ಹಾಸಿಗೆ ಕೊರತೆ ಎಂಬ ಆತಂಕ ಬೇಡ
Team Udayavani, Jul 6, 2020, 5:53 AM IST
ಬೆಂಗಳೂರು: ಇತ್ತೀಚೆಗೆ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ 722 ಹಾಸಿಗೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ.80 ಹಾಸಿಗೆ ಖಾಲಿ ಇರುವ ಮಾಹಿತಿಯಿದ್ದು, ಹಾಸಿಗೆ ಕೊರತೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಬೆಂಗಳೂರಿನಲ್ಲಿ ರೋಗಿಗಳಿಗೆ ಹಾಸಿಗೆ ಹಂಚಿಕೆ ಆತಂಕದ ಬಗ್ಗೆ ಚರ್ಚೆ ನಡೆಯುತ್ತಿದೆ.
ಇತ್ತೀಚೆಗೆ ನಡೆದ ಟಾಸ್ಕ್ ಫೋರ್ಸ್ ಸಭೆ ಮಾಹಿತಿ ಪ್ರಕಾರ ವಿಕ್ಟೋರಿಯಾ ಆಸ್ಪತ್ರೆ, ರಾಜೀವ್ಗಾಂಧಿ ಎದೆರೋಗಿಗಳ ಸಂಸ್ಥೆ ಹಾಗೂ ಬೌರಿಂಗ್ ಆಸ್ಪತ್ರೆ ಹೊರತುಪಡಿಸಿ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲಿ 722 ಹಾಸಿಗೆ ಸಿದ್ಶಪಡಿಸಲಾಗಿತ್ತು. ಜತೆಗೆ ಖಾಸಗಿ ವೈದ್ಯಕೀಯ ಕಾಲೇಜು ಶೇ.50 ಹಾಸಿಗೆ ಕಾಯ್ದಿರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಪ್ಪಿವೆ ಎಂದು ತಿಳಿಸಿದ್ದಾರೆ.
ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲೂ ಶೇ.50 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟು ಸರ್ಕಾರದ ಸ್ವಾಮ್ಯಕ್ಕೆ ನೀಡಬೇಕು ಎಂಬ ಸಿಎಂ ಮನವಿಗೆ ಖಾಸಗಿ ಆಸ್ಪತ್ರೆಗಳು ಒಪ್ಪಿವೆ. ಅದರಂತೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.80 ಹಾಸಿಗೆ ಖಾಲಿ ಇವೆ. ಹೀಗಾಗಿ ಹಾಸಿಗೆ ಕೊರತೆ ಆಗಿದೆ ಎಂಬ ಆತಂಕ ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳಿಗೆ ಹೊಸ ಸೋಂಕಿತ ಪ್ರಕರಣ ವರದಿ ಸಿಗುತ್ತಿದ್ದಂತೆ ಸೂಕ್ತ ಹಾಸಿಗೆ ಗುರುತಿಸಿ ಜೋಡಿಸಲು ಸ್ವಲ್ಪ ಸಮಯ ಬೇಕಾಗುತ್ತದೆ.
ಇದನ್ನು ಅರ್ಥ ಮಾಡಿಕೊಳ್ಳಬೇಕು. ರೋಗ ಲಕ್ಷಣವಿಲ್ಲದವರು ಸದೃಢರಾಗಿ, ಆರೋಗ್ಯವಂತರಾಗಿದ್ದರೆ ಮನೆಯಲ್ಲೇ ಪ್ರತ್ಯೇಕವಾಗಿರಬಹುದು. ವೈದ್ಯರು ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸಿ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ