ನಗರದ 723 ರಸ್ತೆಗಳಲ್ಲಿ ಉಚಿತ ಪಾರ್ಕಿಂಗ್‌ ವ್ಯವಸ್ಥೆ

16 ಸಾವಿರ ಬೈಕ್‌, 5 ಸಾವಿರ ಕಾರು ನಿಲುಗಡೆಗೆ ಸ್ಥಳ

Team Udayavani, Nov 13, 2022, 3:45 PM IST

17

ಬೆಂಗಳೂರು: ನಗರ ವಾಹನ ನಿಲುಗಡೆ ಸಮಸ್ಯೆ ನೀಗಿಸುವ ಸಲುವಾಗಿ 723 ರಸ್ತೆಗಳಲ್ಲಿ ಪೇ ಆ್ಯಂಡ್‌ ಪಾರ್ಕಿಂಗ್‌ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. ಆ ರಸ್ತೆಗಳಲ್ಲಿ ಗುತ್ತಿಗೆದಾರರ ಬದಲು ಬಿಬಿಎಂಪಿಯಿಂದಲೇ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ನಗರದಲ್ಲಿ 1 ಕೋಟಿಗೂ ಹೆಚ್ಚಿನ ವಾಹನಗಳಿವೆ. ಹೀಗಾಗಿ ಸಂಚಾರ ದಟ್ಟಣೆಯ ಜತೆಗೆ ವಾಹನ ನಿಲುಗಡೆಗೂ ಸಾಕಷ್ಟು ಸಮಸ್ಯೆಯಾ ಗುತ್ತಿದೆ. ಇದರ ನಿವಾರಣೆಗಾಗಿ ಬಿಬಿಎಂಪಿ ನಗರದ 723 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಆದರೆ, ಈ ವ್ಯವಸ್ಥೆ ಜಾರಿ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್‌ನಲ್ಲಿ ಸಂಪೂರ್ಣವಾಗಿ ಬಿಡ್‌ ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ಮರು ಟೆಂಡರ್‌ ಕರೆಯಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಹೀಗೆ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ವ್ಯವಸ್ಥೆ ಮಾಡುವುದು ಹಾಗೂ ಶುಲ್ಕ ವಸೂಲಿ ಸೇರಿ ನಿರ್ವಹಣೆಗೆ ಗುತ್ತಿಗೆದಾರರನ್ನು ನೇಮಿಸು ವವರೆಗೆ ನಿಗದಿತ ರಸ್ತೆಗಳಲ್ಲಿ ಉಚಿತವಾಗಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗುತ್ತಿದೆ.

ಆಟೋ, ಸೈಕಲ್‌ ನಿಲ್ಲಿಸಲೂ ವ್ಯವಸ್ಥೆ: 8 ವಲಯಗಳಲ್ಲಿ ಎ, ಬಿ ಮತ್ತು ಸಿ ಎಂದು ರಸ್ತೆಗಳನ್ನು ವಿಭಾಗಿಸಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಅದರಲ್ಲಿ ಎ ವಿಭಾಗದ ರಸ್ತೆಗಳಲ್ಲಿ ಕೇವಲ ಕಾರುಗಳ ನಿಲುಗಡೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಉಳಿದಂತೆ ಬಿ ಮತ್ತು ಸಿ ರಸ್ತೆಗಳಲ್ಲಿ ದ್ವಿಚಕ್ರ ವಾಹನ, ಕಾರುಗಳ ನಿಲುಗಡೆಗೆ ಅವಕಾಶ ಕೊಡಲಾಗುತ್ತಿದೆ. ಅವುಗಳ ಜತೆಗೆ ಸೈಕಲ್‌, ಆಟೋ ನಿಲುಗಡೆಗೆ ಸ್ಥಳ ಮೀಸಲಿರಿಸಲಾಗುತ್ತಿದೆ. ಹೀಗೆ ಪೇ ಆ್ಯಂಡ್‌ ಪಾರ್ಕಿಂಗ್‌ ವ್ಯವಸ್ಥೆಯಿಂದ 723 ರಸ್ತೆಗಳಲ್ಲಿ 16 ಸಾವಿರಕ್ಕೂ ಹೆಚ್ಚಿನ ದ್ವಿಚಕ್ರ ಮತ್ತು 5 ಸಾವಿರಕ್ಕೂ ಹೆಚ್ಚಿನ ಕಾರುಗಳ ನಿಲುಗಡೆಗೆ ಸ್ಥಳಾವಕಾಶ ಸಿಗಲಿದೆ. ಆ ಮೂಲಕ ಎಲ್ಲೆಂ ದರಲ್ಲಿ ವಾಹನ ನಿಲುಗಡೆ ಮಾಡುವುದಕ್ಕೆ ಬ್ರೇಕ್‌ ಹಾಕಲಾಗುತ್ತಿದೆ.

ಉಚಿತ ನಿಲುಗಡೆಗೆ ಅವಕಾಶ: ಸದ್ಯ ಬಿಬಿಎಂಪಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ ಜಾರಿ ಕುರಿತಂತೆ 8 ವಲಯಗಳಿಗೆ ಪ್ರತ್ಯೇಕ ಪ್ಯಾಕೇಜ್‌ ಗಳಂತೆ ಟೆಂಡರ್‌ ಪ್ರಕ್ರಿಯೆ ನಡೆಸಿದೆ. ಅದರೆ, ಗುತ್ತಿಗೆದಾರರಿಂದ ಸಮರ್ಪಕ ಬಿಡ್‌ ಸಲ್ಲಿಕೆ ಯಾಗಿರಲಿಲ್ಲ. ಹೀಗಾಗಿ ಮರು ಟೆಂಡರ್‌ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಹೀಗೆ ಗುತ್ತಿಗೆದಾರರ ನೇಮಕ ವಿಳಂಬವಾಗುತ್ತಿರುವ ಕಾರಣ, ನಿಗದಿತ ರಸ್ತೆಗಳಲ್ಲಿ ಬಿಬಿಎಂಪಿ ಯಿಂದಲೇ ವಾಹನ ನಿಲುಗಡೆಗೆ ಮಾರ್ಕಿಂಗ್‌ ಸೇರಿ ಇನ್ನಿತರ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ ಈ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿದರೆ ಯಾವುದೇ ಶುಲ್ಕ ವಸೂಲಿ ಮಾಡದಿರಲು ಬಿಬಿಎಂಪಿ ನಿರ್ಧರಿಸಿದೆ. ಅದರೆ, ಗುತ್ತಿಗೆದಾರರು ನೇಮಕವಾದ ನಂತರದಿಂದ ವಾಹನ ನಿಲುಗಡೆಗೆ ಶುಲ್ಕ ವಸೂಲಿ ಮಾಡಲಾಗುತ್ತದೆ.

ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರ ನೇಮಕಕ್ಕೆ ಮತ್ತೂಮ್ಮೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗುವುದು. ಗುತ್ತಿಗೆದಾರರು ನೇಮಕವಾಗುವವರೆಗೆ ನಿಗದಿತ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಬಿಬಿಎಂಪಿಯಿಂದಲೇ ಮಾರ್ಕಿಂಗ್‌ ಸೇರಿ ಇನ್ನಿತರ ವ್ಯವಸ್ಥೆ ಮಾಡಲಾಗುವುದು. ಜತೆಗೆ ವಾಹನ ನಿಲುಗಡೆ ಶುಲ್ಕ ವಸೂಲಿ ಮಾಡುವುದಿಲ್ಲ. ● ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

-ಗಿರೀಶ್‌ ಗರಗ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.