ತಂತಿ ತಗುಲಿ ತಾಯಿ-ಮಗಳು ದಹನ ಪ್ರಕರಣ; ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು

ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೇರಿ 7 ಮಂದಿಗೆ ನೋಟಿಸ್‌

Team Udayavani, Nov 23, 2023, 2:23 PM IST

4-lokayuktha

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ತಾಯಿ, ಮಗು ಸಜೀವ ದಹನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೇರಿ 7 ಮಂದಿ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಿದೆ.

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಕೆ.ಆರ್‌.ಸರ್ಕಲ್‌ನ ಬೆಸ್ಕಾಂ ಕಚೇರಿಯ ವ್ಯವಸ್ಥಾಪಕ ನಿರ್ದೇಶಕರು, ಉತ್ತರ ವಲಯದ ಬೆಸ್ಕಾಂನ ಮುಖ್ಯ ಎಂಜಿನಿಯರ್‌, ಪೂರ್ವ ವೃತ್ತದ ಬೆಸ್ಕಾಂನ ಅಧೀಕ್ಷಕ ಎಂಜಿನಿಯರ್‌, ವೈಟ್‌ಫೀಲ್ಡ್‌ ವಿಭಾಗದ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್‌, ವೈಟ್‌ಫೀಲ್ಡ್‌ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಸಹಾಯಕ ಎಂಜಿನಿಯರ್‌ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಕೊಳ್ಳಲಾಗಿದೆ.

ಹಾಗೆಯೇ ಎರಡು ವಾರಗಳಲ್ಲಿ (ಡಿ.8ರೊಳಗೆ) ಘಟನೆ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ನೋಟಿಸ್‌ನಲ್ಲಿ ಉಲ್ಲೇಖೀಸಲಾಗಿದೆ. ಲೋಕಾಯುಕ್ತ ದೂರಿನಲ್ಲಿ ಪ್ರಮುಖವಾಗಿ ಇಂತಹ ಘಟನೆಗಳು ಕಳೆದ ಕೆಲ ವರ್ಷಗಳಿಂದ ನಡೆಯುತ್ತಲೇ ಇವೆ. ಬೆಸ್ಕಾಂ ವೆಬ್‌ಸೈಟ್‌ ಪ್ರಕಾರ 2015-16ರಿಂದ 2022ರ ಅವಧಿಯಲ್ಲಿ ಪ್ರತಿ ವರ್ಷ 200-280 ವಿದ್ಯುತ್‌ ಅವಘಢಗಳು ಸಂಭವಿಸಿವೆ.

ಈ ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಲೇ ಘಟನೆ ನಡೆದಿದೆ ಎಂಬುದು ಪತ್ತೆಯಾಗಿದೆ. ತಾಯಿ-ಮಗಳು ಬೆಸ್ಕಾಂ ಕಚೇರಿಯ 100 ಮೀಟರ್‌ ದೂರದಲ್ಲಿ ವಿದ್ಯುತ್‌ ಅವಘಡಕ್ಕೆ ಬಲಿಯಾಗಿದ್ದಾರೆ. ಹಾಗಾದರೆ ರಸ್ತೆ ಬದಿಯಿರುವ ಬೀದಿ ದೀಪ, ಮರಗಳು, ಕಟ್ಟಡಗಳು, ಟೆಲಿಫೋನ್‌ ಕಂಬ, ಟ್ರಾನ್‌ Õಫಾರ್ಮರ್‌ ಹಾಗೂ ಇತರೆಡೆ ಹಾದು ಹೋಗಿರುವ ವಿದ್ಯುತ್‌ ವೈಯರ್‌ಗಳ ನಿರ್ವಹಣೆ ಹೇಗೆ ಎಂಬುದು ಪ್ರಶ್ನೆಯಾಗಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ತನಿಖೆ ಹಾದಿ ತಪ್ಪಿಸಲು ಇಲಿ ಮೇಲೆ ದೋಷಣೆ

ಬೆಂಗಳೂರು: ತಾಯಿ, ಮಗು ಬಲಿ ಪಡೆದ ವಿದ್ಯುತ್‌ ಅವಘಡ ಪ್ರಕರಣದ ಬಗ್ಗೆ ಸಬೂಬುಗಳನ್ನು ಹೇಳುವುದು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ.ಜೆ. ಜಾರ್ಜ್‌ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ ಆಗ್ರಹಿಸಿದ್ದಾರೆ.

ತನಿಖೆಗೆ 4 ಸಮಿತಿ ರಚಿಸಿರುವುದಾಗಿ ಜಾರ್ಜ್‌ ಅವರೇ ಹೇಳಿದ್ದಾರೆ. ತನಿಖೆ ಮುಗಿದು ವರದಿ ಕೈ ಸೇರುವ ಮೊದಲೇ ಇಲಿ ಮೇಲೆ ಎತ್ತಿಹಾಕು ತ್ತಿರುವ ಹಿಂದಿನ ಉದ್ದೇಶವಾದರೂ ಏನು? ತನಿಖೆಯ ಹಾದಿ ತಪ್ಪಿಸುವ ಯತ್ನ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಹೀಗೆಯೇ ವರದಿ ನೀಡಲಿ ಎಂದು ಪರೋಕ್ಷವಾಗಿ ತನಿಖಾ ಸಮಿತಿಗಳ ಮೇಲೆ ಒತ್ತಡ ಹೇರಿದಂತೆ ಅಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ: ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮೌನ ವಹಿಸುವುದು ಸರಿಯಲ್ಲ. ತಕ್ಷಣವೇ ಮಧ್ಯಪ್ರವೇಶಿಸಿ ಸಚಿವ ಜಾರ್ಜ್‌ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ನ್ಯಾಯ ಸಿಗುವ ತನಕ ಹೋರಾಟ: ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಕೊಲೆಗಡುಕ ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು. ಇಂಧನ ಸಚಿವರ ರಾಜೀನಾಮೆ ಪಡೆದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ತನಕ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದು ಅಶೋಕ ಎಚ್ಚರಿಸಿದ್ದಾರೆ.

 

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.