ಅಭಿವೃದ್ಧಿ ಸ್ಪಷ್ಟತೆ ಇಲ್ಲದ ಭೂ ಭರ್ತಿ ಅನುದಾನ!


Team Udayavani, Apr 21, 2020, 2:50 PM IST

ಅಭಿವೃದ್ಧಿ ಸ್ಪಷ್ಟತೆ ಇಲ್ಲದ ಭೂ ಭರ್ತಿ ಅನುದಾನ!

ಬೆಂಗಳೂರು: ನಗರದ ಕಸ ಸುರಿಯಲು ಪಾಲಿಕೆ ಆಯ್ಕೆ ಮಾಡಿಕೊಂಡಿದ್ದ ಭೂ ಭರ್ತಿ ಕೇಂದ್ರಗಳ ಸುತ್ತಲಿನ ಪ್ರದೇಶ ಅಭಿವೃದ್ಧಿಗೆ ಪಾಲಿಕೆ ಈ ವರ್ಷದ ಬಜೆಟ್‌ನಲ್ಲಿ ದೊಡ್ಡ ಮೊತ್ತ ಮೀಸಲಿರಿಸಿದೆ. ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುವ ಕ್ಷಣ ಸನಿಹದಲ್ಲಿರುವಂತೆ ಕಂಡರೂ, ಈ ಪ್ರದೇಶಗಳನ್ನು ಯಾವ ರೀತಿ ಅಭಿವೃದ್ಧಿ ಮಾಡಲಾಗುತ್ತದೆ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಕೆಲ ರಾಜಕೀಯ ಪಕ್ಷಗಳು ಭೂಭರ್ತಿ ಪ್ರದೇಶಗಳ ಸುತ್ತಲಿನ ಹಳ್ಳಿಗಳಲ್ಲಿನ ಜನರನ್ನು ಎತ್ತಿಕಟ್ಟಿ ಕಸ ಸುರಿಯದಂತೆ ತಡೆದ ಪ್ರಯತ್ನ ಆಗಾಗ್ಗೆ ವರದಿಯಾಗಿವೆ.

ಅಭಿವೃದ್ಧಿಗೆ ಹಣ ಮೀಸಲಿಟ್ಟರೆ ಮಾತ್ರ ಕಸ ಸುರಿಯಿರಿ ಎಂಬ ಧಿಕ್ಕಾರಗಳ ಕೂಗು ಕೇಳಿಬಂದಿತ್ತು. ಈಗ ರಾಜಕೀಯ ಇಚ್ಛಾಶಕ್ತಿ ಮೇಲುಗೈ ಸಾಧಿಸಿದೆ. ಸಾಮಾನ್ಯವಾಗಿ ಒಂದು ಪಕ್ಷ ಆಡಳಿತಕ್ಕೆ ಬಂದರೆ ವಿರೋಧ ಪಕ್ಷದ ಸದಸ್ಯರು ಆಡಳಿತದಲ್ಲಿರುವ ವ್ಯಾಪ್ತಿಯ ಭೂಭರ್ತಿ ಸುತ್ತಲಿನ ಪ್ರದೇಶದ ಅಭಿವೃದ್ಧಿ ತಾರತಮ್ಯ ಮಾಡಲಾಗುತ್ತದೆ. ಆದರೆ, ಈ ಬಾರಿ ಕೆಲ ಭೂಭರ್ತಿ
ಪ್ರದೇಶಗಳ ಸುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಕೋಟಿಗಟ್ಟಲೆ ಮೀಸಲಿಡಲಾಗಿದೆ. ಇದರಲ್ಲಿ ಜನರ ಹಿತಾಸಕ್ತಿ ನಡುವೆ ಇಲ್ಲಿ ರಾಜಕೀಯ ಹಿತಾಸಕ್ತಿಯೂ ಕೆಲಸ ಮಾಡಿದೆ.

ಪಾಲಿಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಭೂಭರ್ತಿ ಸುತ್ತಲಿನ ಪ್ರದೇಶಗಳಲ್ಲಿ ಆಡಳಿತ ಪಕ್ಷದ ನಾಯಕರೇ ಇದ್ದಾರೆ. ಅಲ್ಲದೆ, ಈ ಬಾರಿ ಹಿಂದಿನ ವರ್ಷಗಳಿಗಿಂತ ಹೆಚ್ಚು ಹಣ ಮೀಸಲಿಡಲಾಗಿದೆ. ಈ ವರ್ಷಾಂತ್ಯದಲ್ಲಿ ಪಾಲಿಕೆ ಚುನಾವಣೆಯೂ ಇದ್ದು ಇಲ್ಲಿನ ಸ್ಥಳೀಯರನ್ನು ಮನವೊಲಿಸಿಕೊಳ್ಳಲು ಜನಪ್ರತಿನಿಧಿಗಳು ದಾಳ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಭೂ ಭರ್ತಿ ಪ್ರದೇಶದಲ್ಲಿ ಹಣ ವಿನಿಯೋಗಿಸುವುದಾದರೆ ಜಲಮೂಲ, ವಾಯುಮಾಲಿನ್ಯ ತಡೆಗೆ ಕ್ರಮ  ತೆಗೆದುಕೊಳ್ಳಬೇಕು. ಅಲ್ಲದೆ, ಆರೋಗ್ಯ ತಪಾಸಣೆ, ಶುದ್ಧ ಕುಡಿವ ನೀರು ನೀಡಬೇಕು. ಈ ಭಾಗಗಳಲ್ಲಿ ಲಾರಿಗಳು ಹೆಚ್ಚು ಸಂಚರಿಸುವುದರಿಂದ ಪ್ರತ್ಯೇಕ ರಸ್ತೆ ಅಭಿವೃದ್ಧಿ ಮಾಡಬೇಕು ಇಂತಹ ಯಾವುದೇ ನಿರ್ದಿಷ್ಟ ಯೋಜನೆಯನ್ನು ಪಾಲಿಕೆ ನೀಡಿಲ್ಲ. ಕರ್ನಾಟಕ ಕಾಂಪೋಸ್ಟ್‌ ಅಭಿವೃದ್ಧಿ ನಿಗಮ ಅಭಿವೃದ್ಧಿ, ಮಂಡೂರು ಭೂ ಭರ್ತಿ, ಬೆಳ್ಳಳ್ಳಿ ಸುತ್ತಮುತ್ತ ಪ್ರದೇಶಾಭಿವೃದ್ಧಿಗೆ ತಲಾ 15 ಕೋಟಿ ರೂ. ಅನುದಾನ., ಮಾವಳ್ಳಿಪುರ, ದೊಡ್ಡಬಿದರ ಕಲ್ಲು ಸುತ್ತಲಿನ
ಪ್ರದೇಶಾಭಿವೃದ್ಧಿಗೆ ತಲಾ 10 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನು ಸುಬ್ಬರಾಯನಪಾಳ್ಯ, ಲಿಂಗದೀರನಹಳ್ಳಿ, ಕನ್ನಹಳ್ಳಿ ಮತ್ತು ಸೀಗೇಹಳ್ಳಿ ಸುತ್ತಮುತ್ತಲಿನ ಪ್ರದೇಶಾಭಿವೃದ್ಧಿಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ.

ಕುಸಿದ ಘಟಕ ಅಭಿವೃದ್ಧಿಗೆ 15 ಕೋಟಿ ರೂ.
ಬಿಬಿಎಂಪಿ ಕಸ ಸಂಸ್ಕರಣಾ ಘಟಕಗಳ ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಬಿಬಿಎಂಪಿ 7 ಕಸ ಸಂಸ್ಕರಣಾ ಘಟಕಗಳಲ್ಲಿ ಹಲವು ಸಾಧನ ಕಳಪೆಯಾಗಿದ್ದು,
ಇದನ್ನು ಬದಲಾಯಿಸುವ ಬಗ್ಗೆ ಚರ್ಚೆಯಾಗಿತ್ತು. ಇದರಲ್ಲೂ ಕ್ರಿಯಾಯೋಜನೆ ರೂಪಿಸಿಕೊಳ್ಳುವ ಬಗ್ಗೆ ಪಾಲಿಕೆ ಪ್ರಸ್ತಾಪ ಮಾಡಿಲ್ಲ. ಒಟ್ಟಾರೆ ಘನತ್ಯಾಜ್ಯ ನಿರ್ವಹಣೆಗೆ 757 ಕೋಟಿ ರೂ.
ಮೀಸಲಿಡಲಾಗಿದೆ.

● ಹಿತೇಶ್‌ ವೈ

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.