ಕೋವಿಡ್ 19: ಯಾವುದೇ ಸಂದರ್ಭ ಎದುರಿಸಲು ಸಿದ್ಧ
Team Udayavani, Jul 9, 2020, 5:37 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದ್ದು ಯಾವುದೇ ಸಂದರ್ಭ ಎದುರಿಸಲು ಸಿದ್ಧರಿದ್ದೇವೆ. ಜನತೆ ಆತಂಕಪಡಬೇಕಿಲ್ಲ ಎಂದು ಕೋವಿಡ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮಲ್ಲಿ ಅನುಭವಿ ಹಾಗೂ ದೂರದೃಷ್ಟಿವುಳ್ಳ ಅಧಿಕಾರಿಗಳು ಇದ್ದಾರೆ.
ಹೀಗಾಗಿಯೇ ಕೋವಿಡ್ 19 ನಿಯಂತ್ರಿಸಲು ಸಾಧ್ಯವಾಗಿದೆ. ಎಲ್ಲ ಹಂತಗಳಲ್ಲಿಯೂ ಸುಸೂತ್ರವಾಗಿ ಕೆಲಸ ನಡೆಯುತ್ತಿದೆ. ಯಾರೂ ಆತಂಕ ಪಟ್ಟು ಬೆಂಗಳೂರು ಬಿಟ್ಟು ಹೋಗುವ ಅವಶ್ಯಕತೆಯಿಲ್ಲ ಎಂದು ಹೇಳಿದರು. ನೆರೆ ರಾಜ್ಯಗಳಾದ ಹೈದರಾಬಾದ್, ಚೆನ್ನೈ, ಮುಂಬೈ ಮತ್ತಿತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೀಗಾಗಿ, ಯಾರೂ ಭಯ ಬೀಳಬೇಕಿಲ್ಲ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕೋವಿಡ್ 19 ಅಕ್ಟೋಬರ್ಗೆ ಪರಾಕಾಷ್ಠೆಗೆ ಮುಟ್ಟಲಿದೆ ಎಂದು ಐಸಿಎಂಆರ್ ಈಗಾಗಲೇ ಎಚ್ಚರ ನೀಡಿದೆ. ಅದಕ್ಕೆ ತಕ್ಕ ಹಾಗೆ ಸರ್ಕಾರವು ಕೋವಿಡ್ 19 ಚಿಕಿತ್ಸೆಗೆ ಹಾಸಿಗೆಗಳ ವ್ಯವಸ್ಥೆ, ಕೋವಿಡ್ ಕೇರ್ ಸೆಂಟರ್ಗಳನ್ನೂ ಅಗತ್ಯಕ್ಕೆ ತಕ್ಕಂತೆ ಸ್ಥಾಪನೆ ಮಾಡಿದ್ದೇವೆ. ಬೆಂಗಳೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ 10 ಸಾವಿರಕ್ಕೂ ಹೆಚ್ಚು ಹಾಸಿಗೆಗಳ ಕೋವಿಡ್ ಕೇಂದ್ರ ತೆರೆದಿದ್ದು ಇದು ಜಗತ್ತಿನಲ್ಲೇ ದೊಡ್ಡದು ಎಂದರು. ಪ್ರತಿನಿತ್ಯ 20 ಸಾವಿರ ಪರೀಕ್ಷೆಗಳು ನಡೆಯುತ್ತಿದ್ದು 100 ಪ್ರಯೋಗಾಲಯ ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಕೋವಿಡ್ 19 ಸಮುದಾಯಕ್ಕೆ ಹರಡುವ ಹಂತಕ್ಕೆ ಬಂದಿಲ್ಲ. ವ್ಯಾಪಕವಾಗಿ ಹಬ್ಬುತ್ತಿದೆ ಆದರೆ ಸಮುದಾಯದ ಮಟ್ಟಕ್ಕೆ ಬಂದಿಲ್ಲ. ಪ್ರಸ್ತುತ ಎರಡನೇ ಹಂತದಲ್ಲಿದ್ದು ಅದೇ ಹಂತದಲ್ಲಿ ಮುಂದುವರಿದಿದೆ. ಈ ಹಂತದ ದಾಟದ ಹಾಗೆ ಎಲ್ಲ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು.
-ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ