ಹಾಸಿಗೆ ಸಿಗದಿರುವುದೇ ಪರದಾಟಕ್ಕೆ ಕಾರಣ?


Team Udayavani, Apr 18, 2021, 12:44 PM IST

ASCbcovid effect

ಬೆಂಗಳೂರು: ನಗರದಲ್ಲಿ ಕೊರೊನಾ ಗಣನೀಯವಾಗಿ ಏರಿಕೆ ಆಗುತ್ತಿದ್ದು, ಹಾಸಿಗೆಗಳ ಕೊರತೆ ಸೃಷ್ಟಿ ಆಗುತ್ತಿದೆ. ಇದಕ್ಕೆ ಕೆಲವು ಖಾಸಗಿ ಆಸ್ಪತ್ರೆಗಳು ಸಕಾಲದಲ್ಲಿ ಶೇ.50 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲು ಹಿಂದೇಟು ಹಾಕುತ್ತಿರುವುದೇ ಕಾರಣ. ಹೌದು, ನಗರದಲ್ಲಿ ಕೊರೊನಾ ಸೋಂಕಿತರ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸಕಾಲದಲ್ಲಿ ಶೇ.50 ಹಾಸಿಗೆಗಳನ್ನು ಬಿಟ್ಟುಕೊಡದೆ ಇರುವುದರಿಂದ ಐಸಿಯು ಮತ್ತು ಆಕ್ಸಿಜನ್‌ ಆಧಾರಿತ ಚಿಕಿತ್ಸೆಗೆ ಹಿನ್ನಡೆ ಉಂಟಾಗುತ್ತಿದೆ.

ಇದುವರೆಗೂ ಶೇ.15ರಿಂದ 20 ಪ್ರತಿಶತ ಹಾಸಿಗೆಗಳು ಮಾತ್ರ ಖಾಸಗಿಯಿಂದ ಲಭ್ಯವಾಗಿದೆ. ರೋಗಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಹಾಸಿಗೆಗಳ ಕೊರತೆಯಿದೆ. ಖಾಸಗಿ ಆಸ್ಪತ್ರೆಗಳು ಕೊರೊನೇತರ ಸೋಂಕಿತರಿಗೂ ಚಿಕಿತ್ಸೆ ನೀಡುತ್ತಿರುವುದರಿಂದ ಹಾಸಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎನ್ನುತ್ತಿವೆ.

ಇದು ಪಾಲಿಕೆ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ಜಟಾಪಟಿಗೂ ಕಾರಣವಾಗಿದೆ. ಕೊರೊನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಈ ಹಿಂದೆ ಅನುಸರಿಸಿದ ಮಾರ್ಗದಂತೆಯೇ ಖಾಸಗಿ ಆಸ್ಪತ್ರೆಗಳಿಂದ ಶೇ.50 ಹಾಸಿಗೆಗಳನ್ನು ಪಡೆದು ಸರ್ಕಾರಿ ಕೋಟಾದ ಅಡಿ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಖಾಸಗಿ ಆಸ್ಪತ್ರೆಗಳಿಂದ ಶೇ.50 ಹಾಸಿಗೆ ಪಡೆದುಕೊಳ್ಳುವ ನಿಟ್ಟಿನಲ್ಲಿ ನೋಟಿಸ್‌ ಜಾರಿ ಮಾಡಲಾಗಿದೆ.

ಹತ್ತು ದಿನಗಳ ಕಾಲಾವಕಾಶ ನೀಡುವಂತೆ ಖಾಸಗಿ ಆಸ್ಪ ತ್ರೆ ಗಳು ಕೋರಿದ್ದವು. ಈ ಅವಧಿ ಮುಕ್ತಾಯವಾಗಿದ್ದು, ಮುಂದಿನ ದಿನಗಳಲ್ಲಿ ಹಾಸಿಗೆ ಪಡೆವ ನಿಟ್ಟಿನಲ್ಲಿ ಕ್ರಮ ವಹಿಸುವು ದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದ್ದರು. ಆದರೆ, ನೋಟಿಸ್‌ ನೀಡಿರುವ ಬಗ್ಗೆ ಹಾಗೂ ಕ್ರಮದ ಎಚ್ಚರಿಕೆಯ ಬಗ್ಗೆ ಪಾಲಿಕೆಯಿಂದ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ನಗರದ ಖಾಸಗಿ ಆಸ್ಪತ್ರೆಗಳಿಂದ ಒಟ್ಟು ಆರು ಸಾವಿರ ಹಾಸಿಗೆಗಳನ್ನು ಪಡೆದುಕೊಳ್ಳುವ ಗುರಿ ಹಾಕಿಕೊಳ್ಳಲಾಗಿದೆ. ಸುವರ್ಣ ಆರೋಗ್ಯ ಸುರûಾ ಟ್ರಸ್ಟ್‌ ನಿಂದ 4,300 ಹಾಸಿಗೆಗಳ ಲಭ್ಯತೆ ಇದೆ ಎಂದು ಪಾಲಿಕೆ ತಿಳಿಸಿದೆ.

ಆಕ್ಸಿಜನ್‌ ಸಕಾಲದಲ್ಲಿ ಲಭ್ಯವಾಗುತ್ತಿಲ್ಲ: ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ಸೃಷ್ಟಿ ಆಗುತ್ತಿರುವುದೂ ಖಾಸಗಿ ಆಸ್ಪ ತ್ರೆಗಳು ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಬಿಟ್ಟುಕೊಡಲು ಹಿಂದೇಟು ಹಾಕುತ್ತಿವೆ ಎನ್ನಲಾಗಿದೆ. ನಗರದಲ್ಲಿ ಐಸಿಯು ಮತ್ತು ವೆಂಟಿಲೇಟರ್‌ ಆಧಾರಿತ ಚಿಕಿತ್ಸೆಗೆ ಒಳಗಾಗುವವರಿಗೆ ಸೀಮಿತವಾದ ಹಾಸಿಗೆಗಳು ಇರುವುದು ಆತಂಕ ಹೆಚ್ಚಾಗಲು ಕಾರಣವಾಗಿದೆ. ನಗರದ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಮೀಸಲಿಟ್ಟಿರುವ 5,919 ಹಾಸಿಗೆಗಳ ಪೈಕಿ ಸಾಮಾನ್ಯ ಹಾಸಿಗೆ ಶೇ. 53, ಆಕ್ಸಿಜನ್‌ ಹಾಸಿಗೆ ಶೇ. 74, ಐಸಿಯು ಹಾಸಿಗೆ ಶೇ. 91ಭರ್ತಿಯಾಗಿವೆ.  1,287 ಸಾಮಾನ್ಯ, 653 ಆಕ್ಸಿಜನ್‌, 30 ಐಸಿಯು,18 ಐಸಿಯು (ವೆಂಟಿಲೇಟರ್‌) ಹಾಸಿಗೆಗಳು ಲಭ್ಯವಿದೆ.

ಖಾಸಗಿ ಆಸ್ಪತ್ರೆಗಳಿಂದ ಶೇ.50 ಹಾಸಿಗೆ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈಗಾಗಲೇ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಒಮ್ಮೆ ನೋಟಿಸ್‌ ನೀಡಲಾಗಿದೆ.

ಗೌರವ್‌ಗುಪ್ತ, ಬಿಬಿಎಂಪಿ ಮುಖ್ಯ ಆಯುಕ್ತ

ಸರ್ಕಾರಿ ಕೋಟಾದಡಿ ಬರುವವರಿಂದ ವಸೂಲಿ

ಕೊರೊನಾ ದೃಢಪಟ್ಟು, ಸರ್ಕಾರಿ ಕೋಟಾದ ಅಡಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರಿಂದಲೂ ಖಾಸಗಿ ಆಸ್ಪತ್ರೆಗಳು ಹಣಕ್ಕಾಗಿ ಒತ್ತಾ ಯಿಸುತ್ತಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ಕೋಟಾದ ಅಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದವರಿಂದ ಖಾಸಗಿ ಆಸ್ಪತ್ರೆಗಳು ಹಣ ಪಡೆಯುವಂತಿಲ್ಲ.

ಸರ್ಕಾರವೇ ಇವರ ವೆಚ್ಚವನ್ನು ಭರಿಸಲಿದೆ. ಆದರೆ, ಪರಿಸ್ಥಿತಿಯನ್ನು ದುರು ಪಯೋಗ ಪಡೆಸಿಕೊಳ್ಳುತ್ತಿರುವ ಕೆಲವು ಆಸ್ಪತ್ರೆಗಳು ಹಣಕ್ಕಾಗಿ ಒತ್ತಡ ಹೇರುತ್ತಿವೆ ಎನ್ನಲಾಗಿದೆ. 80 ವರ್ಷದ ನಮ್ಮ ತಂದೆಗೆ ಮೂರು ದಿನಗಳ ಹಿಂದೆ ಕೊರೊನಾ ದೃಢಪಟ್ಟಿತ್ತು. ಬಿಬಿಎಂಪಿ ಶಿಫಾರಸಿನಂತೆ ವಸಂತನಗರದ ಮಹಾವೀರ ಜೈನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲು ಮುಂದಾದ ವೇಳೆ 40 ಸಾವಿರ ರೂ. ಪಾವತಿ ಮಾಡುವಂತೆ ಕೇಳಿದರು ಎಂದು ಲೋಕೇಶ್‌ ಎಂಬವರು ಆರೋ ಪಿಸಿದ್ದಾರೆ. ಕೊರೊನಾ ತೀವ್ರವಾಗಿದ್ದ ಹಿನ್ನೆಲೆ ಅನಿವಾರ್ಯವಾಗಿ ಸಾಲ ಮಾಡಿ ಆಸ್ಪತ್ರೆಗೆ ದಾಖಲು ಮಾಡಬೇಕಾಯಿತು. ಈಗ ತಾಯಿಗೂ ದೃಢಪಟ್ಟಿದೆ. ಆರ್ಥಿಕವಾಗಿ ಕುಸಿದಿದ್ದೇನೆ ಎಂದರು.

ಹಿತೇಶ್‌ ವೈ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.