ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
Team Udayavani, Jun 26, 2021, 6:30 PM IST
ಚಿಂತಾಮಣಿ: ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರಪರಿಣಾಮ ಬೀರುತ್ತದೆ ಎಂದು ತಜ್ಞರು ಸಲಹೆ ನೀಡಿದ್ದು, ಅದರಂತೆವೈದ್ಯರ ನೇಮಕ ಸೇರಿ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಜೆ.ಕೆ.ಕೃಷ್ಣಾರೆಡ್ಡಿಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಪಂ ಕಚೇರಿಯಲ್ಲಿ ಸಭೆ ನಡೆಸಿದ ಅವರು, ತಾಲೂಕಿನಲ್ಲಿಮಕ್ಕಳ ತಜ್ಞರಕೊರತೆ ಇದೆ.ಕಳೆದ ಬಾರಿಯಂತೆ ಮಕ್ಕಳ ತಜ್ಞರನ್ನು ನೇಮಕಮಾಡಿಕೊಂಡು, ಮೂರನೇ ಅಲೆಯಿಂದ ಮಕ್ಕಳ ರಕಣೆ Ò ಮಾಡಲುಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಈಗಾಗಲೇ ತಾಲೂಕಿನ ಬಟ್ಲಹಳ್ಳಿಯಲ್ಲಿ 30 ಬೆಡ್ ಸಿದ್ಧಪಡಿಸಿದ್ದು,ವೈದ್ಯರ ನೇಮಕ ಮಾಡಿಕೊಂಡು ಮತ್ತೂಂದು 30 ಹಾಸಿಗೆಗಳ ಕೊಠಡಿಸಿದ್ಧಪಡಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುವುದು. ತಾಲೂಕಿನಲ್ಲಿ 22 ಸಾವಿರಮಕ್ಕಳಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಮಾಡಿ,ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಎಂದು ಸಲಹೆ ನೀಡಿದರು.
ಈ ವೇಳೆಸಭೆಯಲ್ಲಿ ತಹಶೀಲ್ದಾರ್ ಹನುಮಂತರಾಯಪ್ಪ, ಇಒ ಮಂಜುನಾಥ,ತಾಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ, ವೈದ್ಯಾಧಿಕಾರಿ ಡಾ.ಸಂತೋಷ್,ಸಿಡಿಪಿಒ ಮಹೇಂದ್ರಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ