ಗೃಹದಿಗ್ಬಂಧನ ಉಲ್ಲಂಘಿಸಿದರೆ ಎಫ್ಐಆರ್
Team Udayavani, Jun 27, 2020, 5:07 AM IST
ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತಿದ್ದು, ನಿಯಮ ಉಲ್ಲಂಘಿಸಿದವರನ್ನು ಸಾಂಸ್ಥಿಕ ದಿಗ್ಬಂಧನಕ್ಕೆ ಒಳಪಡಿಸಲಾಗುವುದಲ್ಲದೇ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜೆ. ಮಂಜುನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರು.
ಗೃಹ ದಿಗ್ಬಂಧನದಲ್ಲಿರುವವರ ಮೇಲೆ ನಿಗಾ ಇಡಲು ಬಿಬಿಎಂಪಿಯು ವಿವಿಧ ಮಟ್ಟದಲ್ಲಿ ತಂಡಗಳನ್ನು ರಚಿಸಿದೆ. ಈ ಹಿಂದೆ ಗೃಹ ದಿಗ್ಬಂದನ ಉಲ್ಲಂಘಿಸಿದವರಿಗೆ ಕೇವಲ ಎಚ್ಚರಿಕೆ ನೀಡಲಾಗುತ್ತಿತ್ತು. ಇದೀಗ ಈ ತಂಡಗಳಿಗೆ ಉಲ್ಲಂಘನೆ ಪ್ರಕರಣಗಳಲ್ಲಿ ತಕ್ಷಣ ಸಾಂಸ್ಥಿಕ ದಿಗ್ಬಂಧನಕ್ಕೆ ಒಳಪಡಿಸಲು ಹಾಗೂ ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ ಎಂದರು.
ಕಳೆದ 24 ಗಂಟೆಗಳಲ್ಲಿ ಗೃಹ ದಿಗ್ಬಂದನ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ 12 ಜನರನ್ನು ಸಾಂಸ್ಥಿಕ ದಿಗ್ಬಂಧನಕ್ಕೆ ಒಳಪಡಿಸಲಾಗಿದ್ದು, 30 ಜನರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ ಎಂದರು. ಈಗಾಗಲೇ 57 ಸಾವಿರ ಜನರು ಪಾಲಿಕೆಯ ವ್ಯಾಪ್ತಿಯಲ್ಲಿ ಗೃಹ ದಿಗ್ಬಂದನಕ್ಕೆ ಒಳಪಟ್ಟಿದ್ದು, ಈ ವರೆಗೆ ಬಂದಿರುವ 1104 ಉಲ್ಲಂಘನೆ ಪ್ರಕರಣಗಳನ್ನು ಪರಿಶೀಲಿಸಲಾಗಿದೆ.
ಇದರಲ್ಲಿ 929 ಪ್ರಕರಣಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಕ್ವಾರಂಟೈನ್ ಇರುವವರ ನೆರೆಹೊರೆಯ ವರು, ಸಾರ್ವಜನಿಕರು ವಾಟ್ಸ್ ಆ್ಯಪ್ 9777-777-684, ದೂ.ಸಂ- 080-4545-1111, ಟ್ವಿಟರ್ ಹ್ಯಾಂಡಲ್@DIPR_COVID19 ಮೂಲಕ ದೂರು ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್