ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತು
Team Udayavani, Jun 17, 2020, 5:56 AM IST
ಬೆಂಗಳೂರು: ಆಗಸ್ಟ್ನಲ್ಲಿ ಕೋವಿಡ್-19 ವೈರಸ್ ಸೋಂಕಿತರು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರ ಸಮಿತಿ ವರದಿ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವು ದು. ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಭರ್ತಿಯಾದರೆ ಫೀಲ್ಡ್ ಆಸ್ಪತ್ರೆ ಕಾರ್ಯಾರಂಭಕ್ಕೂ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ 10,000 ಹಾಸಿಗೆಗಳನ್ನು ಐಸೋಲೇಟ್ ಮಾಡಿ ಕಾಯ್ದಿರಿಸುವ ಕೆಲಸ ನಡೆದಿದೆ. ಖಾಸಗಿ ಆಸ್ಪತ್ರೆಗಳೊಂದಿಗೂ ಮಾತುಕತೆ ನಡೆಸಲಾಗಿದ್ದು, ಸರ್ಕಾ ರಕ್ಕೆ ಸಮಸ್ಯೆ ಉಂಟಾದಾಗ ಕೈ ಜೋಡಿಸುವುದಾಗಿ ಭರವಸೆ ನೀಡಿವೆ ಎಂದರು.ಜಿಲ್ಲೆ, ತಾಲೂಕುಗ ಳಲ್ಲಿ ಫೀಲ್ಡ್ ಆಸ್ಪತ್ರೆ ಬಗ್ಗೆಯೂ ಟಾಸ್ಕ್ ಫೋ ರ್ಸ್ ಸಭೆಯಲ್ಲಿ ಚರ್ಚಿ ಸಲಾಗಿದ್ದು, ತಜ್ಞರೊಂ ದಿಗೆ ಸಮಾಲೋಚನೆ ನಡೆದಿದೆ. ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದರೆ ತಜ್ಞರ ಸಮಿತಿ ಸಲಹೆ ಪಡೆದು ಜಿಲ್ಲೆಗೊಂದು ಫೀಲ್ಡ್ ಆಸ್ಪತ್ರೆ ರೂಪಿಸಲಾಗುವುದು ಎಂದರು.
ಹಿಂದೆ ಕಳಪೆ ಕಿಟ್ ಬಂದಿದ್ದವು: ಈಗಲೂ ಕಳಪೆ ಕಿಟ್ ಪೂರೈಕೆಯಾಗಿದ್ದರೆ ಸಂಬಂಧ ಪಟ್ಟ ವರ ವಿರುದ ಎಫ್ಐಆರ್ ದಾಖಲಿಸಬೇಕು. ನಿ ರಂತರ ಪರಿಶೀಲನೆ, ತನಿಖೆ ನಡೆಯುತ್ತಿದೆ ಎಂದರು. ಮುಚ್ಚಿಟ್ಟಿಲ್ಲ: ಸೋಂಕಿನಿಂದ ಮೃತ ಪಟ್ಟರೆ ಅದನ್ನು ಕೋವಿಡ್ ಸಾವು ಪ್ರಕರಣ ಎಂದು ದಾಖಲಿಸಲಾಗುತ್ತಿದೆ. ಬುಧವಾರ ನಡೆಯುವ ಟಾಸ್ಕ್ಫೋರ್ಸ್ ಸಭೆಯಲ್ಲಿ ಈ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದರು.
ನಗರದಲ್ಲಿ ಕೋವಿಡ್ 19 ಸಾವಿನ ಸಂಖ್ಯೆ ಹೆಚ್ಚಾಗಿರು ವುದು ಆತಂಕ ಮೂಡಿಸಿದೆ. ಈ ಸಂಬಂಧ ಬುಧವಾರ ಹಿರಿಯ ಅಧಿಕಾರಿಗ ಳೊಂದಿಗೆ ಸಭೆ ನಡೆಸಲಾಗುವುದು. ಸೋಂಕು ಹಾಗೂ ಸಾವು ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.
-ಬಿ. ಶ್ರೀರಾಮುಲು, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್