ಪಾನ್ಕಾರ್ಡ್ ಅಪ್ಡೇಟ್ ನೆಪದಲ್ಲಿ ವಂಚನೆ
Team Udayavani, Oct 6, 2022, 1:13 PM IST
ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ಸೈಬರ್ ಕಳ್ಳರು ಪಾನ್ಕಾರ್ಡ್ ಅಪ್ಡೇಟ್ ಮಾಡದಿದ್ದರೆ ಬ್ಯಾಂಕ್ ಖಾತೆ ಬ್ಲಾಕ್ ಆಗುತ್ತದೆ ಎಂದು ನಂಬಿಸಿ ಒಟಿಪಿ ಪಡೆದು 3.97 ಲಕ್ಷ ರೂ. ವಂಚಿಸಿದ್ದಾರೆ.
ಕುಮಾರಕೃಪಾ ರಸ್ತೆಯ ದಿನೇಶ್ ಶೆಟ್ಟಿ (64) ವಂಚನೆಗೊಳಗಾದ ಉದ್ಯಮಿ. ಅ.4ರಂದು ಮಧ್ಯಾಹ್ನ ದಿನೇಶ್ ಶೆಟ್ಟಿಗೆ ಅಪರಿಚಿತನಬ್ಬ ಖಾಸಗಿ ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಕರೆ ಮಾಡಿದ್ದ. ನಂತರ ನಿಮ್ಮ ಪಾನ್ಕಾರ್ಡ್ ಅಪ್ಡೇಟ್ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗುತ್ತದೆ ಎಂದು ನಂಬಿಸಿದ್ದ. ನಂತರ ಎನಿ ಡೆಸ್ಕ್ ಅಪ್ಲಿಕೇಶನ್ ಡೌನ್ಲೋಡ್ ಮಾಡುವಂತೆ ತಿಳಿಸಿ ಒಟಿಪಿಯನ್ನು ಕೇಳಿದ್ದ. ಆತನ ಮಾತನ್ನು ನಂಬಿದ ದಿನೇಶ್ ಶೆಟ್ಟಿ ಮೊಬೈಲ್ಗೆ ಬಂದ ಒಟಿಪಿ ನಂಬರ್ ಹೇಳಿದ್ದರು.
ಇದಾದ ಬಳಿಕ ಕೆಲ ಹೊತ್ತಿನಲ್ಲಿ ದಿನೇಶ್ ಶೆಟ್ಟಿ ಅವರ ಬ್ಯಾಂಕ್ ಖಾತೆಯಿಂದ ಹಂತ-ಹಂತವಾಗಿ ಒಟ್ಟು 3.97 ಲಕ್ಷ ರೂ. ಕಡಿತಗೊಂಡಿತ್ತು. ಹಣ ಕಡಿತಗೊಂಡ ಬಗ್ಗೆ ಮೊಬೈಲ್ಗೆ ಸಂದೇಶ ಬಂದಾಗ ಆತಂಕಗೊಂಡ ದಿನೇಶ್ ಶೆಟ್ಟಿ ಈ ಕುರಿತು ಬ್ಯಾಂಕ್ ಸಿಬ್ಬಂದಿಯನ್ನು ವಿಚಾರಿಸಿದಾಗ ಇದು ಸೈಬರ್ ಕಳ್ಳನ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ