ನಿರ್ಮಾಣ ಲೋಪ: ತನಿಖೆಗೆ ಆದೇಶ
Team Udayavani, Jun 27, 2020, 5:00 AM IST
ಬೆಂಗಳೂರು: ನಗರದ ಕೆಂಗೇರಿ ಬಳಿ ಮಳೆ ನೀರುಗಾಲುವೆ ಒಡೆದು ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಉದ್ದೇಶಿತ ರಾಜಕಾಲುವೆ ನಿರ್ಮಾಣದಲ್ಲಾದ ಲೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ.
ಈ ಸಂಬಂಧ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರಿಗೆ ಪತ್ರ ಬರೆದಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, “ನಗರದಲ್ಲಿ ಗುರುವಾರ ಸುರಿದ ಮಳೆಗೆ ಕೆಂಗೇರಿ ಬಳಿ ತಡೆಗೋಡೆ ಕುಸಿದು, ರಸ್ತೆ ಕಿತ್ತುಹೋಗಿದೆ. ಇಡೀ ನೀರುಗಾಲುವೆ ತಡೆಗೋಡೆ ನಿರ್ಮಿಸಲು ಬಿಬಿಎಂಪಿ ಮಾಡಿದ ಖರ್ಚುವೆಚ್ಚ ಸಹಿತ ಕಾಮಗಾರಿ ಅನುಷ್ಠಾನ, ತಡೆಗೋಡೆ ಕುಸಿಯಲು ಕಾರಣಗಳು ಸೇರಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸಮಿತಿ ರಚಿಸಿ ಮೌಲ್ಯಮಾಪನ ನಡೆಸಬೇಕು. ಕರ್ತವ್ಯಲೋಪ ಕಂಡುಬಂದರೆ ಕ್ರಮವಹಿಸಲು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ