ಮನೆ ಕಡೆ ಬರಬೇಡಿ; ಕಾಲ್‌ ಮಾಡಿ.!


Team Udayavani, Jul 2, 2020, 5:37 AM IST

hasige bed

ಬೆಂಗಳೂರು: ನಗರದಲ್ಲಿ ಕೋವಿಡ್‌ 19 ಸೋಂಕು ಆತಂಕ ತೀವ್ರವಾಗುತ್ತಿರುವ ಬೆನ್ನಲ್ಲೇ ಪಾಲಿಕೆ ಸದಸ್ಯರು ತಮ್ಮ ಬೆಂಬಲಿಗರು ಹಾಗೂ ಸಾರ್ವಜನಿಕರಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಕೇಳಿಬರುತ್ತಿದೆ. ಈಗಾಗಲೇ ಮೂವರು  ಸದಸ್ಯರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದು ಉಳಿದ ಸದಸ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ದಿಲ್ಲದೆ ಸಾರ್ವಜನಿಕರಿಂದ ಹಾಗೂ ಖುದ್ದು ಅವರ ಬೆಂಬಲಿಗರಿಂದ ಅಂತರ ಕಾಯ್ದುಕೊಳ್ಳಿತ್ತಿದ್ದಾರೆ. ತಮ್ಮ ವಾರ್ಡ್‌ನ  ನಿವಾಸಿಗಳಿಗೆ “ನಿವಾಸದ ಬಳಿ ಆಗಮಿಸಬೇಡಿ. ಸಮಸ್ಯೆಗಳಿದ್ದರೆ, ನಾವು ಕೂಡಲೇ ಸ್ಪಂದಿಸುತ್ತೇವೆ ನಮಗೆ ಜಸ್ಟ್‌ ಕರೆ ಮಾಡಿ. ಪರಿಹರಿಸುತ್ತೇವೆ.

ನೀವು ಮನೆಯ ಹತ್ತಿರ ಆಗಮಿಸುವುದರಿಂದ ನಿಮ್ಮ ಮತ್ತು ನಮ್ಮ ಆರೋಗ್ಯಕ್ಕೂ ತೊಂದರೆ ಉಂಟಾಗಬಹುದು. ಹೀಗಾಗಿ, ನೇರ ಭೇಟಿಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ’ ಎಂದು ಮನವಿ ಮಾಡುತ್ತಿರುವುದು ವರದಿಯಾಗುತ್ತಿದೆ. ಅಂದಹಾಗೆ, ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್‌ ಪಾಷಾ, ಸಿದ್ಧಾಪುರ ವಾರ್ಡ್‌  ಸದಸ್ಯ ಎ. ಮುಜಾಹಿದ್‌ ಪಾಷಾ ಹಾಗೂ ಜಗಜೀವನ್‌ರಾಮ್‌ನಗರ ವಾರ್ಡ್‌ ಪಾಲಿಕೆ ಸದಸ್ಯೆ ಸೀಮಾ ಅಪ್ತಾಫ್ ಖಾನ್‌ ಅವರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಇಮ್ರಾನ್‌ ಪಾಷಾ ಗುಣಮುಖರಾಗಿದ್ದಾರೆ.

ಬೆಡ್‌ ಸಿಗದೇ ಇಬ್ಬರು ಮೃತ: ಸಕಾಲದಲ್ಲಿ ಹಾಸಿಗೆಗಳು ಸಿಗದೆ, ಆ್ಯಂಬುಲೆನ್ಸ್‌ ಬಾರದೆ ಇಬ್ಬರು ಸೋಂಕಿತರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಚೋಳರ ಪಾಳ್ಯದ 43 ವರ್ಷದ ವ್ಯಕ್ತಿ ಹಾಗೂ ಮಾಗಡಿ ರಸ್ತೆಯ ಟೋಲ್‌ ಗೇಟ್‌  ಬಳಿಯ 52 ವರ್ಷದ ಸೋಂಕಿತರು ಆಸ್ಪತ್ರೆಗಳಲ್ಲಿ ಬೆಡ್‌ ಗಳು ಸಿಗದೆ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಮಾಗಡಿ ರಸ್ತೆಯ ಟೋಲ್‌ಗೇಟ್‌ ಬಳಿಯ 52 ವರ್ಷದ ವ್ಯಕ್ತಿ 5 ದಿನಗಳಿಂದ ಕೆಮ್ಮು ಶೀತಜ್ವರದಿಂದ ಬಳಲುತ್ತಿದ್ದು,  ವಿಜಯ ನಗರದ ಮಾರುತಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು.

ನಂತರ ಗುರುವಾರ ರಾತ್ರಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದಾರೆ. ಭಾನು ವಾರ ಸೋಂಕು ದೃಢಪಟ್ಟಿದ್ದು, ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯು ವುದಾಗಿ ಬಿಬಿಎಂಪಿ ಆರೋಗ್ಯ  ಅಧಿಕಾರಿಗಳು ತಿಳಿಸಿ, ಮೂರು ದಿನಗಳಾದರೂ ಬಂದಿಲ್ಲ. ಸೋಮ ವಾರ ಬಿಬಿ ಎಂಪಿ ಸಿಬ್ಬಂದಿಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ.ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆ ವಾಹನದಲ್ಲಿ ತೆರಳಿದ್ದಾರೆ. ಮಂಗಳವಾರ ರಾತ್ರಿ 11ರಿಂದ ಬೆಳಗ್ಗೆ  6ರವರೆಗೆ 9 ಆಸ್ಪತ್ರೆಗಳನ್ನು ತಿರುಗಿದ್ದಾರೆ.

ಯಾರೂ ಚಿಕಿತ್ಸೆ ನೀಡಿಲ್ಲ. ಪರಿಣಾಮ ಸೋಂಕಿತರು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ವಿಕ್ಟೋ ರಿಯಾ ಆಸ್ಪತ್ರೆಯಲ್ಲಿ ಮಾಹಿತಿ ನೀಡುತ್ತಿಲ್ಲ ಎಂದು ಕುಟುಂಬ ಸ್ಥರು ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಅದೇ ರೀತಿ, ಚೋಳರಪಾಳ್ಯದ ವ್ಯಕ್ತಿಯೊಬ್ಬರಿಗೆ ಸೋಂಕು ಬಂದಿದ್ದು, ವಿಕ್ಟೋರಿಯಾ, ಕಿಮ್ಸ್‌, ಕೆ.ಸಿ. ಜನರಲ್‌ ಸೇರಿದಂತೆ ಖಾಸಗಿ ಆಸ್ಪತ್ರೆಗೆ ಅಲೆದಾಡಿದರೂ, ಬೆಡ್‌ ಸಿಕ್ಕಿಲ್ಲ. ಕೊನೆಗೆ ಮನೆ ಯಲ್ಲಿಯೇ ಪ್ರತ್ಯೇಕ  ಕೊಠಡಿಯಲ್ಲಿ ಇರಿಸಿದ್ದರು.

ಬುಧವಾರ ಬೆಳಗ್ಗೆ ನೋಡಿದಾಗ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತದೇಹವನ್ನು ವಿಕ್ಟೋರಿಯಾಗೆ ಕೊಂಡೊಯ್ಯಲಾಗಿದೆ. ಬೆಡ್‌ಗಳ ಕೊರತೆಯಿಂದ ಮಂಗಳವಾರ ಸೋಂಕಿತರೊಬ್ಬರು ಆ್ಯಂಬುಲೆನ್ಸ್‌ನಲ್ಲಿಯೇ ಇಡೀ ರಾತ್ರಿ ಕಳೆದಿದ್ದಾರೆ. ಸೋಂಕಿತರಿಗೆ ವೆಂಟಿಲೇಟರ್‌ ಅಗತ್ಯವಿದ್ದು, ಮಂಗಳವಾರ ಸಂಜೆ 6ರಿಂದ 11ರವರೆಗೆ ಆ್ಯಂಬುಲೆನ್ಸ್‌ನಲ್ಲಿಯೇ ಉಳಿಯುವಂತಾಯಿತು. ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ  ಕರೆದೊಯ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.