸೋಂಕಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ ಶಿವಕುಮಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು ಆರೋಗ್ಯ ಕ್ಷೇಮ ವಿಚಾರಿಸಿದರು. ಆದಷ್ಟು ಬೇಗ ಚೇತರಿಸಿಕೊಂಡು ಮರಳುವಂತೆ ಹಾರೈಸಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.