ಕೋವಿಡ್‌ 19 ನಿರ್ವಹಣೆಗೆ ಅಷ್ಟ ದಿಕ್ಪಾಲಕರು


Team Udayavani, Jul 10, 2020, 6:23 AM IST

kovid-bbmp

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಣ ಕಾರ್ಯದ ಪರಿಣಾಮಕಾರಿ ಮೇಲ್ವಿಚಾರಣೆಗಾಗಿ ಬಿಬಿಎಂಪಿಯ ಎಂಟು ವಲಯಗಳ ಉಸ್ತುವಾರಿಯನ್ನು ನಗರದ ಏಳು ಸಚಿವರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ  ಕಾರ್ಯದರ್ಶಿಯೊಬ್ಬರಿಗೆ ವಹಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಕೋವಿಡ್‌ 19 ನಿಯಂತ್ರಣಕ್ಕೆ ಶನಿವಾರ ಹಾಗೂ ಭಾನುವಾರ ಲಾಕ್‌ ಡೌನ್‌ ಸೇರಿದಂತೆ ಕೆಲವು ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದು ನಗರದ  ಎಂಟು ವಲಯಗಳಿಗೆ ಒಬೊಬ್ಬ ಸಚಿವರಿಗೆ ಉಸ್ತುವಾರಿ ವಹಿಸುವ ಬಗ್ಗೆ ತೀರ್ಮಾನಿಸಲಾಯಿತು.

ಎಂಟು ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿವಲಯಕ್ಕೆ ಒಬ್ಬ ಸಚಿವರುಗಳಂತೆ ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥ  ರಾಯಣ, ಸಚಿವರಾದ  ವಿ.ಸೋಮಣ್ಣ, ಆರ್‌.ಅಶೋಕ್‌, ಎಸ್‌.ಸುರೇಶ್‌ ಕುಮಾರ್‌, ಎಸ್‌.ಟಿ.ಸೋಮಶೇಖರ್‌, ಕೆ.ಗೋಪಾಲಯ್ಯ, ಬಿ.ಎ. ಬಸವರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌. ಆರ್‌.ವಿಶ್ವನಾಥ್‌  ಅವರನ್ನು ನೇಮಿಸಲಾಗಿದೆ ಎಂದು ಕೋವಿಡ್‌ 19 ಉಸ್ತುವಾರಿ ಹೊತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಪೂರ್ವ ವಲಯದ ಉಸ್ತುವಾರಿಯಾಗಿ ವಿ.ಸೋಮಣ್ಣ, ದಕ್ಷಿಣ ವಲಯಕ್ಕೆ ಆರ್‌.ಅಶೋಕ್‌, ರಾಜರಾಜೇಶ್ವರಿನಗರ ವಲಯಕ್ಕೆ ಎಸ್‌.ಟಿ. ಸೋಮಶೇಖರ್‌,  ದಾಸರಹಳ್ಳಿ ವಲಯಕ್ಕೆ ಕೆ.ಗೋಪಾಲಯ್ಯ, ಮಹದೇವಪುರ ವಲಯಕ್ಕೆ ಬಿ.ಎ.ಬಸವರಾಜು, ಯಲಹಂಕ ವಲಯಕ್ಕೆ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಉಸ್ತುವಾರಿಯಾಗಿ  ನಿಯೋಜಿಸುವ ಸಾಧ್ಯತೆ ಇದೆ. ಪೂರ್ವ ವಲಯಕ್ಕೆ ಸಂಬಂಧಪಟ್ಟಂತೆ ವಿ.ಸೋಮಣ್ಣ, ಯಲಹಂಕಕ್ಕೆ ಸಂಬಂಧಪಟ್ಟಂತೆ ಎಸ್‌. ಆರ್‌.ವಿಶ್ವನಾಥ್‌ ಗುರುವಾರದಿಂದಲೇ ಸಭೆಗಳನ್ನು ನಡೆಸಲಾರಂಭಿಸಿದ್ದಾರೆ ಎನ್ನಲಾಗಿದೆ.

ಒಬ್ಬ ಹಿರಿಯ  ಐಎಎಸ್‌ ಅಧಿಕಾರಿ, ಕಾರ್ಪೊರೇಟರ್‌ ಗಳನ್ನೊಳಗೊಂಡ ಟಾಸ್ಕ್ಫೋರ್ಸ್‌ನ ತಂಡಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಟ್ರೇಸಿಂಗ್‌ ಮತ್ತು ಟ್ರ್ಯಾಕಿಂಗ್‌ ಮಾಡಲು ಕಷ್ಟಸಾಧ್ಯವಾಗಿದೆ. ಇನ್ನು ಮುಂದೆ ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸುಧಾಕರ್‌ ಹೇಳಿದರು.

ಎಂಟು ಐಎಎಸ್‌ ಅಧಿಕಾರಿಗಳಿಗೂ ಜವಾಬ್ದಾರಿ: ರಾಜಧಾನಿಯಲ್ಲಿ ಕೋವಿಡ್‌- 19 ಸೋಂಕು ಹರಡುವಿ  ಕೆಯನ್ನು ಪರಿಣಾಮಕಾರಿ ನಿಯಂತ್ರಣಕ್ಕಾಗಿ ಬಿಬಿಎಂ ಪಿಯ ಎಂಟು ವಲಯಗಳಲ್ಲಿ ಮೇಲ್ವಿಚಾರಣೆಗಾಗಿ ಎಂಟು ಮಂದಿ  ಹಿರಿಯ ಐಎಎಸ್‌ ಅಧಿಕಾರಿಗಳನ್ನು ವಲಯ ಸಂಯೋಜಕರಾಗಿ ಸರ್ಕಾರ ನಿಯೋಜಿಸಿದೆ. ನಗರದಲ್ಲಿ ಸೋಂಕು ನಿಯಂತ್ರಣ ನಿರ್ವಹಣಾ ಕ್ರಮಗಳ ಮೇಲ್ವಿಚಾರಣೆ, ಪರಿಶೀಲನೆ ಹಾಗೂ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಲು  ಎಂಟು ವಲಯಗಳಿಗೆ ವಲಯ ಸಂಯೋಜಕರನ್ನಾಗಿ ಹಿರಿಯ ಐಎಎಸ್‌ ಅಧಕಾರಿಗಳನ್ನು ನಿಯೋಜಿಸಿ ಕಾರ್ಯೋನ್ಮುಖರಾಗುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಗುರುವಾರ ಆದೇಶ ಹೊರಡಿಸಿದ್ದಾರೆ.

ಈ ಎಂಟು  ಮಂದಿ ವಲಯ ಸಂಯೋಜಕರು ಬಿಬಿಎಂಪಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಕಾರ್ಯ ನಿರ್ವಹಿಸಬೇಕು. ಹಾಗೆಯೇ ಪಾಲಿಕೆಯ ಎಲ್ಲ ಜಂಟಿ ಆಯುಕ್ತರು, ಅಕಾರಿಗಳು, ಸಿಬ್ಬಂದಿ ಸರ್ಕಾರ ಹಾಗೂ ಸರ್ಕಾರದ ನಿಗಮ/ ಮಂಡಳಿಯ  ಅಧಿಕಾರಿ, ಸಿಬ್ಬಂದಿ ಕೂಡ ವಲಯ ಸಂಯೋಜಕರಿಗೆ ಅಗತ್ಯ ನೆರವು ನೀಡುವಂತೆಯೂ ಆದೇಶದಲ್ಲಿ ಸೂಚಿಸಿದ್ದಾರೆ.

ಶೂನ್ಯ ಮರಣ ಪ್ರಮಾಣ: ಬೆಂಗಳೂರಿನಲ್ಲಿ ಗುರುವಾರದಂದು 606 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಈಗಲೂ ರಾಜ್ಯದ ಮತ್ತು ಬೆಂಗಳೂರಿನ ಮರಣ ಪ್ರಮಾಣ ರಾಷ್ಟ್ರೀಯ  ಸರಾಸರಿಗಿಂತ ಕಡಿಮೆ ಇದೆ. ಶೂನ್ಯ ಮರಣಪ್ರಮಾಣ ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಚಿವರು ಹೇಳಿದರು. 1ಲಕ್ಷ ಆಂಟಿಜೆನ್‌ ಕಿಟ್‌ ತರಿಸಲಾಗಿದ್ದು ವಾರಾಂತ್ಯದಲ್ಲಿ ಬೆಂಗಳೂರಿನಲ್ಲೇ 30-40 ಸಾವಿರ  ಟೆಸ್ಟ್‌  ನಡೆಸಲಾಗುವುದು ಇದರಿಂದ ಸೋಂಕಿತರ ತ್ವರಿತ ಪತ್ತೆಗೆ ಸಹಾಯವಾಗಲಿದೆ ಎಂದು ಡಾ.ಸುಧಾಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.