ಡೆಡ್ಲಿ ಟ್ರಿಪಲ್‌ ರೈಡಿಂಗ್‌ಗೆ ಮೂವರು ಎಂಜಿನಿಯರ್‌ಗಳ ಬಲಿ

ಎಚ್‌ಎಎಲ್‌ ಉದ್ಯೋಗಿ ಸೇರಿ ಮೂವರು ಸಾವು

Team Udayavani, May 7, 2019, 4:39 PM IST

1-ae

ಬೆಂಗಳೂರು: ವೀಕೆಂಡ್‌ ಪಾರ್ಟಿ ಮುಗಿಸಿದ ಮೂವರು ಸ್ನೇಹಿತರು ಒಂದೇ ಬೈಕ್‌ನಲ್ಲಿ ವೇಗವಾಗಿ ತೆರಳುತ್ತಿದ್ದ ವೇಳೆ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಬಸವೇಶ್ವರ ನಗರದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಎಚ್‌ಎಎಲ್‌ ಉದ್ಯೋಗಿ ಅನಿಲ್‌, ಖಾಸಗಿ ಕಂಪನಿ ಉದ್ಯೋಗಿಗಳಾದ ಶ್ರೀನಾಥ್‌, ಕಾರ್ತಿಕ್‌ ಮೃತರು. ಪಾನಮತ್ತ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಚಾಲನೆ ವೇಳೆ ಹೆಲ್ಮೆಟ್‌ ಕೂಡ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌರಿಬಿದನೂರು ಮೂಲದ ಅನಿಲ್‌ ನಾಸಿಕ್‌ನಲ್ಲಿರುವ ಎಚ್‌ಎಎಲ್‌ನಲ್ಲಿ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಟಿ.ನರಸೀಪುರ ಮೂಲದ ಶ್ರೀನಾಥ್‌ ಹಾಗೂ ಕಾರ್ತಿಕ್‌ ಸಾಫ್ಟ್ವೇರ್‌ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ರಜೆ ಮೇರೆಗೆ ಅನಿಲ್‌ ಬೆಂಗಳೂರಿಗೆ ಆಗಮಿಸಿದ್ದ ಮೂವರು ಸ್ನೇಹಿತರು ಜತೆಯಾಗಿದ್ದರು. ಭಾನುವಾರ ಮಾಗಡಿರಸ್ತೆಯ ಸ್ನೇಹಿತರ ಮನೆಯಲ್ಲಿ ಉಳಿದುಕೊಳ್ಳಲು ಬೈಕ್‌ನಲ್ಲಿ ಮೂವರೂ ತೆರಳುತ್ತಿದ್ದರು. ತಡರಾತ್ರಿ 12.35ರಸುಮಾರಿಗೆ ಬಸವೇಶ್ವರ ನಗರದ ಸಿದ್ದಯ್ಯ ಪುರಾಣಿಕ್‌ ರಸ್ತೆಯಲ್ಲಿ ಬೈಕ್‌ ವೇಗವಾಗಿ ಚಲಾಯಿಸುತ್ತಿದ್ದ ಕಾರ್ತಿಕ್‌, ನಿಯಂತ್ರಣ ತಪ್ಪಿ ರಸ್ತೆಬದಿಯಿದ್ದ ಲೈಟ್‌ ಕಂಬಕ್ಕೆ ಡಿಕ್ಕಿ ಹೊಡೆಸಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್‌ ಅದೇ ವೇಗದಲ್ಲಿ ಹೋಗಿ ಡಿವೈಡರ್‌ಗೆ ಹೊಡೆದಿದೆ. ಬೈಕ್‌ನಲ್ಲಿದ್ದ ಮೂವರೂ ಹಾರಿ, ನೆಲಕ್ಕೆ ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಭೀಕರ ಘಟನೆ ಕಂಡ ಆಟೋ ಚಾಲಕ ಶ್ರೀನಿವಾಸ್‌, ರಸ್ತೆ ಮೇಲೆ ಬಿದ್ದಿದ್ದ ಮೃತದೇಹಗಳನ್ನು ನೋಡಿ ಕಿರುಚಿಕೊಂಡಿದ್ದು, ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು.

ಭಾನುವಾರ ಸಂಜೆ ಆರು ಗಂಟೆ ಸುಮಾರಿಗೆ ಮೂವರೂ ಒಂದೇ ಬೈಕ್‌ನಲ್ಲಿ ತೆರಳಿದ್ದರು. ತಡರಾತ್ರಿ ಆಗಮಿಸುವಾಗ ಈ ದುರಂತ ಸಂಭವಿಸಿದೆ ಎಂದು ಮೃತ ಕಾರ್ತಿಕ್‌ ಸಂಬಂಧಿ ಮಹೇಶ್‌ ಹೇಳಿಕೆ ನೀಡಿದ್ದಾರೆ.

ಕಾಲೇಜು ದಿನಗಳಿಂದಲೇ ಮೂವರೂ ಆಪ್ತ ಸ್ನೇಹಿತರಾಗಿದ್ದು, ಆಗಾಗ ಭೇಟಿಯಾಗುತ್ತಿದ್ದರು. ಮೂವರೂ ಅವಿವಾಹಿತರಾಗಿದ್ದು, ಸದ್ಯದಲ್ಲೇ ಅನಿಲ್‌ಗೆ ಮದುವೆ ಮಾಡಲು ಪೋಷಕರು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ದುರಂತ ನಡೆದಿದೆ ಎಂದು ಸಂಬಂಧಿಕರು ಕಣ್ಣೀರು ಹಾಕಿದರು ಎಂದು ಅಧಿಕಾರಿ ಹೇಳಿದರು.

300 ಮೀಟರ್‌ ದೂರ ಹೋಗಿದ್ದ ಬೈಕ್‌!
ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯಂತೆ ಅಪಘಾತ ನಡೆದ ಸ್ಥಳದಲ್ಲಿಯೇ ಒಬ್ಟಾತನ ಮಿದುಳು ಹೊರಬಂದು ದೂರದಲ್ಲಿ ಬಿದ್ದಿತ್ತು. ಜತೆಗೆ, ಡಿವೈಡರ್‌ಗೆ ಡಿಕ್ಕಿಯಾದ ಬಳಿಕ ಬೈಕ್‌, ಸುಮಾರು 300 ಮೀಟರ್‌ ದೂರದವರೆಗೆ ರಸ್ತೆಯನ್ನು ಉಜ್ಜಿಕೊಂಡು ಹೋಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಕಂಡು ಬಂದಿದೆ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.