ತೊಡಕು: ಸ್ವಯಂ ಪ್ರೇರಿತ ಪಿಐಎಲ್, ನೋಟಿಸ್
Team Udayavani, May 30, 2020, 5:50 AM IST
ಬೆಂಗಳೂರು: ರಾಜ್ಯದಲ್ಲಿ ಜೂ. 1ರಿಂದ ಸೀಮಿತವಾಗಿ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಾಲಯಗಳ ಕಲಾಪ ಆರಂಭಿಸುವ ಹಿನ್ನೆಲೆಯಲ್ಲಿ ವಿವಿಧ ಕೆಟಗರಿಯ ಪ್ರಕರಣಗಳಲ್ಲಿ ಎದುರಾಗುವ ಕಾನೂನಾತ್ಮಕ ಹಾಗೂ ತಾಂತ್ರಿಕ ತೊಡಕುಗಳಿಗೆ ಪರಿಹಾರ ಹುಡುಕಲು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜತೆಗೆ ಕರ್ನಾಟಕ ವಕೀಲರ ಪರಿಷತ್ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೂ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಗತ್ಯ ಸಲಹೆ ನೀಡಲು ಅಮಿಕಸ್ ಕ್ಯೂರಿ ಆಗಿ ವಿಚಾರಣೆ ವೇಳೆ ಹಾಜರಾಗುವಂತೆ ಹಿರಿಯ ವಕೀಲರಾದ ಉದಯ ಹೊಳ್ಳ ಹಾಗೂ ಸಿ.ವಿ.ನಾಗೇಶ್ ಅವರಿಗೆ ನ್ಯಾಯಪೀಠ ಮನವಿ ಮಾಡಿದೆ.
ಜಿಲ್ಲಾ ಕೋರ್ಟ್ ಕಲಾಪಗಳ ನಿರ್ವಹಣೆಗೆ ರೂಪಿಸಲಾದ ಮಾರ್ಗಸೂಚಿಗಳ (ಎಸ್ಒಪಿ) ಪ್ರತಿಯನ್ನು ಆ ಇಬ್ಬರು ಹಿರಿಯ ವಕೀಲರಿಗೆ ಒದಗಿಸುವಂತೆ ರಿಜಿಸ್ಟ್ರಾರ್ ಜನರಲ್ಗೆ ಸೂಚನೆ ನೀಡಿ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕ್ರಿಮಿನಲ್ ಪ್ರಕರಣಗಳ ಸಂಬಂಧ ಕಾನೂನಾತ್ಮಕ ಹಾಗೂ ತಾಂತ್ರಿಕ ತೊಡಕುಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಹುಡುಕಬೇಕಿದೆ. ಈ ಕುರಿತು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲು ಅನುಕೂಲವಾಗುವಂತೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್ ಜನರಲ್ಗೆ ನ್ಯಾಯಪೀಠ ನಿರ್ದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ