ಡ್ರಗ್ಸ್‌ ಪಿಡುಗು ತಡೆಗೆ ಸಹಕಾರ ಅಗತ್ಯ


Team Udayavani, Jun 27, 2020, 5:14 AM IST

drugss-pidugu

ಬೆಂಗಳೂರು: ಮಾದಕ ವಸ್ತು ಮಾರಾಟ, ಸೇವನೆ ಪಿಡುಗನ್ನು ತೊಲಗಿಸುವ ಕಾರ್ಯಕ್ಕೆ ನಾಗರಿಕರು ಸಹಕಾರ ನೀಡಬೇಕು ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೇಳಿದರು. ಶುಕ್ರವಾರ ನಗರ ಪೊಲೀಸ್‌ ಆಯುಕ್ತರ  ಕಚೇರಿಯಲ್ಲಿ ನಡೆದ “ಮಾದಕ ವಸ್ತು ವಿರೋಧಿ’ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮಾದಕವಸ್ತು ಜಾಲ ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಜಾಲದಲ್ಲಿ ಕಾಲೇಜು ವಿದ್ಯಾರ್ಥಿಗಳು, ಯುವ ಸಮೂಹ, ಸುಶಿಕ್ಷಿತರು  ಬಲಿಯಾಗುತ್ತಿದ್ದಾರೆ. ಈ ಜಾಲವನ್ನು ಹೋಗಲಾಡಿಸಲು ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಶ್ರಮಿಸುತ್ತಿದೆ. ನಾಗರಿಕರು ಕೈ ಜೋಡಿಸಬೇಕೆಂದರು. ಮಾದಕ ವಸ್ತು ಮಾರಾಟ, ಸೇವನೆ ಕಂಡು ಬಂದರೆ ನಾಗರಿಕರು ಟೋಲ್‌ ಫ್ರೀ ನಂಬರ್‌  1098 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು. 2019 ರಿಂದ 2020ರಲ್ಲಿ ಇಲ್ಲಿಯವರೆಗೆ ನಗರ ಪೊಲೀಸರು ಮಾದಕ ವಸ್ತು ಮಾರಾಟ ಜಾಲ ಮಟ್ಟಹಾಕಲು  ಶ್ರಮಿಸಿದ್ದಾರೆ. ಡಾರ್ಕ್‌ ವೆಬ್‌ ಮೂಲಕ ನಡೆಯುತ್ತಿದ್ದ ಜಾಲವನ್ನು ಭೇದಿಸಲಾಗಿತ್ತು.

ಅಂತಾರಾಷ್ಟ್ರೀಯ ದಂಧೆಕೋರರು ಕೊರಿಯರ್‌ ಮೂಲಕ ನಡೆಸುತ್ತಿದ್ದ ದಂಧೆಯನ್ನು ಬಯಲಿಗೆಳೆಯಲಾಗಿತ್ತು. ಅಷ್ಟೇ ಅಲ್ಲದೆ ಈ ಜಾಲದ  ವಿರುದಟಛಿ ಎನ್‌ಡಿಪಿಎಸ್‌ ಕಾಯಿದೆ ಅಡಿಯಲ್ಲಿ 1,174 ಪ್ರಕರಣಗಳನ್ನು ದಾಖಲಿಸಿ 44 ವಿದೇಶಿ ಪ್ರಜೆಗಳು ಸೇರಿ 1845 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 1,016 ಕೆ.ಜಿ ಗಾಂಜಾ, 2.9 ಕೆ.ಜಿ ಅಫೀಮು, 1.5 ಕೆ.ಜಿ ಹಶೀಶ್‌, 345  ಗ್ರಾಂ ಕೊಕೇನ್‌, 85 ಗ್ರಾಂ ಚರಸ್‌ , 1079 ಮಾದಕ ವಸ್ತು ಮಾತ್ರೆಗಳು ಸೇರಿ ಅಪಾರ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಆಯುಕ್ತರು ವಿವರಿಸಿದರು.

ಮಾದಕ ವಸ್ತು ಸಮಾಜಕ್ಕೆ ಮಾರಕ; ಬೊಮ್ಮಾಯಿ: ಮಾದಕ ವಸ್ತು ವ್ಯಕ್ತಿಗೆ ಮಾತ್ರವಲ್ಲ. ಸಮಾಜಕ್ಕೂ ಮಾರಕ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಮ್ಮ ದೇಶ ಮತ್ತು ರಾಜ್ಯಕ್ಕೆ ದೊಡ್ಡ ಇತಿಹಾಸವಿದೆ.  ಮಾನವೀಯತೆ ಇರದ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇರುವುದಿಲ್ಲ. ಸಮಾಜದಲ್ಲಿ ಯಾರೇ ಮಾದಕ ವಸ್ತು ಸೇವನೆ ಮಾಡುತ್ತಿದ್ದರೆ ತಮಗೆ ಸಂಬಂಧವಿಲ್ಲ ಎಂದು ಭಾವಿಸಬಾರದು.

ಕೂಡಲೇ ಪೊಲೀಸರು ಅಥವಾ ಪೊಲೀಸ್‌  ಕಂಟ್ರೋಲ್‌ ರೂಂಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಇನ್ನೂ ಸಿಸಿಬಿ ಪೊಲೀಸರು ನಗರಾದ್ಯಂತ ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಿದ್ದಾರೆ. ಪ್ರಮುಖವಾಗಿ ಕೆನಡಾ, ಆಫ್ರಿಕಾ, ಕೇರಳದವರಾಗಿದ್ದಾರೆ. ಆದರೆ, ಕೆಲ  ಆರೋಪಿಗಳಿಗೆ ಬಹುಬೇಗನೆ ಜಾಮೀನು ಸಿಗುತ್ತಿದೆ. ಈ ಬಗ್ಗೆ ಸಂಶೋಧನೆ ನಡೆಯುತ್ತಿದ್ದು, ಹೊಸ ಕಾನೂನು ಜಾರಿಗೆ ತರಲು ಚಿಂತಿಸಲಾಗಿದೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.