ಕಾನ್ಫರೆನ್ಸ್‌ ಮೂಲಕವೇ ಕೋರ್ಟ್‌ ಕಲಾಪ


Team Udayavani, Jun 28, 2020, 5:45 AM IST

confe kalap

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನ್ಯಾಯಾಲಯಗಳು (ಜಿಲ್ಲಾ ಮತ್ತು ವಿಚಾರಣಾ ಕೋರ್ಟ್‌) ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಕಾರ್ಯ ನಿರ್ವಹಿಸುವಂತೆ ನಿರ್ದೇಶಿಸಿದ್ದ  ಹೈಕೋರ್ಟ್‌ ಇದೀಗ ಈ ಕುರಿತಂತೆ ಕಾನೂನು ರೂಪಿಸಿದೆ. ವಿಡಿಯೋ ಕಾನ್ಫರೆನ್ಸ್‌ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ಜೂ. 8ರಂದು ನೀಡಿದ್ದ ನಿರ್ದೇಶನಗಳನ್ನೇ  “ನ್ಯಾಯಾಲಯಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್‌ ನಿಯಮಗಳು” ಹೆಸರಿನಲ್ಲಿ ಜಾರಿಗೆ ತರಲಾಗಿದೆ.

ರಾಜ್ಯ ಸರ್ಕಾರ ನಿಯಮಗಳಿಗೆ ಒಪ್ಪಿಗೆ ನೀಡಿ ಜೂ. 25 ರಂದು ಅಧಿಸೂಚನೆ ಹೊರಡಿಸಿದ್ದು ಅಧಿಕೃತವಾಗಿ ಜಾರಿಯಾಗಿವೆ.  ನೂತನ  ನಿಯಮಗಳಲ್ಲಿ ವಿಡಿಯೋ ಕಾನ್ಫರೆನ್ಸಿಂಗ್‌ ಸೌಲಭ್ಯವನ್ನು ಪಡೆದುಕೊಳ್ಳುವುದು, ಬಳಸುವುದು, ಪ್ರಕ್ರಿಯೆ ಸೇರಿದಂತೆ ವಕೀಲರು ಮತ್ತು ಕಕ್ಷಿದಾರರು ಈ ಹೊಸ ವ್ಯವಸ್ಥೆಗೆ ಹೇಗೆ ಹೊಂದಿಕೊಳ್ಳಬಹುದು ಎಂಬುದನ್ನು ವಿವರಿಸಲಾಗಿದೆ.  ಪ್ರಮುಖವಾಗಿ, ಕೋರ್ಟ್‌ಗಳು ನ್ಯಾಯದಾನ ಪ್ರಕ್ರಿಯೆಯ ಎಲ್ಲ ಹಂತಗಳಲ್ಲಿ ಈ ವ್ಯವಸ್ಥೆಯನ್ನು ಬಳಸಬಹುದು.

ಸಿಪಿಸಿ, ಸಿಆರ್‌ಪಿಸಿ, ನ್ಯಾಯಾಂಗ ನಿಂದನೆ, ಸಾಕ್ಷ್ಯ ಸೇರಿದಂತೆ ಎಲ್ಲ ಪ್ರಕ್ರಿಯೆಗಳಲ್ಲೂ ವಿಡಿಯೋ ಕಾನ್ಫರೆನ್ಸ್‌  ಮೂಲಕವೇ ನಡೆಸಬಹುದು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಲು ಇಂಟರ್‌ನೆಟ್‌ ಸಮಸ್ಯೆ ಇರುವ ಹಳ್ಳಿಗಾಡು ಪ್ರದೇಶಗಳಿಗೆ ಅನುಕೂಲವಾಗುವಂತೆ ಹತ್ತಿರದ ಕೋರ್ಟ್‌ನಲ್ಲಿ ಉಪಕರಣ ಸೇರಿದಂತೆ ಸೂಕ್ತ ವ್ಯವಸ್ಥೆ, ಸೌಲಭ್ಯ  ಒದಗಿಸಬೇಕು. ಕೋರ್ಟ್‌ ಪ್ರಕ್ರಿಯೆಯಲ್ಲಿ ಇವುಗಳನ್ನು ಬಳಸಲು ಕೋಆರ್ಡಿನೇಟರ್‌ (ಸಮನ್ವಯಕಾರ) ಇರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಪರಿಷ್ಕೃತ ಮಾರ್ಗಸೂಚಿ: ಹಿಂದಿನಂತೆ ಕೋರ್ಟ್‌ ಪ್ರವೇಶ ವಕೀಲರಿಗೆ, ಸಿಬ್ಬಂದಿಗೆ ಸೀಮಿತಗೊಳಿಸಲಾಗಿದೆ, ಸಾರ್ವಜನಿಕರಿಗೆ ಪ್ರವೇಶದ ನಿರ್ಬಂಧ ಮುಂದುವರಿಯಲಿದೆ. ಸಿಬ್ಬಂದಿ, ವಕೀಲರು ಸೇರಿ ಎಲ್ಲರೂ ಮಾಸ್ಕ್ ಧರಿಸುವುದು  ಕಡ್ಡಾಯಗೊಳಿಸಲಾಗಿದೆ. ಆದರೆ ಕೋರ್ಟ್‌ ಪ್ರವೇಶಿಸುವ ಪ್ರತಿಯೊಬ್ಬರಿಗೂ ಆರೋಗ್ಯ ಸೇತು ಆ್ಯಪ್‌ ಕಡ್ಡಾಯಗೊಳಿಸಲಾಗಿದೆ. ಹೈಕೋರ್ಟ್‌ನಲ್ಲಿ ಮಾತ್ರ ವಕೀಲರ ಜೊತೆ ಅವರ ಒಬ್ಬ ಕ್ಲರ್ಕ್‌ ಗೂ ಕೋರ್ಟ್‌ ಆವರಣ ಪ್ರವೇಶಕ್ಕೆ ಅವಕಾಶ  ನೀಡಲಾಗಿದೆ.

ಹೈಕೋರ್ಟ್‌ನಲ್ಲಿ ಇ-ಫೈಲಿಂಗ್‌ ಮತ್ತು μಸಿಕಲ್‌ ಫೈಲಿಂಗ್‌ಗೆ ಅವಕಾಶ ಮುಂದುವರಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಿಗೆ ಮುಂದಿನ ಎರಡು ವಾರಗಳ ಕಾಲ ಬೆಳಗ್ಗೆ 10, ಮಧ್ಯಾಹ್ನ 10 ಪ್ರಕರಣಗಳ  ವಿಚಾರಣೆಗೆ ಅವಕಾಶ ಮುಂದುವರಿಸಲಾಗಿದೆ. ವಕೀಲರು ಖುದ್ದು ವಾದ ಮಂಡಿಸಬಹುದು, ಅಗತ್ಯಬಿದ್ದರೆ ವಿಡಿಯೋ ಕಾನ್ಫರೆನ್ಸ್‌ ಆಯ್ಕೆ ಮಾಡಿಕೊಳ್ಳಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.